ಟೀಮ್ ಇಂಡಿಯಾಗೆ ಸ್ಟಾರ್ ಆಲ್​ರೌಂಡರ್ ಕಂಬ್ಯಾಕ್: ಉಪನಾಯಕ ಡೌಟ್..!

Updated on: Dec 03, 2025 | 8:53 AM

India vs South Africa:  ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿದೆ.

1 / 5
ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಉಭಯ ತಂಡಗಳ ನಡುವಣ ಟಿ20 ಸರಣಿ ಶುರುವಾಗಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಂಬ್ಯಾಕ್ ಮಾಡಲಿದ್ದಾರೆ.

ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಉಭಯ ತಂಡಗಳ ನಡುವಣ ಟಿ20 ಸರಣಿ ಶುರುವಾಗಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಂಬ್ಯಾಕ್ ಮಾಡಲಿದ್ದಾರೆ.

2 / 5
ಏಷ್ಯಾಕಪ್ ಟೂರ್ನಿ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಯಾವುದೇ ಮ್ಯಾಚ್ ಆಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಪಾಂಡ್ಯ ಬರೋಡ ಪರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಆಯ್ಕೆ ಸಮಿತಿಗೆ ತಮ್ಮ ಫಿಟ್​ನೆಸ್ ಸಾಬೀತುಪಡಿಸಿದ್ದಾರೆ.

ಏಷ್ಯಾಕಪ್ ಟೂರ್ನಿ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಯಾವುದೇ ಮ್ಯಾಚ್ ಆಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಪಾಂಡ್ಯ ಬರೋಡ ಪರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಆಯ್ಕೆ ಸಮಿತಿಗೆ ತಮ್ಮ ಫಿಟ್​ನೆಸ್ ಸಾಬೀತುಪಡಿಸಿದ್ದಾರೆ.

3 / 5
ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಖಚಿತವಾಗಿದೆ. ಇತ್ತ ಪಾಂಡ್ಯ ಅವರ ರಿ ಎಂಟ್ರಿಯಿಂದಾಗಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ತಂಡದಿಂದ ಹೊರಬೀಳುವ ಸಾಧ್ಯತೆಯಿದೆ.

ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಖಚಿತವಾಗಿದೆ. ಇತ್ತ ಪಾಂಡ್ಯ ಅವರ ರಿ ಎಂಟ್ರಿಯಿಂದಾಗಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ತಂಡದಿಂದ ಹೊರಬೀಳುವ ಸಾಧ್ಯತೆಯಿದೆ.

4 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಮುಂಬರುವ ಸರಣಿಯಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದಾಗ್ಯೂ ಗಿಲ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಕಸರತ್ತು ಶುರು ಮಾಡಿದ್ದಾರೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತ ಟಿ20 ತಂಡದ ಉಪನಾಯಕ ಶುಭ್​ಮನ್ ಗಿಲ್ ಮುಂಬರುವ ಸರಣಿಯಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದಾಗ್ಯೂ ಗಿಲ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಕಸರತ್ತು ಶುರು ಮಾಡಿದ್ದಾರೆ.

5 / 5
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಶುಭ್​ಮನ್ ಗಿಲ್ ಅಲಭ್ಯರಾದರೆ ಯಶಸ್ವಿ ಜೈಸ್ವಾಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಗಿಲ್ ಹೊರಗುಳಿದ ಕಾರಣ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರನ್ನೇ ಟಿ20 ಸರಣಿಗೂ ಬದಲಿ ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಶುಭ್​ಮನ್ ಗಿಲ್ ಅಲಭ್ಯರಾದರೆ ಯಶಸ್ವಿ ಜೈಸ್ವಾಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಗಿಲ್ ಹೊರಗುಳಿದ ಕಾರಣ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರನ್ನೇ ಟಿ20 ಸರಣಿಗೂ ಬದಲಿ ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.