AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಭಾರತ vs ಆಸ್ಟ್ರೇಲಿಯಾ ಗಾಬಾ ಟೆಸ್ಟ್ ಡ್ರಾ ಆದರೆ ಯಾರಿಗೆ ಲಾಭ?

WTC final 2025: ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಗಾಬಾ ಟೆಸ್ಟ್ ಪಂದ್ಯವು ಡ್ರಾ ಆದರೆ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್. ಏಕೆಂದರೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬೇಕಿದ್ದರೆ, ಯಾವುದೇ ಪಂದ್ಯಗಳನ್ನು ಸೋಲಬಾರದು. ಇತ್ತ ಮೊದಲ ಇನಿಂಗ್ಸ್​ನಲ್ಲಿ ಹಿನ್ನಡೆ ಅನುಭವಿಸಿರುವ ಟೀಮ್ ಇಂಡಿಯಾ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಫೈನಲ್ ಪ್ರವೇಶಿಸಲು ಮುಂದಿನ ಪಂದ್ಯಗಳನ್ನು ಗೆದ್ದರೆ ಸಾಕು.

ಝಾಹಿರ್ ಯೂಸುಫ್
|

Updated on: Dec 18, 2024 | 8:35 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಇದೀಗಷ್ಟೇ ದ್ವಿತೀಯ ಇನಿಂಗ್ಸ್ ಆರಂಭವಾಗಿದೆ. ಹೀಗಾಗಿ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮುವ ಸಾಧ್ಯತೆಯಿಲ್ಲ. ಇತ್ತ ಗಾಬಾ ಟೆಸ್ಟ್ ಡ್ರಾ ಆದರೆ ಯಾವ ತಂಡಕ್ಕೆ ಲಾಭ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಇದೀಗಷ್ಟೇ ದ್ವಿತೀಯ ಇನಿಂಗ್ಸ್ ಆರಂಭವಾಗಿದೆ. ಹೀಗಾಗಿ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮುವ ಸಾಧ್ಯತೆಯಿಲ್ಲ. ಇತ್ತ ಗಾಬಾ ಟೆಸ್ಟ್ ಡ್ರಾ ಆದರೆ ಯಾವ ತಂಡಕ್ಕೆ ಲಾಭ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

1 / 6
ಏಕೆಂದರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿದೆ. ಹೀಗಾಗಿ ಎರಡೂ ತಂಡಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳು ಬಹಳ ಮಹತ್ವದ್ದು. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ.

ಏಕೆಂದರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿದೆ. ಹೀಗಾಗಿ ಎರಡೂ ತಂಡಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳು ಬಹಳ ಮಹತ್ವದ್ದು. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ.

2 / 6
ಏಕೆಂದರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಬಹುತೇಕ ಖಚಿತ.

ಏಕೆಂದರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಬಹುತೇಕ ಖಚಿತ.

3 / 6
ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 60.52% ಪಾಯಿಂಟ್ಸ್ ಪಡೆಯಲು ಉತ್ತಮ ಅವಕಾಶವಿದೆ. ಈ ಮೂಲಕ ದ್ವಿತೀಯ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 60.52% ಪಾಯಿಂಟ್ಸ್ ಪಡೆಯಲು ಉತ್ತಮ ಅವಕಾಶವಿದೆ. ಈ ಮೂಲಕ ದ್ವಿತೀಯ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

4 / 6
ಅತ್ತ ಆಸ್ಟ್ರೇಲಿಯಾ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಪಡೆಯಲಿದೆ.

ಅತ್ತ ಆಸ್ಟ್ರೇಲಿಯಾ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಪಡೆಯಲಿದೆ.

5 / 6
ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಬೇಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಬೇಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ