Rohit Sharma: ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಭಾರತ ಟಿ20 ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದು ಯಾರು? ಎಂಬುದೇ ಕುತೂಹಲ. ಒಂದೆಡೆ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದ ಪಾಂಡ್ಯ ಇದ್ದರೆ, ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಹೆಸರು ಕಾಣಿಸಿಕೊಂಡಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರಿಗೆ ಭಾರತ ಟಿ20 ತಂಡದ ನಾಯಕತ್ವ ಒಲಿಯಲಿದೆ.
ಭಾರತ ಟಿ20 ತಂಡದ ನೂತನ ನಾಯಕನ ರೇಸ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.
1 / 5
ಅದರಂತೆ ಇದೀಗ ಭಾರತ ಟಿ20 ತಂಡದ ನಾಯಕರುಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಹೆಸರುಗಳು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಭಾರತ ಟಿ20 ತಂಡದ ಖಾಯಂ ನಾಯಕನಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.
2 / 5
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಜೊತೆ ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್, ಸೂರ್ಯಕುಮಾರ್ ಹೆಸರುಗಳು ನಾಯಕತ್ವದ ರೇಸ್ನಲ್ಲಿ ಕೇಳಿ ಬಂದಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಹೆಸರುಗಳು ಮಾತ್ರ ಮುಂಚೂಣಿಯಲ್ಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಅಥವಾ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.
3 / 5
ಏಕದಿನ ಮತ್ತು ಟೆಸ್ಟ್ ತಂಡದ ನಾಯಕರಾಗಿ ಮುಂದಿನ ವರ್ಷದವರೆಗೆ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಟಿ20 ತಂಡದ ನಾಯಕ ಮಾತ್ರ ಬದಲಾಗಲಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ನಾಯಕರಾಗುವುದು ಖಚಿತ ಎನ್ನಲಾಗಿತ್ತು. ಆದರೀಗ ಸೂರ್ಯಕುಮಾರ್ ಹೆಸರು ಮುಂಚೂಣಿಗೆ ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.
4 / 5
ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು 16 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 10 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿತ್ತು. ಹಾಗೆಯೇ ಸೂರ್ಯಕುಮಾರ್ ಯಾದವ್ 7 ಮ್ಯಾಚ್ಗಳಲ್ಲಿ ಭಾರತ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಇವರಿಬ್ಬರಲ್ಲಿ ಯಾರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಿದ್ದಾರೆ ಕಾದು ನೋಡಬೇಕಿದೆ.