- Kannada News Photo gallery Cricket photos hardik pandya in post match presentation after India lose against West Indies in second ODI
Hardik Pandya: ಹೀನಾಯ ಸೋಲಿಗೆ ನಾಯಕ ಹಾರ್ದಿಕ್ ಪಾಂಡ್ಯ ದೂರಿದ್ದು ಯಾರನ್ನ ಗೊತ್ತೇ?
IND vs WI 2nd ODI: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದ ಕಾರಣ ಹಾರ್ದಿಕ್ ಪಾಂಡ್ಯ ತಂಡದ ನಾಯತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಹೀನಾಯ ಸೋಲಿನ ಬಳಿಕ ಹಾರ್ದಿಕ್ ಆಡಿದ ಮಾತುಗಳೇನು ಕೇಳಿ.
Updated on: Jul 30, 2023 | 7:30 AM

ಬಾರ್ಬಡೊಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಹಿರಿಯ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ದುರ್ಬಲವಾದಂತೆ ಕಂಡಿತು.

ಬ್ಯಾಟಿಂಗ್ - ಬೌಲಿಂಗ್ ಎರಡೂ ವಿಭಾಗಗಳಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಗೆಲುವು ಕಾಣಲು ಸಾಧ್ಯವಾಗಲಿಲ್ಲ. 6 ವಿಕೆಟ್ಗಳ ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ.

ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದ ಕಾರಣ ಹಾರ್ದಿಕ್ ಪಾಂಡ್ಯ ತಂಡದ ನಾಯತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಹೀನಾಯ ಸೋಲಿನ ಬಳಿಕ ಹಾರ್ದಿಕ್ ಆಡಿದ ಮಾತುಗಳೇನು ಕೇಳಿ.

ನಾವು ಅಂದುಕೊಂಡ ರೀತಿಯಲ್ಲಿ ಬ್ಯಾಟಿಂಗ್ ಮಾಡಲಿಲ್ಲ. ಮೊದಲ ಇನಿಂಗ್ಸ್ ಬಳಿಕ ಎರಡನೇ ಇನ್ನಿಂಗ್ಸ್ಗೆ ವಿಕೆಟ್ ಉತ್ತಮವಾಗಿತ್ತು. ಈ ಸೋಲಿನಿಂದ ನಿರಾಸೆಯಾಗಿದೆ. ಆದರೆ ಈ ಸೋಲಿನಿಂದ ಅನೇಕ ವಿಷಯಗಳನ್ನು ಕಲಿತಿದ್ದೇವೆ ಎಂದು ಹಾರ್ದಿಕ್ ಪಾಂಡ್ಯ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಹೇಳಿದ್ದಾರೆ.

ನಮ್ಮ ಆರಂಭಿಕರು ಬ್ಯಾಟಿಂಗ್ ಮಾಡಿದ ರೀತಿ ಉತ್ತಮವಾಗಿತ್ತು. ಇಶಾನ್ ಕಿಶನ್ ಬ್ಯಾಟಿಂಗ್ ಭಾರತೀಯ ಕ್ರಿಕೆಟ್ಗೆ ಮುಖ್ಯವಾಗಿದೆ. ಶಾರ್ದೂಲ್ ಠಾಕೂರ್ ನಮ್ಮ ಭರವಸೆಯನ್ನು ಜೀವಂತವಾಗಿಟ್ಟರು. ಶಾಯ್ ಹೋಪ್ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ಅವರು ಅಂದುಕೊಂಡಿದ್ದನ್ನು ಸಾಧಿಸಿದರು- ಹಾರ್ದಿಕ್ ಪಾಂಡ್ಯ.

ವಿಶ್ವಕಪ್ಗೆ ಸಿದ್ಧವಾಗಲು ನಾನು ಇನ್ನಷ್ಟು ಹೆಚ್ಚು ಓವರ್ಗಳನ್ನು ಬೌಲ್ ಮಾಡಬೇಕಾಗಿದೆ. ವಿಶ್ವಕಪ್ ವೇಳೆಗೆ ಎಲ್ಲವೂ ಸರಿ ಆಗುತ್ತದೆ ಎಂದು ಅಂದುಕೊಂಡಿದ್ದೇವೆ. ಈಗ ಸರಣಿಯು 1-1 ರಲ್ಲಿ ನಿಂತಿದೆ. ಹೀಗಾಗಿ ಮುಂದಿನ ಪಂದ್ಯ ನೋಡುಗರಿಗೆ ಹಾಗೂ ಆಟಗಾರರಿಗೆ ರೋಚಕವಾಗಿರುತ್ತದೆ ಎಂದು ಹಾರ್ದಿಕ್ ಹೇಳಿದ್ದಾರೆ.

ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 40.5 ಓವರ್ಗಳಲ್ಲಿ 181 ರನ್ಗಳಿಗೆ ಆಲೌಟ್ ಆಯಿತು. ಕಿಶನ್ 55 ರನ್ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರ ಅಜೇಯ 63 ರನ್ಗಳ ನೆರವಿನಿಂದ 36.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಜಯ ಸಾಧಿಸಿತು.
