AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ದೀರ್ಘಾವಧಿಯ ಕ್ರಿಕೆಟ್​ಗೆ ಹಾರ್ದಿಕ್ ಪಾಂಡ್ಯ ವಿದಾಯ..?

Hardik Pandya Test retirement: ಹಾರ್ದಿಕ್ ಪಾಂಡ್ಯ ಅವರ ಅತೀ ದೊಡ್ಡ ಸಮಸ್ಯೆ ಬೌಲಿಂಗ್. ಕಳೆದ ಒಂದು ವರ್ಷದಲ್ಲಿ ಪಾಂಡ್ಯ ಕೇವಲ 46 ಓವರ್‌ಗಳನ್ನು ಮಾತ್ರ ಎಸೆದಿದ್ದಾರೆ. ಇದೇ ಕಾರಣದಿಂದ ಇದೀಗ ತಂಡದಿಂದ ಕೂಡ ಕೈ ಬಿಡಲಾಗಿದೆ.

TV9 Web
| Edited By: |

Updated on: Dec 07, 2021 | 10:19 PM

Share
T20 ವಿಶ್ವಕಪ್ 2021 ರಲ್ಲಿ ಅತ್ಯಂತ ಕಳಪೆ ಪ್ರದರ್ಶನದ ನೀಡಿದ ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ದೀರ್ಘಾವಧಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಬೆನ್ನುನೋವಿನಿಂದ ಬಳಲುತ್ತಿದ್ದು, ಹೀಗಾಗಿ ಟೆಸ್ಟ್ ಮಾದರಿಯಿಂದ ನಿವೃತ್ತಿಯಾಗುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

T20 ವಿಶ್ವಕಪ್ 2021 ರಲ್ಲಿ ಅತ್ಯಂತ ಕಳಪೆ ಪ್ರದರ್ಶನದ ನೀಡಿದ ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ದೀರ್ಘಾವಧಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಬೆನ್ನುನೋವಿನಿಂದ ಬಳಲುತ್ತಿದ್ದು, ಹೀಗಾಗಿ ಟೆಸ್ಟ್ ಮಾದರಿಯಿಂದ ನಿವೃತ್ತಿಯಾಗುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇನ್‌ಸೈಡ್ ಸ್ಪೋರ್ಟ್‌ನಲ್ಲಿ ಪ್ರಕಟವಾದ ಸುದ್ದಿಯ ಪ್ರಕಾರ, 'ಹಾರ್ದಿಕ್ ಪಾಂಡ್ಯ ಅವರು ತಮ್ಮ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಟೆಸ್ಟ್‌ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಅವರು ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಂಡಳಿಗೆ ತಿಳಿಸಿಲ್ಲ. ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಾಂಡ್ಯ ಕಂಬ್ಯಾಕ್ ಮಾಡುವ ಯೋಜನೆಯಲ್ಲಿದ್ದಾರೆ. ಆದರೆ ಗಾಯದ ಕಾರಣ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ಕೂಡ ಹೊರಬಿದ್ದಿದ್ದಾರೆ. ಹೀಗಾಗಿ ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್​ ಬಗ್ಗೆ ಗಮನಹರಿಸಲು ಪಾಂಡ್ಯ ಚಿಂತಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್‌ಸೈಡ್ ಸ್ಪೋರ್ಟ್‌ನಲ್ಲಿ ಪ್ರಕಟವಾದ ಸುದ್ದಿಯ ಪ್ರಕಾರ, 'ಹಾರ್ದಿಕ್ ಪಾಂಡ್ಯ ಅವರು ತಮ್ಮ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಟೆಸ್ಟ್‌ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಅವರು ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಂಡಳಿಗೆ ತಿಳಿಸಿಲ್ಲ. ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಾಂಡ್ಯ ಕಂಬ್ಯಾಕ್ ಮಾಡುವ ಯೋಜನೆಯಲ್ಲಿದ್ದಾರೆ. ಆದರೆ ಗಾಯದ ಕಾರಣ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ಕೂಡ ಹೊರಬಿದ್ದಿದ್ದಾರೆ. ಹೀಗಾಗಿ ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್​ ಬಗ್ಗೆ ಗಮನಹರಿಸಲು ಪಾಂಡ್ಯ ಚಿಂತಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಹಾರ್ದಿಕ್ ಪಾಂಡ್ಯ 2019 ರಿಂದ ಬೆನ್ನು ನೋವನಿಂದ ಬಳಲುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದರೂ ಸಂಪೂರ್ಣ ಫಿಟ್​ನೆಸ್ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಬೌಲಿಂಗ್ ಮಾಡುವುದನ್ನು ಪಾಂಡ್ಯ ನಿಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆಯಬೇಕಿದ್ದರೆ ಬೌಲಿಂಗ್ ಮಾಡಲೇಬೇಕಾಗಿದೆ. ಈಗಾಗಲೇ ಶಾರ್ದೂಲ್ ಠಾಕೂರ್ ಹಾಗೂ ವೆಂಕಟೇಶ್ ಅಯ್ಯರ್ ಆಲ್​ರೌಂಡರ್​​ಗಳಾಗಿ ತಂಡದಲ್ಲಿದ್ದಾರೆ. ಹೀಗಾಗಿ ಈ ಇಬ್ಬರಿಗಿಂತ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಪಾಂಡ್ಯಗೆ ಅವಕಾಶ ಸಿಗಲಿದೆ.

ಹಾರ್ದಿಕ್ ಪಾಂಡ್ಯ 2019 ರಿಂದ ಬೆನ್ನು ನೋವನಿಂದ ಬಳಲುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದರೂ ಸಂಪೂರ್ಣ ಫಿಟ್​ನೆಸ್ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಬೌಲಿಂಗ್ ಮಾಡುವುದನ್ನು ಪಾಂಡ್ಯ ನಿಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆಯಬೇಕಿದ್ದರೆ ಬೌಲಿಂಗ್ ಮಾಡಲೇಬೇಕಾಗಿದೆ. ಈಗಾಗಲೇ ಶಾರ್ದೂಲ್ ಠಾಕೂರ್ ಹಾಗೂ ವೆಂಕಟೇಶ್ ಅಯ್ಯರ್ ಆಲ್​ರೌಂಡರ್​​ಗಳಾಗಿ ತಂಡದಲ್ಲಿದ್ದಾರೆ. ಹೀಗಾಗಿ ಈ ಇಬ್ಬರಿಗಿಂತ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಪಾಂಡ್ಯಗೆ ಅವಕಾಶ ಸಿಗಲಿದೆ.

3 / 5
ಆದರೆ ಹಾರ್ದಿಕ್ ಪಾಂಡ್ಯ ಅವರ ಅತೀ ದೊಡ್ಡ ಸಮಸ್ಯೆ ಬೌಲಿಂಗ್. ಕಳೆದ ಒಂದು ವರ್ಷದಲ್ಲಿ ಪಾಂಡ್ಯ ಒಟ್ಟು 46 ಓವರ್‌ಗಳನ್ನು ಮಾತ್ರ ಮಾಡಿದ್ದಾರೆ. ಇದೇ ಕಾರಣದಿಂದ ಇದೀಗ ತಂಡದಿಂದ ಕೂಡ ಕೈ ಬಿಡಲಾಗಿದೆ. ಅಷ್ಟೇ ಅಲ್ಲದೆ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಬಿಸಿಸಿಐ ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಹಾರ್ದಿಕ್ ಪಾಂಡ್ಯ ಅವರ ಅತೀ ದೊಡ್ಡ ಸಮಸ್ಯೆ ಬೌಲಿಂಗ್. ಕಳೆದ ಒಂದು ವರ್ಷದಲ್ಲಿ ಪಾಂಡ್ಯ ಒಟ್ಟು 46 ಓವರ್‌ಗಳನ್ನು ಮಾತ್ರ ಮಾಡಿದ್ದಾರೆ. ಇದೇ ಕಾರಣದಿಂದ ಇದೀಗ ತಂಡದಿಂದ ಕೂಡ ಕೈ ಬಿಡಲಾಗಿದೆ. ಅಷ್ಟೇ ಅಲ್ಲದೆ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಬಿಸಿಸಿಐ ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

4 / 5
ಹೀಗಾಗಿಯೇ ಹಾರ್ದಿಕ್ ಪಾಂಡ್ಯ ಪ್ರಸ್ತುತ ತಮ್ಮ ಫಿಟ್ನೆಸ್ ಬಗ್ಗೆ ಗಮನಹರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಜಯ್ ಹಜಾರೆ ಟ್ರೋಫಿಯಿಂದ ಕೂಡ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್​ ಕ್ರಿಕೆಟ್​ಗೆ ಗುಡ್​ ಬೈ ಹೇಳಲಿದ್ದಾರೆ. ಏಕೆಂದರೆ ಇನ್ನೆರಡು ವರ್ಷಗಳಲ್ಲಿ ಟಿ20 ಮತ್ತು ಏಕದಿನ ವಿಶ್ವಕಪ್ ಬರಲಿದ್ದು, ಆ ವೇಳೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ರಾಷ್ಟ್ರೀಯ ತಂಡಕ್ಕೆ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ ಹಾರ್ದಿಕ್ ಪಾಂಡ್ಯ.

ಹೀಗಾಗಿಯೇ ಹಾರ್ದಿಕ್ ಪಾಂಡ್ಯ ಪ್ರಸ್ತುತ ತಮ್ಮ ಫಿಟ್ನೆಸ್ ಬಗ್ಗೆ ಗಮನಹರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಜಯ್ ಹಜಾರೆ ಟ್ರೋಫಿಯಿಂದ ಕೂಡ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್​ ಕ್ರಿಕೆಟ್​ಗೆ ಗುಡ್​ ಬೈ ಹೇಳಲಿದ್ದಾರೆ. ಏಕೆಂದರೆ ಇನ್ನೆರಡು ವರ್ಷಗಳಲ್ಲಿ ಟಿ20 ಮತ್ತು ಏಕದಿನ ವಿಶ್ವಕಪ್ ಬರಲಿದ್ದು, ಆ ವೇಳೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ರಾಷ್ಟ್ರೀಯ ತಂಡಕ್ಕೆ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ ಹಾರ್ದಿಕ್ ಪಾಂಡ್ಯ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ