AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಇನ್ನೊಂದು ಪಂದ್ಯ ಸೋತರೂ ಟೀಮ್ ಇಂಡಿಯಾದ WTC ಫೈನಲ್ ಕನಸು ಉಲ್ಟಾ ಪಲ್ಟಾ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದ್ದು, ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 12:10 PM

Share
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

1 / 8
ಪ್ರಸ್ತುತ ಅಂಕ ಪಟ್ಟಿಯಲ್ಲಿ 60.710% ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ (	59.260%) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290% ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

ಪ್ರಸ್ತುತ ಅಂಕ ಪಟ್ಟಿಯಲ್ಲಿ 60.710% ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ( 59.260%) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290% ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

2 / 8
ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಅಂಕ 64.04% ಆಗಲಿದೆ. ಇದರಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಂಡು ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್​ ಫೈನಲ್​​ಗೆ ನೇರ ಅರ್ಹತೆ ಪಡೆಯಬಹುದು.

ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಅಂಕ 64.04% ಆಗಲಿದೆ. ಇದರಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಂಡು ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್​ ಫೈನಲ್​​ಗೆ ನೇರ ಅರ್ಹತೆ ಪಡೆಯಬಹುದು.

3 / 8
ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಗೆದ್ದರೂ 60% ಅಂಕಗಳನ್ನು ಮಾತ್ರ ಪಡೆಯಲಿದೆ. ಅಂದರೆ ನೇರವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಬೇಕು. ಇದರಿಂದ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲಿದೆ.

ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಗೆದ್ದರೂ 60% ಅಂಕಗಳನ್ನು ಮಾತ್ರ ಪಡೆಯಲಿದೆ. ಅಂದರೆ ನೇರವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಬೇಕು. ಇದರಿಂದ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲಿದೆ.

4 / 8
ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು 60.52% ಅಂಕಗಳನ್ನು ಪಡೆಯಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್​ಗೆ ಅರ್ಹತೆ ಪಡೆಯಬಹುದು.

ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು 60.52% ಅಂಕಗಳನ್ನು ಪಡೆಯಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್​ಗೆ ಅರ್ಹತೆ ಪಡೆಯಬಹುದು.

5 / 8
ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 8
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್​​ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್​​ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

7 / 8
ಇನ್ನು ಸೌತ್ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ  69.44% ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಹೀಗಾದಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದೊಂದಿಗೆ ಫೈನಲ್​ಗೆ ಅರ್ಹತೆ ಪಡೆಯುವುದನ್ನು ಎದುರು ನೋಡಬೇಕಾಗುತ್ತದೆ.

ಇನ್ನು ಸೌತ್ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ 69.44% ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಹೀಗಾದಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದೊಂದಿಗೆ ಫೈನಲ್​ಗೆ ಅರ್ಹತೆ ಪಡೆಯುವುದನ್ನು ಎದುರು ನೋಡಬೇಕಾಗುತ್ತದೆ.

8 / 8
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!