AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ 4 ವಾರ ಕಣಕ್ಕಿಳಿಯುವಂತಿಲ್ಲ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಲಭ್ಯರಾಗುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Sep 30, 2025 | 3:10 PM

Share
ಏಷ್ಯಾಕಪ್ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಏಷ್ಯಾಕಪ್ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 5
ಆದರೆ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್​ನ ಸೂಪರ್​-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಕ್ವಾಡ್ರೈಸೆಪ್ಸ್ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿಯೇ ಅವರು ಪಾಕಿಸ್ತಾನ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಆದರೆ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್​ನ ಸೂಪರ್​-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಕ್ವಾಡ್ರೈಸೆಪ್ಸ್ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿಯೇ ಅವರು ಪಾಕಿಸ್ತಾನ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

2 / 5
ಇದೀಗ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಲ್ಲಿ ಅವರ ಎಡ ಕಾಲಿನ ಸ್ನಾಯುಗಳಲ್ಲಿ (ಕ್ವಾಡ್ರೈಸೆಪ್ಸ್) ಸಮಸ್ಯೆ ಇರುವುದು ಕಂಡು ಬಂದಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಲ್ಲಿ ಅವರ ಎಡ ಕಾಲಿನ ಸ್ನಾಯುಗಳಲ್ಲಿ (ಕ್ವಾಡ್ರೈಸೆಪ್ಸ್) ಸಮಸ್ಯೆ ಇರುವುದು ಕಂಡು ಬಂದಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ನಾಲ್ಕು ವಾರಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಒಟ್ಟು 8 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

ಈ ನಾಲ್ಕು ವಾರಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಒಟ್ಟು 8 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

4 / 5
ಇದೀಗ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿರುವ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿಯುವುದು ಖಚಿತ. ಅಲ್ಲದೆ ನವೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

ಇದೀಗ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿರುವ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿಯುವುದು ಖಚಿತ. ಅಲ್ಲದೆ ನವೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!