AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಹರಾಜಿಗೂ ಮುನ್ನ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ (ಐಪಿಎಲ್ 2026) ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಆಟಗಾರರ ಹರಾಜಿಗಾಗಿ ದಿನಾಂಕಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಡಿಸೆಂಬರ್ ತಿಂಗಳಲ್ಲೇ ಈ ಬಾರಿಯ ಆಕ್ಷನ್ ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ 150 ರಿಂದ 200 ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Oct 11, 2025 | 8:06 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಇದಕ್ಕಾಗಿ ಮೂರು ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಡಿಸೆಂಬರ್ 13 ರಿಂದ 15 ರೊಳಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19ರ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಇದಕ್ಕಾಗಿ ಮೂರು ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಡಿಸೆಂಬರ್ 13 ರಿಂದ 15 ರೊಳಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವುದು ಬಹುತೇಕ ಖಚಿತ.

1 / 6
ಈ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು? ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಪ್ರತಿ ಬಾರಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೆಲ ಆಟಗಾರರನ್ನು ರಿಲೀಸ್ ಮಾಡುತ್ತಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ 6 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಈ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು? ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಪ್ರತಿ ಬಾರಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೆಲ ಆಟಗಾರರನ್ನು ರಿಲೀಸ್ ಮಾಡುತ್ತಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ 6 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

2 / 6
ಆದರೆ ಈ ಬಾರಿ ಇಂತಿಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕೆಂಬ ನಿಯಮ ಇರುವುದಿಲ್ಲ. ಅಂದರೆ ಈ ಸಲ ನಡೆಯುತ್ತಿರುವುದು ಮಿನಿ ಹರಾಜು. ಮೆಗಾ ಹರಾಜು ನಡೆಯುವಾಗ ಮಾತ್ರ ಇಂತಿಷ್ಟು ಆಟಗಾರರನ್ನು ಮಾತ್ರ ರಿಟೈನ್ ಮಾಡಿ, ಉಳಿದವರನ್ನು ಬಿಡುಗಡೆ ಮಾಡಬೇಕೆಂಬ ನಿಯಮ ಜಾರಿಯಲ್ಲಿರುತ್ತದೆ.

ಆದರೆ ಈ ಬಾರಿ ಇಂತಿಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕೆಂಬ ನಿಯಮ ಇರುವುದಿಲ್ಲ. ಅಂದರೆ ಈ ಸಲ ನಡೆಯುತ್ತಿರುವುದು ಮಿನಿ ಹರಾಜು. ಮೆಗಾ ಹರಾಜು ನಡೆಯುವಾಗ ಮಾತ್ರ ಇಂತಿಷ್ಟು ಆಟಗಾರರನ್ನು ಮಾತ್ರ ರಿಟೈನ್ ಮಾಡಿ, ಉಳಿದವರನ್ನು ಬಿಡುಗಡೆ ಮಾಡಬೇಕೆಂಬ ನಿಯಮ ಜಾರಿಯಲ್ಲಿರುತ್ತದೆ.

3 / 6
ಈ ಬಾರಿ ಮಿನಿ ಹರಾಜು ನಡೆಯುತ್ತಿರುತ್ತಿರುವುದರಿಂದ ಎಷ್ಟು ಆಟಗಾರರನ್ನು ಬೇಕಿದ್ದರೂ ತಂಡದಲ್ಲೇ ಉಳಿಸಿಕೊಳ್ಳಬಹುದು. ಉದಾಹರಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ಈ ಇಪ್ಪೆತ್ತರಡು ಆಟಗಾರರನ್ನು ಉಳಿಸಿಕೊಂಡು ಆರ್​ಸಿಬಿ ಹರಾಜಿನಲ್ಲಿ ಭಾಗವಹಿಸಬಹುದು.

ಈ ಬಾರಿ ಮಿನಿ ಹರಾಜು ನಡೆಯುತ್ತಿರುತ್ತಿರುವುದರಿಂದ ಎಷ್ಟು ಆಟಗಾರರನ್ನು ಬೇಕಿದ್ದರೂ ತಂಡದಲ್ಲೇ ಉಳಿಸಿಕೊಳ್ಳಬಹುದು. ಉದಾಹರಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ಈ ಇಪ್ಪೆತ್ತರಡು ಆಟಗಾರರನ್ನು ಉಳಿಸಿಕೊಂಡು ಆರ್​ಸಿಬಿ ಹರಾಜಿನಲ್ಲಿ ಭಾಗವಹಿಸಬಹುದು.

4 / 6
ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 25 ಆಟಗಾರರಿಗೆ ಅವಕಾಶವಿದೆ. ಈ 25 ಆಟಗಾರರನ್ನೂ ಸಹ  ರಿಟೈನ್ ಮಾಡಿಕೊಳ್ಳಬಹುದು.  ಆದರೆ 25 ಪ್ಲೇಯರ್ಸ್​ನ ರಿಟೈನ್ ಮಾಡಿದ್ರೆ, ಹರಾಜಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿಯೇ ಈ ಬಾರಿ ಎಲ್ಲಾ ಫ್ರಾಂಚೈಸಿಗಳು ಕೆಲವೇ ಕೆಲವು ಆಟಗಾರರನ್ನು ಮಾತ್ರ ಬಿಡುಗಡೆ ಮಾಡಲಿದ್ದಾರೆ.

ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 25 ಆಟಗಾರರಿಗೆ ಅವಕಾಶವಿದೆ. ಈ 25 ಆಟಗಾರರನ್ನೂ ಸಹ  ರಿಟೈನ್ ಮಾಡಿಕೊಳ್ಳಬಹುದು.  ಆದರೆ 25 ಪ್ಲೇಯರ್ಸ್​ನ ರಿಟೈನ್ ಮಾಡಿದ್ರೆ, ಹರಾಜಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿಯೇ ಈ ಬಾರಿ ಎಲ್ಲಾ ಫ್ರಾಂಚೈಸಿಗಳು ಕೆಲವೇ ಕೆಲವು ಆಟಗಾರರನ್ನು ಮಾತ್ರ ಬಿಡುಗಡೆ ಮಾಡಲಿದ್ದಾರೆ.

5 / 6
ಇನ್ನು ಹೀಗೆ ರಿಲೀಸ್ ಆದ ಆಟಗಾರರ ಸ್ಲಾಟ್​ಗಳಿಗೆ ಮಾತ್ರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದರೆ 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇದೇ ಕಾರಣದಿಂದಾಗಿ ಈ ಸಲ 150 ರಿಂದ 200 ಆಟಗಾರರ ಹೆಸರುಗಳು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

ಇನ್ನು ಹೀಗೆ ರಿಲೀಸ್ ಆದ ಆಟಗಾರರ ಸ್ಲಾಟ್​ಗಳಿಗೆ ಮಾತ್ರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದರೆ 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇದೇ ಕಾರಣದಿಂದಾಗಿ ಈ ಸಲ 150 ರಿಂದ 200 ಆಟಗಾರರ ಹೆಸರುಗಳು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

6 / 6

Published On - 8:05 am, Sat, 11 October 25

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ