Hardik Pandya: ಹಾರ್ದಿಕ್ ಪಾಂಡ್ಯರ ಶೇ.70 ರಷ್ಟು ಆಸ್ತಿ ಹೆಂಡತಿ ಪಾಲು..?

Hardik Pandya-Natasa Stankovic: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. 14 ಪಂದ್ಯಗಳಲ್ಲಿ ಮುಂಬೈ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದ ಪಾಂಡ್ಯ ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದ್ದರು. ಅಲ್ಲದೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿತ್ತು. ಈ ಅಭಿಯಾನದ ಮುಕ್ತಾಯದ ಬೆನ್ನಲ್ಲೇ ಇದೀಗ ಹಾರ್ದಿಕ್ ಪಾಂಡ್ಯರ ವೈಯುಕ್ತಿಕ ಜೀವನ ಚರ್ಚೆಗೆ ಕಾರಣವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 25, 2024 | 12:08 PM

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ನತಾಶಾ ಸ್ಟಾಂಕೋವಿಕ್ (Natasa Stankovic) ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತೆ ಇದೀಗ ಇವರಿಬ್ಬರ ನಡುವಣ ಮನಸ್ತಾಪ ಬಹಿರಂಗವಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ನತಾಶಾ ಸ್ಟಾಂಕೋವಿಕ್ (Natasa Stankovic) ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತೆ ಇದೀಗ ಇವರಿಬ್ಬರ ನಡುವಣ ಮನಸ್ತಾಪ ಬಹಿರಂಗವಾಗಿದೆ.

1 / 6
ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ​ ಯಾವುದೇ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿರಲಿಲ್ಲ.

ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ​ ಯಾವುದೇ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿರಲಿಲ್ಲ.

2 / 6
ಅಷ್ಟೇ ಅಲ್ಲದೆ ಮಾರ್ಚ್ 4 ನತಾಶಾ ಅವರ ಜನ್ಮದಿನ. ಈ ದಿನದಂದು ಹಾರ್ದಿಕ್ ಪಾಂಡ್ಯ ಪತ್ನಿಗೆ ಸೋಷಿಯಲ್ ಮೀಡಿಯಾದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಹಾರ್ದಿಕ್ ಪಾಂಡ್ಯ ಒಂದೇ ಒಂದು ಪೋಸ್ಟ್ ಹಾಕಿರಲಿಲ್ಲ.

ಅಷ್ಟೇ ಅಲ್ಲದೆ ಮಾರ್ಚ್ 4 ನತಾಶಾ ಅವರ ಜನ್ಮದಿನ. ಈ ದಿನದಂದು ಹಾರ್ದಿಕ್ ಪಾಂಡ್ಯ ಪತ್ನಿಗೆ ಸೋಷಿಯಲ್ ಮೀಡಿಯಾದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಹಾರ್ದಿಕ್ ಪಾಂಡ್ಯ ಒಂದೇ ಒಂದು ಪೋಸ್ಟ್ ಹಾಕಿರಲಿಲ್ಲ.

3 / 6
ಅತ್ತ ನತಾಶಾ ಸ್ಟಾಂಕೋವಿಕ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಪಾಂಡ್ಯ ಉಪನಾಮವನ್ನು ತೆಗೆದು ಹಾಕಿದ್ದಾರೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗಿನ ಒಂದೇ ಒಂದು ಫೋಟೋವನ್ನು ಶೇರ್ ಮಾಡಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದೆ.

ಅತ್ತ ನತಾಶಾ ಸ್ಟಾಂಕೋವಿಕ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಪಾಂಡ್ಯ ಉಪನಾಮವನ್ನು ತೆಗೆದು ಹಾಕಿದ್ದಾರೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗಿನ ಒಂದೇ ಒಂದು ಫೋಟೋವನ್ನು ಶೇರ್ ಮಾಡಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದೆ.

4 / 6
ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದಾಗಿ ಪಾಂಡ್ಯ ತಮ್ಮ ಮುಂದಿನ ನಡೆಯ ಬಗ್ಗೆ ಎಲ್ಲೂ ಕೂಡ ಮಾತನಾಡುತ್ತಿಲ್ಲ ಎಂದು ವರದಿಯಾಗಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದಾಗಿ ಪಾಂಡ್ಯ ತಮ್ಮ ಮುಂದಿನ ನಡೆಯ ಬಗ್ಗೆ ಎಲ್ಲೂ ಕೂಡ ಮಾತನಾಡುತ್ತಿಲ್ಲ ಎಂದು ವರದಿಯಾಗಿದೆ.

5 / 6
ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಜೊತೆಯಾಗಿ ಬಾಳುವಂತಾಗಲಿ ಎಂಬುದೇ ಅಭಿಮಾನಿಗಳ ಆಶಯ.

ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಜೊತೆಯಾಗಿ ಬಾಳುವಂತಾಗಲಿ ಎಂಬುದೇ ಅಭಿಮಾನಿಗಳ ಆಶಯ.

6 / 6
Follow us
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!