AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya Injury: ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ: ಗಿಲ್ ಬಳಿಕ ಮತ್ತೊಬ್ಬ ಆಟಗಾರ ಹೊರಕ್ಕೆ?

India vs Australia, ICC World Cup 2023: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕಣಕ್ಕಿಳಿಯುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎಂದು ವರದಿಗಳಿವೆ.

Vinay Bhat
|

Updated on:Oct 07, 2023 | 9:38 AM

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಅಭಿಯಾನವನ್ನು ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ಪ್ರಾರಂಭಿಸಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಅಭಿಯಾನವನ್ನು ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ಪ್ರಾರಂಭಿಸಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ.

1 / 7
ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇವರು ಆಡುವುದಿಲ್ಲ. ಇವರಿಗೆ ಡೆಂಗ್ಯೂ ಸೋಂಕು ದೃಢವಾಗಿದ್ದು, 7-10 ದಿನಗಳ ಕಾಲ ಯಾವುದೇ ಪಂದ್ಯಕ್ಕೆ ಲಭ್ಯ ಇರುವುದಿಲ್ಲ ಎಂದು ವರದಿಗಳಿವೆ.

ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇವರು ಆಡುವುದಿಲ್ಲ. ಇವರಿಗೆ ಡೆಂಗ್ಯೂ ಸೋಂಕು ದೃಢವಾಗಿದ್ದು, 7-10 ದಿನಗಳ ಕಾಲ ಯಾವುದೇ ಪಂದ್ಯಕ್ಕೆ ಲಭ್ಯ ಇರುವುದಿಲ್ಲ ಎಂದು ವರದಿಗಳಿವೆ.

2 / 7
ಗಿಲ್ ಅನುಪಸ್ಥಿತಿಯ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ತಂಡದ ಅಭ್ಯಾಸದ ಅವಧಿಯಲ್ಲಿ ಸ್ಟಾರ್ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎಂದು ವರದಿಗಳಿವೆ. RevSportz ವರದಿಯ ಪ್ರಕಾರ, ಪಾಂಡ್ಯ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಬೆರಳಿಗೆ ಪೆಟ್ಟಾಗಿದೆ.

ಗಿಲ್ ಅನುಪಸ್ಥಿತಿಯ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ತಂಡದ ಅಭ್ಯಾಸದ ಅವಧಿಯಲ್ಲಿ ಸ್ಟಾರ್ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎಂದು ವರದಿಗಳಿವೆ. RevSportz ವರದಿಯ ಪ್ರಕಾರ, ಪಾಂಡ್ಯ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಬೆರಳಿಗೆ ಪೆಟ್ಟಾಗಿದೆ.

3 / 7
ಹಾರ್ದಿಕ್ ಪಾಂಡ್ಯ ಅವರ ಗಾಯದ ಪ್ರಮಾಣ ಎಷ್ಟು ಎಂಬುದು ತಿಳಿದುಬಂದಿಲ್ಲ. ಆದರೆ, ಅವರು ಇಂಜುರಿಗೆ ತುತ್ತಾದ ಬಳಿಕ ಬ್ಯಾಟಿಂಗ್ ಮಾಡಲಿಲ್ಲ. ಅಭ್ಯಾಸದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ಇವರು ನಾಳಿನ ಪಂದ್ಯಕ್ಕೆ ಲಭ್ಯರಿರುತ್ತಾರ ಎಂಬ ಬಗ್ಗೆ ಕೂಡ ಖಚಿತ ಮಾಹಿತಿಯಿಲ್ಲ.

ಹಾರ್ದಿಕ್ ಪಾಂಡ್ಯ ಅವರ ಗಾಯದ ಪ್ರಮಾಣ ಎಷ್ಟು ಎಂಬುದು ತಿಳಿದುಬಂದಿಲ್ಲ. ಆದರೆ, ಅವರು ಇಂಜುರಿಗೆ ತುತ್ತಾದ ಬಳಿಕ ಬ್ಯಾಟಿಂಗ್ ಮಾಡಲಿಲ್ಲ. ಅಭ್ಯಾಸದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ಇವರು ನಾಳಿನ ಪಂದ್ಯಕ್ಕೆ ಲಭ್ಯರಿರುತ್ತಾರ ಎಂಬ ಬಗ್ಗೆ ಕೂಡ ಖಚಿತ ಮಾಹಿತಿಯಿಲ್ಲ.

4 / 7
ಹಾರ್ದಿಕ್ ವೈಟ್-ಬಾಲ್ ಸ್ವರೂಪದಲ್ಲಿ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ. ನಂ. 6 ರಲ್ಲಿ, ಅವರು ಫಿನಿಶರ್ ಪಾತ್ರವನ್ನು ವಹಿಸುತ್ತಾರೆ ಮತ್ತು ಮಧ್ಯಮ ಓವರ್‌ಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಕೂಡ ಆಗಿದ್ದಾರೆ.

ಹಾರ್ದಿಕ್ ವೈಟ್-ಬಾಲ್ ಸ್ವರೂಪದಲ್ಲಿ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ. ನಂ. 6 ರಲ್ಲಿ, ಅವರು ಫಿನಿಶರ್ ಪಾತ್ರವನ್ನು ವಹಿಸುತ್ತಾರೆ ಮತ್ತು ಮಧ್ಯಮ ಓವರ್‌ಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಕೂಡ ಆಗಿದ್ದಾರೆ.

5 / 7
ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ 2023 ರ ಫೈನಲ್‌ನಲ್ಲಿ ಹಾರ್ದಿಕ್ ಕೊನೆಯ ಬಾರಿಗೆ ಭಾರತ ಪರ ಕಣಕ್ಕಿಳಿದಿದ್ದರು. ಆ ಪಂದ್ಯದಲ್ಲಿ ಎಸೆದ 2.2 ಓವರ್‌ಗಳಲ್ಲಿ ಮೂರು ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.

ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ 2023 ರ ಫೈನಲ್‌ನಲ್ಲಿ ಹಾರ್ದಿಕ್ ಕೊನೆಯ ಬಾರಿಗೆ ಭಾರತ ಪರ ಕಣಕ್ಕಿಳಿದಿದ್ದರು. ಆ ಪಂದ್ಯದಲ್ಲಿ ಎಸೆದ 2.2 ಓವರ್‌ಗಳಲ್ಲಿ ಮೂರು ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.

6 / 7
ಶುಭ್​ಮನ್ ಗಿಲ್ ಆಡದಿರುವ ಕಾರಣ ಅವರ ಜಾಗದಲ್ಲಿ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಇಶಾನ್ ಕಿಶನ್ ಆಡಲಿದ್ದಾರೆ. ಆದರೆ, ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಯಾರಿಗೆ ಸ್ಥಾನ ಎಂಬುದು ಕುತೂಹಲ ಕೆರಳಿಸಿದೆ. ಅಶ್ವಿನ್ ಆಡಲಿರುವ ಕಾರಣ ಶಾರ್ದೂಲ್ ಥಾಕೂರ್ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಎಲ್ಲಾದರು ಪಾಂಡ್ಯ ಗುಣಮುಖರಾಗದಿದ್ದರೆ ಥಾಕೂರ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಶುಭ್​ಮನ್ ಗಿಲ್ ಆಡದಿರುವ ಕಾರಣ ಅವರ ಜಾಗದಲ್ಲಿ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಇಶಾನ್ ಕಿಶನ್ ಆಡಲಿದ್ದಾರೆ. ಆದರೆ, ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಯಾರಿಗೆ ಸ್ಥಾನ ಎಂಬುದು ಕುತೂಹಲ ಕೆರಳಿಸಿದೆ. ಅಶ್ವಿನ್ ಆಡಲಿರುವ ಕಾರಣ ಶಾರ್ದೂಲ್ ಥಾಕೂರ್ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಎಲ್ಲಾದರು ಪಾಂಡ್ಯ ಗುಣಮುಖರಾಗದಿದ್ದರೆ ಥಾಕೂರ್ ಕಣಕ್ಕಿಳಿಯುವ ಸಾಧ್ಯತೆ ಇದೆ.

7 / 7

Published On - 9:33 am, Sat, 7 October 23

Follow us
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ