AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳ ಬಳಿಕ ಕೂಡ ಸೋಲಿಲ್ಲದೆ ಮುಂದುವರೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಈ ಗೆಲುವಿನ ನಾಗಾಲೋಟದೊಂದಿಗೆ ಆರ್​ಸಿಬಿ ಪಡೆ ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲೂ ಆರ್​ಸಿಬಿ ಪ್ಲೇಆಫ್​ಗೇರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Jan 18, 2026 | 8:53 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ.

1 / 6
ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್​ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್​ಗೇರಲಿದೆ.

ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್​ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್​ಗೇರಲಿದೆ.

2 / 6
ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

3 / 6
ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

4 / 6
ಇನ್ನು 5 ಮ್ಯಾಚ್​ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10.  ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ. 

ಇನ್ನು 5 ಮ್ಯಾಚ್​ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10.  ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ. 

5 / 6
ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಆರ್​ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.

ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಆರ್​ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ