AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳ ಬಳಿಕ ಕೂಡ ಸೋಲಿಲ್ಲದೆ ಮುಂದುವರೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಈ ಗೆಲುವಿನ ನಾಗಾಲೋಟದೊಂದಿಗೆ ಆರ್​ಸಿಬಿ ಪಡೆ ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲೂ ಆರ್​ಸಿಬಿ ಪ್ಲೇಆಫ್​ಗೇರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Jan 18, 2026 | 8:53 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ.

1 / 6
ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್​ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್​ಗೇರಲಿದೆ.

ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್​ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್​ಗೇರಲಿದೆ.

2 / 6
ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

3 / 6
ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

4 / 6
ಇನ್ನು 5 ಮ್ಯಾಚ್​ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10.  ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ. 

ಇನ್ನು 5 ಮ್ಯಾಚ್​ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10.  ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ. 

5 / 6
ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಆರ್​ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.

ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಆರ್​ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.

6 / 6
Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ