AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಭಾರತ vs ಆಸ್ಟ್ರೇಲಿಯಾ ಗಾಬಾ ಟೆಸ್ಟ್ ಡ್ರಾ ಆದರೆ ಯಾರಿಗೆ ಲಾಭ?

WTC final 2025: ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಗಾಬಾ ಟೆಸ್ಟ್ ಪಂದ್ಯವು ಡ್ರಾ ಆದರೆ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್. ಏಕೆಂದರೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬೇಕಿದ್ದರೆ, ಯಾವುದೇ ಪಂದ್ಯಗಳನ್ನು ಸೋಲಬಾರದು. ಇತ್ತ ಮೊದಲ ಇನಿಂಗ್ಸ್​ನಲ್ಲಿ ಹಿನ್ನಡೆ ಅನುಭವಿಸಿರುವ ಟೀಮ್ ಇಂಡಿಯಾ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಫೈನಲ್ ಪ್ರವೇಶಿಸಲು ಮುಂದಿನ ಪಂದ್ಯಗಳನ್ನು ಗೆದ್ದರೆ ಸಾಕು.

ಝಾಹಿರ್ ಯೂಸುಫ್
|

Updated on: Dec 18, 2024 | 8:35 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಇದೀಗಷ್ಟೇ ದ್ವಿತೀಯ ಇನಿಂಗ್ಸ್ ಆರಂಭವಾಗಿದೆ. ಹೀಗಾಗಿ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮುವ ಸಾಧ್ಯತೆಯಿಲ್ಲ. ಇತ್ತ ಗಾಬಾ ಟೆಸ್ಟ್ ಡ್ರಾ ಆದರೆ ಯಾವ ತಂಡಕ್ಕೆ ಲಾಭ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಇದೀಗಷ್ಟೇ ದ್ವಿತೀಯ ಇನಿಂಗ್ಸ್ ಆರಂಭವಾಗಿದೆ. ಹೀಗಾಗಿ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮುವ ಸಾಧ್ಯತೆಯಿಲ್ಲ. ಇತ್ತ ಗಾಬಾ ಟೆಸ್ಟ್ ಡ್ರಾ ಆದರೆ ಯಾವ ತಂಡಕ್ಕೆ ಲಾಭ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

1 / 6
ಏಕೆಂದರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿದೆ. ಹೀಗಾಗಿ ಎರಡೂ ತಂಡಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳು ಬಹಳ ಮಹತ್ವದ್ದು. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ.

ಏಕೆಂದರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿದೆ. ಹೀಗಾಗಿ ಎರಡೂ ತಂಡಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳು ಬಹಳ ಮಹತ್ವದ್ದು. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ.

2 / 6
ಏಕೆಂದರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಬಹುತೇಕ ಖಚಿತ.

ಏಕೆಂದರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಬಹುತೇಕ ಖಚಿತ.

3 / 6
ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 60.52% ಪಾಯಿಂಟ್ಸ್ ಪಡೆಯಲು ಉತ್ತಮ ಅವಕಾಶವಿದೆ. ಈ ಮೂಲಕ ದ್ವಿತೀಯ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 60.52% ಪಾಯಿಂಟ್ಸ್ ಪಡೆಯಲು ಉತ್ತಮ ಅವಕಾಶವಿದೆ. ಈ ಮೂಲಕ ದ್ವಿತೀಯ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

4 / 6
ಅತ್ತ ಆಸ್ಟ್ರೇಲಿಯಾ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಪಡೆಯಲಿದೆ.

ಅತ್ತ ಆಸ್ಟ್ರೇಲಿಯಾ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಪಡೆಯಲಿದೆ.

5 / 6
ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಬೇಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಬೇಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

6 / 6
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!