AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಇನ್ನೊಂದು ಪಂದ್ಯ ಸೋತರೂ ಟೀಮ್ ಇಂಡಿಯಾದ WTC ಫೈನಲ್ ಕನಸು ಉಲ್ಟಾ ಪಲ್ಟಾ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದ್ದು, ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 12:10 PM

Share
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

1 / 8
ಪ್ರಸ್ತುತ ಅಂಕ ಪಟ್ಟಿಯಲ್ಲಿ 60.710% ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ (	59.260%) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290% ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

ಪ್ರಸ್ತುತ ಅಂಕ ಪಟ್ಟಿಯಲ್ಲಿ 60.710% ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ( 59.260%) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290% ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

2 / 8
ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಅಂಕ 64.04% ಆಗಲಿದೆ. ಇದರಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಂಡು ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್​ ಫೈನಲ್​​ಗೆ ನೇರ ಅರ್ಹತೆ ಪಡೆಯಬಹುದು.

ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಅಂಕ 64.04% ಆಗಲಿದೆ. ಇದರಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಂಡು ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್​ ಫೈನಲ್​​ಗೆ ನೇರ ಅರ್ಹತೆ ಪಡೆಯಬಹುದು.

3 / 8
ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಗೆದ್ದರೂ 60% ಅಂಕಗಳನ್ನು ಮಾತ್ರ ಪಡೆಯಲಿದೆ. ಅಂದರೆ ನೇರವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಬೇಕು. ಇದರಿಂದ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲಿದೆ.

ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಗೆದ್ದರೂ 60% ಅಂಕಗಳನ್ನು ಮಾತ್ರ ಪಡೆಯಲಿದೆ. ಅಂದರೆ ನೇರವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಬೇಕು. ಇದರಿಂದ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲಿದೆ.

4 / 8
ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು 60.52% ಅಂಕಗಳನ್ನು ಪಡೆಯಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್​ಗೆ ಅರ್ಹತೆ ಪಡೆಯಬಹುದು.

ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು 60.52% ಅಂಕಗಳನ್ನು ಪಡೆಯಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್​ಗೆ ಅರ್ಹತೆ ಪಡೆಯಬಹುದು.

5 / 8
ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 8
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್​​ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್​​ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

7 / 8
ಇನ್ನು ಸೌತ್ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ  69.44% ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಹೀಗಾದಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದೊಂದಿಗೆ ಫೈನಲ್​ಗೆ ಅರ್ಹತೆ ಪಡೆಯುವುದನ್ನು ಎದುರು ನೋಡಬೇಕಾಗುತ್ತದೆ.

ಇನ್ನು ಸೌತ್ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ 69.44% ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಹೀಗಾದಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದೊಂದಿಗೆ ಫೈನಲ್​ಗೆ ಅರ್ಹತೆ ಪಡೆಯುವುದನ್ನು ಎದುರು ನೋಡಬೇಕಾಗುತ್ತದೆ.

8 / 8
Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ