AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಶಾರ್ದೂಲ್ ಠಾಕೂರ್ ಹ್ಯಾಟ್ರಿಕ್ ವಿಕೆಟ್; ಎರಡಂಕಿ ಮೊತ್ತಕ್ಕೆ ಎದುರಾಳಿ ಆಲೌಟ್

Shardul Thakur's Ranji Hattrick: ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿರುವ ಶಾರ್ದೂಲ್ ಠಾಕೂರ್ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹ್ಯಾಟ್ರಿಕ್ ಸೇರಿದಂತೆ 4 ವಿಕೆಟ್ ಪಡೆದು ತಮ್ಮ ತಂಡ ಮೇಲುಗೈ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಶಾರ್ದೂಲ್ ಅವರ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದೆ.

ಪೃಥ್ವಿಶಂಕರ
|

Updated on: Jan 30, 2025 | 4:31 PM

Share
ಒಂದೆಡೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ರಣಜಿ ಟ್ರೋಫಿಯಲ್ಲಿ ಧಯನೀಯವಾಗಿ ವಿಫಲರಾಗುತ್ತಿದ್ದರೆ, ಮತ್ತೊಂದೆಡೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಲುವಾಗಿ ಇತರೆ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅವರುಗಳಲ್ಲಿ ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಒಬ್ಬರು. ರಣಜಿ ಟ್ರೋಫಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆಯುವಲ್ಲಿ ಶಾರ್ದೂಲ್ ಯಶಸ್ವಿಯಾಗಿದ್ದಾರೆ.

ಒಂದೆಡೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ರಣಜಿ ಟ್ರೋಫಿಯಲ್ಲಿ ಧಯನೀಯವಾಗಿ ವಿಫಲರಾಗುತ್ತಿದ್ದರೆ, ಮತ್ತೊಂದೆಡೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಲುವಾಗಿ ಇತರೆ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅವರುಗಳಲ್ಲಿ ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಒಬ್ಬರು. ರಣಜಿ ಟ್ರೋಫಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆಯುವಲ್ಲಿ ಶಾರ್ದೂಲ್ ಯಶಸ್ವಿಯಾಗಿದ್ದಾರೆ.

1 / 7
ರಣಜಿಯಲ್ಲಿ ಮುಂಬೈ ಪರ ಆಡುತ್ತಿರುವ ಶಾರ್ದೂಲ್ ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್, ಶ್ರೇಯಸ್, ರಹಾನೆ, ಯಶಸ್ವಿ ಜೈಸ್ವಾಲ್​ರಂತಹ ಸ್ಟಾರ್ ಆಟಗಾರರ ವೈಫಲ್ಯದ ನಡುವೆಯೂ ಮೊದಲ ಇನಿಂಗ್ಸ್‌ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಶಾರ್ದೂಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದರು. ಆದಾಗ್ಯೂ ತಂಡದ ಸೋಲನ್ನು ತಪ್ಪಿಸಲು ಸಾಧ್ಯವಾಗಿರಲಿಲ್ಲ

ರಣಜಿಯಲ್ಲಿ ಮುಂಬೈ ಪರ ಆಡುತ್ತಿರುವ ಶಾರ್ದೂಲ್ ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್, ಶ್ರೇಯಸ್, ರಹಾನೆ, ಯಶಸ್ವಿ ಜೈಸ್ವಾಲ್​ರಂತಹ ಸ್ಟಾರ್ ಆಟಗಾರರ ವೈಫಲ್ಯದ ನಡುವೆಯೂ ಮೊದಲ ಇನಿಂಗ್ಸ್‌ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಶಾರ್ದೂಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದರು. ಆದಾಗ್ಯೂ ತಂಡದ ಸೋಲನ್ನು ತಪ್ಪಿಸಲು ಸಾಧ್ಯವಾಗಿರಲಿಲ್ಲ

2 / 7
ಆದರೀಗ ಇಂದಿನಿಂದ ಆರಂಭವಾಗಿರುವ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಕಮಾಲ್ ಮಾಡಿರುವ ಶಾರ್ದೂಲ್ ಹ್ಯಾಟ್ರಿಕ್‌ ವಿಕೆಟ್‌ ಪಡೆದು ಎದುರಾಳಿ ತಂಡ ಮಂಡಿಯೂರುವಂತೆ ಮಾಡಿದ್ದಾರೆ. ಶಾರ್ದೂಲ್ ಅವರ ಮಾರಕ ಬೌಲಿಂಗ್​ಗೆ ತತ್ತರಿಸಿದ ಮೇಘಾಲಯ ತಂಡದ ಅರ್ಧದಷ್ಟು ಆಟಗಾರರು ಎರಡಂಕಿ ಮೊತ್ತ ದಾಟಲಾಗದೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಆದರೀಗ ಇಂದಿನಿಂದ ಆರಂಭವಾಗಿರುವ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಕಮಾಲ್ ಮಾಡಿರುವ ಶಾರ್ದೂಲ್ ಹ್ಯಾಟ್ರಿಕ್‌ ವಿಕೆಟ್‌ ಪಡೆದು ಎದುರಾಳಿ ತಂಡ ಮಂಡಿಯೂರುವಂತೆ ಮಾಡಿದ್ದಾರೆ. ಶಾರ್ದೂಲ್ ಅವರ ಮಾರಕ ಬೌಲಿಂಗ್​ಗೆ ತತ್ತರಿಸಿದ ಮೇಘಾಲಯ ತಂಡದ ಅರ್ಧದಷ್ಟು ಆಟಗಾರರು ಎರಡಂಕಿ ಮೊತ್ತ ದಾಟಲಾಗದೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

3 / 7
ಈ ಮೂಲಕ ಶಾರ್ದೂಲ್ ಠಾಕೂರ್ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ. ಮುಂಬೈ ಮತ್ತು ಮೇಘಾಲಯ ನಡುವಿನ ಈ ಪಂದ್ಯ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಈ ಮೂಲಕ ಶಾರ್ದೂಲ್ ಠಾಕೂರ್ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ. ಮುಂಬೈ ಮತ್ತು ಮೇಘಾಲಯ ನಡುವಿನ ಈ ಪಂದ್ಯ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

4 / 7
ಮುಂಬೈ ಪರ ದಾಳಿಗಿಳಿದ ಶಾರ್ದೂಲ್ ಠಾಕೂರ್ ಮತ್ತು ಮೋಹಿತ್ ಅವಸ್ಥಿ ಮೇಘಾಲಯ ಆಟಗಾರರನ್ನು ರನ್​ಗಾಗಿ ಪರದಾಡುವಂತೆ ಮಾಡಿದರು. ಶಾರ್ದೂಲ್ ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲಿ ನಿಶಾಂತ್ ಚಕ್ರವರ್ತಿ ಅವರನ್ನು ಔಟ್ ಮಾಡುವ ಮೂಲಕ ಮೇಘಾಲಯಕ್ಕೆ ಮೊದಲ ಹೊಡೆತ ನೀಡಿದರು. ಎರಡನೇ ಓವರ್‌ನಲ್ಲಿ ಮೋಹಿತ್ ಒಂದು ವಿಕೆಟ್ ಪಡೆದರು.

ಮುಂಬೈ ಪರ ದಾಳಿಗಿಳಿದ ಶಾರ್ದೂಲ್ ಠಾಕೂರ್ ಮತ್ತು ಮೋಹಿತ್ ಅವಸ್ಥಿ ಮೇಘಾಲಯ ಆಟಗಾರರನ್ನು ರನ್​ಗಾಗಿ ಪರದಾಡುವಂತೆ ಮಾಡಿದರು. ಶಾರ್ದೂಲ್ ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲಿ ನಿಶಾಂತ್ ಚಕ್ರವರ್ತಿ ಅವರನ್ನು ಔಟ್ ಮಾಡುವ ಮೂಲಕ ಮೇಘಾಲಯಕ್ಕೆ ಮೊದಲ ಹೊಡೆತ ನೀಡಿದರು. ಎರಡನೇ ಓವರ್‌ನಲ್ಲಿ ಮೋಹಿತ್ ಒಂದು ವಿಕೆಟ್ ಪಡೆದರು.

5 / 7
ಇದಾದ ನಂತರ ಮೂರನೇ ಓವರ್‌ನ ಮೊದಲ 3 ಎಸೆತಗಳಲ್ಲಿ ಶಾರ್ದೂಲ್ 1 ರನ್ ನೀಡಿದರು. ಆ ನಂತರ ನಾಲ್ಕನೇ, ಐದನೇ ಮತ್ತು ಆರನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 3 ವಿಕೆಟ್ ಪಡೆದು ಹ್ಯಾಟ್ರಿಕ್ ಪೂರೈಸಿ ಮೇಘಾಲಯ ತಂಡದ ಅರ್ಧದಷ್ಟು ಆಟಗಾರರನ್ನು ಪೆವಿಲಿಯನ್​ಗೆ ಕಳುಹಿಸಿದರು. ಇದಾದ ನಂತರವೂ ವಿಕೆಟ್‌ಗಳ ಸರಣಿ ಮುಂದುವರಿಯಿತು.

ಇದಾದ ನಂತರ ಮೂರನೇ ಓವರ್‌ನ ಮೊದಲ 3 ಎಸೆತಗಳಲ್ಲಿ ಶಾರ್ದೂಲ್ 1 ರನ್ ನೀಡಿದರು. ಆ ನಂತರ ನಾಲ್ಕನೇ, ಐದನೇ ಮತ್ತು ಆರನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 3 ವಿಕೆಟ್ ಪಡೆದು ಹ್ಯಾಟ್ರಿಕ್ ಪೂರೈಸಿ ಮೇಘಾಲಯ ತಂಡದ ಅರ್ಧದಷ್ಟು ಆಟಗಾರರನ್ನು ಪೆವಿಲಿಯನ್​ಗೆ ಕಳುಹಿಸಿದರು. ಇದಾದ ನಂತರವೂ ವಿಕೆಟ್‌ಗಳ ಸರಣಿ ಮುಂದುವರಿಯಿತು.

6 / 7
ಮೊದಲ ದಿನದಾಟದಲ್ಲೇ ತತ್ತರಿಸಿದ ಮೇಘಾಲಯ ತಂಡ 24.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ತಂಡದ ಪರ ಶಾರ್ದೂಲ್ 11 ಓವರ್ ಗಳಲ್ಲಿ 43 ರನ್ ನೀಡಿ 4 ವಿಕೆಟ್ ಪಡೆದರೆ, ಮೋಹಿತ್ ಅವಸ್ತಿ 7 ಓವರ್ ಗಳಲ್ಲಿ 27 ರನ್ ನೀಡಿ 3 ವಿಕೆಟ್ ಹಾಗೂ ಸಿಲ್ವೆಸ್ಟರ್ ಡಿಸೋಜಾ 5.3 ಓವರ್ ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು.

ಮೊದಲ ದಿನದಾಟದಲ್ಲೇ ತತ್ತರಿಸಿದ ಮೇಘಾಲಯ ತಂಡ 24.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ತಂಡದ ಪರ ಶಾರ್ದೂಲ್ 11 ಓವರ್ ಗಳಲ್ಲಿ 43 ರನ್ ನೀಡಿ 4 ವಿಕೆಟ್ ಪಡೆದರೆ, ಮೋಹಿತ್ ಅವಸ್ತಿ 7 ಓವರ್ ಗಳಲ್ಲಿ 27 ರನ್ ನೀಡಿ 3 ವಿಕೆಟ್ ಹಾಗೂ ಸಿಲ್ವೆಸ್ಟರ್ ಡಿಸೋಜಾ 5.3 ಓವರ್ ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ