AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಒಂದೇ ಒಂದು ಸೋಲು ಕಾಣದೇ 10 ಅಂಕಗಳನ್ನು ಪಡೆದಿರುವ ಏಕೈಕ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ 10 ಅಂಕಗಳೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೈನಲ್​ಗೇರಲು ಉತ್ತಮ ಅವಕಾಶವಿದೆ.

ಝಾಹಿರ್ ಯೂಸುಫ್
|

Updated on: Jan 20, 2026 | 8:23 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

1 / 6
ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ ಪಟ್ಟಿಯಲ್ಲಿ ಟಾಪ್-3 ಸ್ಥಾನಗಳನ್ನು ಪಡೆದಿರುವ ತಂಡಗಳು.

ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ ಪಟ್ಟಿಯಲ್ಲಿ ಟಾಪ್-3 ಸ್ಥಾನಗಳನ್ನು ಪಡೆದಿರುವ ತಂಡಗಳು.

2 / 6
ಅದರಲ್ಲೂ ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇನ್ನುಳಿದ ಎರಡು ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್​​​ಗೆ ಪ್ರವೇಶಿಸುತ್ತದೆ.

ಅದರಲ್ಲೂ ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇನ್ನುಳಿದ ಎರಡು ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್​​​ಗೆ ಪ್ರವೇಶಿಸುತ್ತದೆ.

3 / 6
ಇದೀಗ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್​ ಆಡುವುದು ಖಚಿತವಾಗಲಿದೆ. ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಯಾವುದೇ ತಂಡಕ್ಕೆ 12 ಅಂಕಗಳನ್ನು ಗಳಿಸಲು ಅವಕಾಶವಿಲ್ಲ.

ಇದೀಗ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್​ ಆಡುವುದು ಖಚಿತವಾಗಲಿದೆ. ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಯಾವುದೇ ತಂಡಕ್ಕೆ 12 ಅಂಕಗಳನ್ನು ಗಳಿಸಲು ಅವಕಾಶವಿಲ್ಲ.

4 / 6
ಎಲ್ಲಾ ತಂಡಗಳು ಈಗಾಗಲೇ ಐದು ಮ್ಯಾಚ್​ಗಳನ್ನಾಡಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ತಲಾ 2 ಗೆಲುವು ದಾಖಲಿಸಿ ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಗೆದ್ದರೂ ಈ ತಂಡಗಳ ಒಟ್ಟು 10 ಅಂಕಗಳ ನ್ನು ಮಾತ್ರ ಪಡೆಯಲಿದೆ.

ಎಲ್ಲಾ ತಂಡಗಳು ಈಗಾಗಲೇ ಐದು ಮ್ಯಾಚ್​ಗಳನ್ನಾಡಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ತಲಾ 2 ಗೆಲುವು ದಾಖಲಿಸಿ ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಗೆದ್ದರೂ ಈ ತಂಡಗಳ ಒಟ್ಟು 10 ಅಂಕಗಳ ನ್ನು ಮಾತ್ರ ಪಡೆಯಲಿದೆ.

5 / 6
ಆದರೆ ಈಗಾಗಲೇ 10 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಒಟ್ಟು 12 ಅಂಕಗಳನ್ನು ತನ್ನದಾಗಿಸಿಕೊಳ್ಳಬಹುದು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿ ಫೈನಲ್​ಗೆ ಅರ್ಹತೆ ಪಡೆಯಬಹುದು. ಅದರಂತೆ ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ಫೈನಲ್ ಆಡುವುದನ್ನು ಎದುರು ನೋಡಬಹುದು.

ಆದರೆ ಈಗಾಗಲೇ 10 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಒಟ್ಟು 12 ಅಂಕಗಳನ್ನು ತನ್ನದಾಗಿಸಿಕೊಳ್ಳಬಹುದು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿ ಫೈನಲ್​ಗೆ ಅರ್ಹತೆ ಪಡೆಯಬಹುದು. ಅದರಂತೆ ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ಫೈನಲ್ ಆಡುವುದನ್ನು ಎದುರು ನೋಡಬಹುದು.

6 / 6
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!