AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರು OP…  RCB ಎಷ್ಟು ಆಟಗಾರರನ್ನು ಖರೀದಿಸಬಹುದು?

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 6+2 ಯೋಜನೆಯೊಂದಿಗೆ ಕಾಣಿಸಿಕೊಳ್ಳಲಿದೆ. ಅಂದರೆ ಒಟ್ಟು 8 ಆಟಗಾರರನ್ನು ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ,

ಝಾಹಿರ್ ಯೂಸುಫ್
|

Updated on:Nov 16, 2025 | 1:01 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ಕ್ಕಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬರೋಬ್ಬರಿ 17 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅಲ್ಲದೆ 8 ಆಟಗಾರರನ್ನು  ತಂಡದಿಂದ ರಿಲೀಸ್ ಮಾಡಿದೆ.

1 / 6
ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

ಆರ್​ಸಿಬಿ ತಂಡದಿಂದ ರಿಲೀಸ್ ಆದ ಆಟಗಾರರೆಂದರೆ ಲಿಯಾಮ್ ಲಿವಿಂಗ್​ಸ್ಟೋನ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್​, ಬ್ಲೆಸಿಂಗ್ ಮುಝರಬಾನಿ, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ, ಮೋಹಿತ್ ರಾಠಿ, ಲುಂಗಿ ಎನ್​ಗಿಡಿ.  ಈ ಎಂಟು ಆಟಗಾರರ ರಿಲೀಸ್​ನೊಂದಿಗೆ ಆರ್​ಸಿಬಿ 16.40 ಕೋಟಿ ರೂ. ಹರಾಜು ಮೊತ್ತ ಹೊಂದಿದೆ.

2 / 6
ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಅಂದರೆ ಐಪಿಎಲ್ ಮಿನಿ ಹರಾಜಿನಲ್ಲಿ ಆರ್​ಸಿಬಿ 16.40 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೆ ಈ ಮೊತ್ತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಅಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು ಗರಿಷ್ಠ 25 ಆಟಗಾರರನ್ನು ಹೊಂದಬಹುದು.

3 / 6
ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

ಇತ್ತ ಆರ್​ಸಿಬಿ ತಂಡವು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಕಾರಣ ಮುಂದಿನ ಸೀಸನ್​ಗಾಗಿ ಇನ್ನೂ 8 ಆಟಗಾರರನ್ನು ಖರೀದಿಸಬಹುದು. ಈ 8 ಆಟಗಾರರಲ್ಲಿ 6 ಮಂದಿ ಭಾರತೀಯರನ್ನು ಖರೀದಿಸಬಹುದು. ಅಂದರೆ ಆರ್​ಸಿಬಿಗೆ ಉಳಿದಿರುವುದು 6+2 ಸ್ಲಾಟ್​ಗಳು ಮಾತ್ರ.

4 / 6
ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ 8 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ನೀಡಬಹುದು. ಆರ್​ಸಿಬಿ ತಂಡದಲ್ಲಿ ಈಗಾಗಲೇ ವಿದೇಶಿ ಆಟಗಾರರಾಗಿ ಫಿಲ್ ಸಾಲ್ಟ್, ಜೋಶ್ ಹೇಝಲ್​​ವುಡ್, ನುವಾನ್ ತುಷಾರ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೇಕಬ್ ಬೆಥೆಲ್ ಇದ್ದಾರೆ. ಅದರಂತೆ ಹರಾಜಿನ ಮೂಲಕ ಇಬ್ಬರು ವಿದೇಶಿ ಆಟಗಾರರನ್ನು (Overseas Players) ಮಾತ್ರ ಖರೀದಿಸಲು ಆರ್​ಸಿಬಿಗೆ ಅವಕಾಶವಿದೆ.

5 / 6
ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನುಳಿದ ಸ್ಥಾನಗಳಿಗೆ ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 6+ 2 ಲೆಕ್ಕಾಚಾರದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ 16.40 ಕೋಟಿ ರೂ.ನಲ್ಲಿ ಆರ್​ಸಿಬಿ ಯಾರನ್ನೆಲ್ಲಾ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 1:00 pm, Sun, 16 November 25

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ