AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಫೈನಲ್​ಗೇರಲು ಟೀಮ್ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?

Asia Cup 2025 India vs Pakistan: ಏಷ್ಯಾಕಪ್ 2025ರ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: Sep 21, 2025 | 3:55 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿಯು (Asia Cup 2025) ಭರದಿಂದ ಸಾಗುತ್ತಿದೆ. ಈ ಟೂರ್ನಿಯ ಮೊದಲ ಸುತ್ತು  ಪೂರ್ಣಗೊಂಡಿದ್ದು, ಈ ಸುತ್ತಿನ ಮೂಲಕ 4 ತಂಡಗಳು ಮುಂದಿನ ರೌಂಡ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೀಗ ಸೂಪರ್-4 ಹಂತದ ಪಂದ್ಯಗಳು ಜರುಗುತ್ತಿದೆ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿಯು (Asia Cup 2025) ಭರದಿಂದ ಸಾಗುತ್ತಿದೆ. ಈ ಟೂರ್ನಿಯ ಮೊದಲ ಸುತ್ತು  ಪೂರ್ಣಗೊಂಡಿದ್ದು, ಈ ಸುತ್ತಿನ ಮೂಲಕ 4 ತಂಡಗಳು ಮುಂದಿನ ರೌಂಡ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೀಗ ಸೂಪರ್-4 ಹಂತದ ಪಂದ್ಯಗಳು ಜರುಗುತ್ತಿದೆ.

1 / 5
ಸೂಪರ್-4 ಹಂತದಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯುತ್ತಿವೆ. ಈ ಸುತ್ತು ಕೂಡ ರೌಂಡ್ ರಾಬಿನ್ ಮಾದರಿಯಲ್ಲೇ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ತಲಾ ಮೂರು ಪಂದ್ಯಗಳನ್ನಾಡಲಿದೆ. ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳನ್ನು ಎದುರಿಸಲಿದೆ.

ಸೂಪರ್-4 ಹಂತದಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯುತ್ತಿವೆ. ಈ ಸುತ್ತು ಕೂಡ ರೌಂಡ್ ರಾಬಿನ್ ಮಾದರಿಯಲ್ಲೇ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ತಲಾ ಮೂರು ಪಂದ್ಯಗಳನ್ನಾಡಲಿದೆ. ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳನ್ನು ಎದುರಿಸಲಿದೆ.

2 / 5
ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​ಗೇರಲಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಯಾವುದೇ ಸೆಮಿಫೈನಲ್ ಇರುವುದಿಲ್ಲ. ಬದಲಾಗಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ.

ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​ಗೇರಲಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಯಾವುದೇ ಸೆಮಿಫೈನಲ್ ಇರುವುದಿಲ್ಲ. ಬದಲಾಗಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ.

3 / 5
ಅದರಂತೆ ಟೀಮ್ ಇಂಡಿಯಾ ಮೂರು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ ಫೈನಲ್ ಆಡುವುದು ಖಚಿತವಾಗಲಿದೆ. ಇನ್ನು ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಪಡೆದರೂ ಫೈನಲ್​ಗೆ ಅರ್ಹತೆ ಪಡೆಯಬಹುದು. ಆದರೆ ಉಳಿದ ಮೂರು ತಂಡಗಳು ಕೂಡ ಎರಡೆರಡು ಪಂದ್ಯಗಳನ್ನು ಗೆದ್ದರೆ ನೆಟ್​ ರನ್​ ರೇಟ್ ಗಣನೆಗೆ ಬರಲಿದೆ.

ಅದರಂತೆ ಟೀಮ್ ಇಂಡಿಯಾ ಮೂರು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ ಫೈನಲ್ ಆಡುವುದು ಖಚಿತವಾಗಲಿದೆ. ಇನ್ನು ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಪಡೆದರೂ ಫೈನಲ್​ಗೆ ಅರ್ಹತೆ ಪಡೆಯಬಹುದು. ಆದರೆ ಉಳಿದ ಮೂರು ತಂಡಗಳು ಕೂಡ ಎರಡೆರಡು ಪಂದ್ಯಗಳನ್ನು ಗೆದ್ದರೆ ನೆಟ್​ ರನ್​ ರೇಟ್ ಗಣನೆಗೆ ಬರಲಿದೆ.

4 / 5
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಪಾಕಿಸ್ತಾನ್ (ಸೆಪ್ಟೆಂಬರ್ 21), ಬಾಂಗ್ಲಾದೇಶ್ (ಸೆಪ್ಟೆಂಬರ್ 24) ಹಾಗೂ ಶ್ರೀಲಂಕಾ (ಸೆಪ್ಟೆಂಬರ್ 26) ವಿರುದ್ಧ ಗೆಲುವು ದಾಖಲಿಸಬೇಕು. ಈ ಮೂಲಕ ಟೀಮ್ ಇಂಡಿಯಾ ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಡೈರೆಕ್ಟ್ ಎಂಟ್ರಿ ಪಡೆಯಬಹುದು.

ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಪಾಕಿಸ್ತಾನ್ (ಸೆಪ್ಟೆಂಬರ್ 21), ಬಾಂಗ್ಲಾದೇಶ್ (ಸೆಪ್ಟೆಂಬರ್ 24) ಹಾಗೂ ಶ್ರೀಲಂಕಾ (ಸೆಪ್ಟೆಂಬರ್ 26) ವಿರುದ್ಧ ಗೆಲುವು ದಾಖಲಿಸಬೇಕು. ಈ ಮೂಲಕ ಟೀಮ್ ಇಂಡಿಯಾ ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಡೈರೆಕ್ಟ್ ಎಂಟ್ರಿ ಪಡೆಯಬಹುದು.

5 / 5
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​