AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರಿಸ್ ರೌಫ್ ಪಾಕಿಸ್ತಾನ್ ತಂಡದ ರನ್ ಮಷಿನ್: ಪಾಕ್​ ಕ್ರಿಕೆಟಿಗನಿಂದಲೇ ಟೀಕೆ

Asia Cup 2025 Final: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ 3.4 ಓವರ್​ಗಳನ್ನು ಎಸೆದ ಹಾರಿಸ್ ರೌಫ್ ಒಂದೇ ಒಂದು ವಿಕೆಟ್ ಪಡೆಯದೇ 50 ರನ್​ಗಳನ್ನು ನೀಡಿದ್ದರು. ಹೀಗಾಗಿಯೇ ಇದೀಗ ಪಾಕ್ ತಂಡದ ಮಾಜಿ ನಾಯಕ ಹಾರಿಸ್ ರೌಫ್ ಅವರನ್ನು ಭಾರತದ ರನ್ ಮಷಿನ್ ಎಂದು ಟೀಕಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 29, 2025 | 10:55 AM

Share
ಹಾರಿಸ್ ರೌಫ್ (Haris Rauf) ಪಾಕಿಸ್ತಾನ್ ತಂಡದ ರನ್ ಮಷಿನ್... ಹೀಗಂದಿದ್ದು ಮತ್ಯಾರೂ ಅಲ್ಲ, ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್. ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ಪಾಕ್ ತಂಡ ಸೋಲುತ್ತಿದ್ದಂತೆ ಆಕ್ರೋಶ ಹೊರಹಾಕಿರುವ ವಾಸಿಂ ಅಕ್ರಮ್, ಈ ಪರಾಜಯಕ್ಕೆ ಹಾರಿಸ್ ರೌಫ್ ಪ್ರಮುಖ ಕಾರಣ ಎಂದಿದ್ದಾರೆ.

ಹಾರಿಸ್ ರೌಫ್ (Haris Rauf) ಪಾಕಿಸ್ತಾನ್ ತಂಡದ ರನ್ ಮಷಿನ್... ಹೀಗಂದಿದ್ದು ಮತ್ಯಾರೂ ಅಲ್ಲ, ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್. ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ಪಾಕ್ ತಂಡ ಸೋಲುತ್ತಿದ್ದಂತೆ ಆಕ್ರೋಶ ಹೊರಹಾಕಿರುವ ವಾಸಿಂ ಅಕ್ರಮ್, ಈ ಪರಾಜಯಕ್ಕೆ ಹಾರಿಸ್ ರೌಫ್ ಪ್ರಮುಖ ಕಾರಣ ಎಂದಿದ್ದಾರೆ.

1 / 5
ಚಾನೆಲ್​ ಚರ್ಚೆಯಲ್ಲಿ ಕಾಣಿಸಿಕೊಂಡ ವಾಸಿಂ ಅಕ್ರಮ್ ಪಾಕಿಸ್ತಾನ್ ತಂಡದ ಪ್ರದರ್ಶನವನ್ನು ವಿಶ್ಲೇಷಿಸಿದ್ದರು. ಅದರಲ್ಲೂ ಒಂದು ಹಂತದಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯವು ಪಾಕ್ ತಂಡದ ಕೈ ತಪ್ಪಿ ಹೋಗಲು ಮುಖ್ಯ ಕಾರಣ ಹಾರಿಸ್ ರೌಫ್ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಾನೆಲ್​ ಚರ್ಚೆಯಲ್ಲಿ ಕಾಣಿಸಿಕೊಂಡ ವಾಸಿಂ ಅಕ್ರಮ್ ಪಾಕಿಸ್ತಾನ್ ತಂಡದ ಪ್ರದರ್ಶನವನ್ನು ವಿಶ್ಲೇಷಿಸಿದ್ದರು. ಅದರಲ್ಲೂ ಒಂದು ಹಂತದಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯವು ಪಾಕ್ ತಂಡದ ಕೈ ತಪ್ಪಿ ಹೋಗಲು ಮುಖ್ಯ ಕಾರಣ ಹಾರಿಸ್ ರೌಫ್ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 5
ಏಕೆಂದರೆ ಈ ಪಂದ್ಯದ 15ನೇ ಓವರ್​ನಲ್ಲಿ ರೌಫ್ 17 ರನ್ ನೀಡಿದ್ದರು. ಇನ್ನು 18ನೇ ಓವರ್​ನಲ್ಲಿ 13 ರನ್​ ಬಿಟ್ಟು ಕೊಟ್ಟರು. ಅಲ್ಲದೆ ಅಂತಿಮವಾಗಿ ಓವರ್​ನ 4 ಎಸೆತಗಳಲ್ಲೇ 10 ರನ್​ ಚಚ್ಚಿಸಿಕೊಳ್ಳುವ ಮೂಲಕ ಪಂದ್ಯವನ್ನು ಬೇಗನೆ ಮುಗಿಸಿದರು. ಈ ಕಳಪೆ ಪ್ರದರ್ಶನದಿಂದಾಗಿ ಪಾಕ್ ತಂಡ ಸೋಲನುಭವಿಸಿದೆ ಎಂದು ವಾಸಿಂ ಅಕ್ರಮ್ ಟೀಕಿಸಿದರು.

ಏಕೆಂದರೆ ಈ ಪಂದ್ಯದ 15ನೇ ಓವರ್​ನಲ್ಲಿ ರೌಫ್ 17 ರನ್ ನೀಡಿದ್ದರು. ಇನ್ನು 18ನೇ ಓವರ್​ನಲ್ಲಿ 13 ರನ್​ ಬಿಟ್ಟು ಕೊಟ್ಟರು. ಅಲ್ಲದೆ ಅಂತಿಮವಾಗಿ ಓವರ್​ನ 4 ಎಸೆತಗಳಲ್ಲೇ 10 ರನ್​ ಚಚ್ಚಿಸಿಕೊಳ್ಳುವ ಮೂಲಕ ಪಂದ್ಯವನ್ನು ಬೇಗನೆ ಮುಗಿಸಿದರು. ಈ ಕಳಪೆ ಪ್ರದರ್ಶನದಿಂದಾಗಿ ಪಾಕ್ ತಂಡ ಸೋಲನುಭವಿಸಿದೆ ಎಂದು ವಾಸಿಂ ಅಕ್ರಮ್ ಟೀಕಿಸಿದರು.

3 / 5
ನನ್ನ ಪ್ರಕಾರ, ಹಾರಿಸ್ ರೌಫ್ ಭಾರತದ ವಿರುದ್ಧದ ರನ್ ಮಷಿನ್. ಈ ಹಿಂದೆ ಕೂಡ ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡದ ಸೋಲಿಗೆ ಕಾರಣರಾಗಿದ್ದರು. ಇದೀಗ ಮತ್ತೊಮ್ಮೆ ಪಾಕಿಸ್ತಾನ್ ಪಾಲಿಗೆ ದುಬಾರಿಯಾಗಿದ್ದಾರೆ. ಈ ಮೂಲಕ ಹಾರಿಸ್ ರೌಫ್ ಟೀಮ್ ಇಂಡಿಯಾ ಪಾಲಿನ ರನ್ ಮಷಿನ್ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ವಾಸಿಂ ಅಕ್ರಮ್ ಪಾಕ್ ವೇಗಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನನ್ನ ಪ್ರಕಾರ, ಹಾರಿಸ್ ರೌಫ್ ಭಾರತದ ವಿರುದ್ಧದ ರನ್ ಮಷಿನ್. ಈ ಹಿಂದೆ ಕೂಡ ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡದ ಸೋಲಿಗೆ ಕಾರಣರಾಗಿದ್ದರು. ಇದೀಗ ಮತ್ತೊಮ್ಮೆ ಪಾಕಿಸ್ತಾನ್ ಪಾಲಿಗೆ ದುಬಾರಿಯಾಗಿದ್ದಾರೆ. ಈ ಮೂಲಕ ಹಾರಿಸ್ ರೌಫ್ ಟೀಮ್ ಇಂಡಿಯಾ ಪಾಲಿನ ರನ್ ಮಷಿನ್ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ವಾಸಿಂ ಅಕ್ರಮ್ ಪಾಕ್ ವೇಗಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

4 / 5
ಇನ್ನು ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ 150 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ 9ನೇ ಬಾರಿ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.

ಇನ್ನು ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ 150 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ 9ನೇ ಬಾರಿ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.

5 / 5

Published On - 10:55 am, Mon, 29 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!