AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya Fitness: ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಬಿಗ್ ಅಪ್​ಡೇಟ್ ನೀಡಿದ ಜಯ್​ ಶಾ

Hardik Pandya Fitness: ವಿಶ್ವಕಪ್​ನಲ್ಲಿ ಇಂಜುರಿಗೊಂಡಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ವಾಪಸ್ಸಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಗ್ ಅಪ್​ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಯ್​ ಶಾ ಮುಂಬರುವ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಮರಳಬಹುದು ಎಂದಿದ್ದಾರೆ.

ಪೃಥ್ವಿಶಂಕರ
|

Updated on: Dec 10, 2023 | 7:41 AM

Share
ವಿಶ್ವಕಪ್​ನಲ್ಲಿ ಇಂಜುರಿಗೊಂಡಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ವಾಪಸ್ಸಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಗ್ ಅಪ್​ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಯ್​ ಶಾ ಮುಂಬರುವ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಮರಳಬಹುದು ಎಂದಿದ್ದಾರೆ.

ವಿಶ್ವಕಪ್​ನಲ್ಲಿ ಇಂಜುರಿಗೊಂಡಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ವಾಪಸ್ಸಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಗ್ ಅಪ್​ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಯ್​ ಶಾ ಮುಂಬರುವ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಮರಳಬಹುದು ಎಂದಿದ್ದಾರೆ.

1 / 7
ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಫಿಟ್ ಆಗಬಹುದು ಎಂದು ಜಯ್ ಶಾ ಪಿಟಿಐಗೆ ತಿಳಿಸಿದ್ದಾರೆ.

ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಫಿಟ್ ಆಗಬಹುದು ಎಂದು ಜಯ್ ಶಾ ಪಿಟಿಐಗೆ ತಿಳಿಸಿದ್ದಾರೆ.

2 / 7
ಅಫ್ಘಾನಿಸ್ತಾನ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತದಲ್ಲಿಯೇ ಆಡಬೇಕಿದೆ. ಉಭಯ ದೇಶಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11, 14 ಮತ್ತು 17 ರಂದು ನಡೆಯಲಿದೆ.

ಅಫ್ಘಾನಿಸ್ತಾನ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತದಲ್ಲಿಯೇ ಆಡಬೇಕಿದೆ. ಉಭಯ ದೇಶಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11, 14 ಮತ್ತು 17 ರಂದು ನಡೆಯಲಿದೆ.

3 / 7
2023 ರ ವಿಶ್ವಕಪ್‌ನಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಇಡೀ ಟೂರ್ನಿಯಿಂದ ಹೊರಗುಳಿಯಬೇಕಾಯಿತು. ಅಂದಿನಿಂದ ಅವರು ತಂಡದಿಂದ ಹೊರಗುಳಿದಿದ್ದಾರೆ. ಡಿಸೆಂಬರ್ 10 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಅವರು ಯಾವುದೇ ತಂಡದ ಬಾಗವಾಗಿಲ್ಲ.

2023 ರ ವಿಶ್ವಕಪ್‌ನಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಇಡೀ ಟೂರ್ನಿಯಿಂದ ಹೊರಗುಳಿಯಬೇಕಾಯಿತು. ಅಂದಿನಿಂದ ಅವರು ತಂಡದಿಂದ ಹೊರಗುಳಿದಿದ್ದಾರೆ. ಡಿಸೆಂಬರ್ 10 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಅವರು ಯಾವುದೇ ತಂಡದ ಬಾಗವಾಗಿಲ್ಲ.

4 / 7
ವಾಸ್ತವವಾಗಿ 2023 ರ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಲೀಗ್ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಪಂದ್ಯದ ಮಧ್ಯದಲ್ಲಿಯೇ ಮೈದಾನವನ್ನು ತೊರೆದು ಹೊರಗೆ ಹೋಗಿದ್ದರು. ಇದಾದ ನಂತರ ಅವರು ಬ್ಯಾಟಿಂಗ್‌ಗೂ ಸಹ ಬಂದಿರಲಿಲ್ಲ.

ವಾಸ್ತವವಾಗಿ 2023 ರ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಲೀಗ್ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಪಂದ್ಯದ ಮಧ್ಯದಲ್ಲಿಯೇ ಮೈದಾನವನ್ನು ತೊರೆದು ಹೊರಗೆ ಹೋಗಿದ್ದರು. ಇದಾದ ನಂತರ ಅವರು ಬ್ಯಾಟಿಂಗ್‌ಗೂ ಸಹ ಬಂದಿರಲಿಲ್ಲ.

5 / 7
ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲದೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಕಾರಣ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಮಾಡಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಸೂರ್ಯನೇ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲದೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಕಾರಣ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಮಾಡಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಸೂರ್ಯನೇ ನಾಯಕರಾಗಿ ಆಯ್ಕೆಯಾಗಿದ್ದಾರೆ.

6 / 7
ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಅವರು ಜನವರಿಯಲ್ಲಿ ನಡೆಯಲ್ಲಿರುವ ಅಫ್ಘಾನಿಸ್ತಾನ ವಿರುದ್ಧದ ತವರಿನ ಸರಣಿಯಲ್ಲಿ ತಂಡಕ್ಕೆ ಮರಳಲಿದ್ದಾರೆ ಎಂದು ವರದಿಗಳಿವೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡದ ಏಕೈಕ ಟಿ20 ಸರಣಿ ಇದಾಗಿದೆ.

ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಅವರು ಜನವರಿಯಲ್ಲಿ ನಡೆಯಲ್ಲಿರುವ ಅಫ್ಘಾನಿಸ್ತಾನ ವಿರುದ್ಧದ ತವರಿನ ಸರಣಿಯಲ್ಲಿ ತಂಡಕ್ಕೆ ಮರಳಲಿದ್ದಾರೆ ಎಂದು ವರದಿಗಳಿವೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡದ ಏಕೈಕ ಟಿ20 ಸರಣಿ ಇದಾಗಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​