AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಐಪಿಎಲ್ ಫೈನಲ್​ನಲ್ಲಿ CSK ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು..!

IPL 2023 Final CSK vs GT: 2 ವರ್ಷಗಳ ಬ್ಯಾನ್ ಬಳಿಕ 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್​ಕೆ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 27, 2023 | 9:22 PM

IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಗೆ ಭಾನುವಾರ ತೆರೆ ಬೀಳಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಗೆ ಭಾನುವಾರ ತೆರೆ ಬೀಳಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಲಿದೆ. ಸಿಎಸ್​ಕೆ ಸೋತರೆ ಗುಜರಾತ್ ಟೈಟಾನ್ಸ್ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್​ಗಳ ಮೂಲಕ 2 ಬಾರಿ ಫೈನಲ್​ಗೇರಿದರೆ, ಸಿಎಸ್​ಕೆ ತಂಡವು 14 ಸೀಸನ್​ಗಳ ಮೂಲಕ 10ನೇ ಬಾರಿ ಫೈನಲ್ ಪ್ರವೇಶಿಸಿದೆ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಲಿದೆ. ಸಿಎಸ್​ಕೆ ಸೋತರೆ ಗುಜರಾತ್ ಟೈಟಾನ್ಸ್ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್​ಗಳ ಮೂಲಕ 2 ಬಾರಿ ಫೈನಲ್​ಗೇರಿದರೆ, ಸಿಎಸ್​ಕೆ ತಂಡವು 14 ಸೀಸನ್​ಗಳ ಮೂಲಕ 10ನೇ ಬಾರಿ ಫೈನಲ್ ಪ್ರವೇಶಿಸಿದೆ.

2 / 8
ಆದರೆ 9 ಬಾರಿ ಫೈನಲ್ ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಅಂದರೆ ಹತ್ತು ಫೈನಲ್​ಗಳಲ್ಲಿ ಧೋನಿ ಪಡೆ 5 ಬಾರಿ ಸೋಲನುಭವಿಸಿದೆ.

ಆದರೆ 9 ಬಾರಿ ಫೈನಲ್ ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಅಂದರೆ ಹತ್ತು ಫೈನಲ್​ಗಳಲ್ಲಿ ಧೋನಿ ಪಡೆ 5 ಬಾರಿ ಸೋಲನುಭವಿಸಿದೆ.

3 / 8
2008 ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಸಿಎಸ್​ಕೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ರನ್ನರ್​ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದಾದ ಬಳಿಕ 2010 ರಲ್ಲಿ ಮುಂಬೈ ಇಂಡಿಯನ್ಸ್​ ಅನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

2008 ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಸಿಎಸ್​ಕೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ರನ್ನರ್​ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದಾದ ಬಳಿಕ 2010 ರಲ್ಲಿ ಮುಂಬೈ ಇಂಡಿಯನ್ಸ್​ ಅನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

4 / 8
ಇನ್ನು 2011 ರಲ್ಲಿ ಆರ್​ಸಿಬಿಗೆ ಸೋಲುಣಿಸಿ ಚಾಂಪಿಯನ್ ಆದರೆ, 2012 ರ ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತು. ಹಾಗೆಯೇ 2013 ರಲ್ಲಿ ಸಿಎಸ್​ಕೆಗೆ ಸೋಲುಣಿಸಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. 2015 ರಲ್ಲಿ ಮತ್ತೆ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮುಗ್ಗರಿಸಿತು.

ಇನ್ನು 2011 ರಲ್ಲಿ ಆರ್​ಸಿಬಿಗೆ ಸೋಲುಣಿಸಿ ಚಾಂಪಿಯನ್ ಆದರೆ, 2012 ರ ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತು. ಹಾಗೆಯೇ 2013 ರಲ್ಲಿ ಸಿಎಸ್​ಕೆಗೆ ಸೋಲುಣಿಸಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. 2015 ರಲ್ಲಿ ಮತ್ತೆ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮುಗ್ಗರಿಸಿತು.

5 / 8
2 ವರ್ಷಗಳ ಬ್ಯಾನ್ ಬಳಿಕ 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್​ಕೆ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆದರೆ 2019 ರ ಫೈನಲ್​ನಲ್ಲಿ ಸಿಎಸ್​ಕೆ ತಂಡಕ್ಕೆ ಮುಂಬೈ ಇಂಡಿಯನ್ಸ್ ಸೋಲುಣಿಸಿತು.

2 ವರ್ಷಗಳ ಬ್ಯಾನ್ ಬಳಿಕ 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್​ಕೆ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆದರೆ 2019 ರ ಫೈನಲ್​ನಲ್ಲಿ ಸಿಎಸ್​ಕೆ ತಂಡಕ್ಕೆ ಮುಂಬೈ ಇಂಡಿಯನ್ಸ್ ಸೋಲುಣಿಸಿತು.

6 / 8
ಇದಾದ ಬಳಿಕ 2021 ರಲ್ಲಿ ಮತ್ತೆ ಫೈನಲ್​ಗೆ ಪ್ರವೇಶಿಸಿದ ಸಿಎಸ್​ಕೆ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿತು. ಇದೀಗ 10ನೇ ಬಾರಿಗೆ ಫೈನಲ್​ಗೆ ಲಗ್ಗೆಯಿಟ್ಟಿದೆ.

ಇದಾದ ಬಳಿಕ 2021 ರಲ್ಲಿ ಮತ್ತೆ ಫೈನಲ್​ಗೆ ಪ್ರವೇಶಿಸಿದ ಸಿಎಸ್​ಕೆ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿತು. ಇದೀಗ 10ನೇ ಬಾರಿಗೆ ಫೈನಲ್​ಗೆ ಲಗ್ಗೆಯಿಟ್ಟಿದೆ.

7 / 8
ಅಂದರೆ 2008, 2012, 2013, 2015, 2019 ರ ಐಪಿಎಲ್​ ಫೈನಲ್​ನಲ್ಲಿ ಸೋತಿರುವ ಸಿಎಸ್​ಕೆ ತಂಡವು ಈ ಬಾರಿ ಗೆದ್ದರೆ 5 ಚಾಂಪಿಯನ್​ ಪಟ್ಟ ಅಲಂಕರಿಸಿದ 2ನೇ ತಂಡ ಎನಿಸಿಕೊಳ್ಳಲಿದೆ. ಈ ಪಟ್ಟಿಯಲ್ಲಿ 6 ಬಾರಿ ಫೈನಲ್ ಆಡಿ 5 ಸಲ ಪ್ರಶಸ್ತಿ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ.

ಅಂದರೆ 2008, 2012, 2013, 2015, 2019 ರ ಐಪಿಎಲ್​ ಫೈನಲ್​ನಲ್ಲಿ ಸೋತಿರುವ ಸಿಎಸ್​ಕೆ ತಂಡವು ಈ ಬಾರಿ ಗೆದ್ದರೆ 5 ಚಾಂಪಿಯನ್​ ಪಟ್ಟ ಅಲಂಕರಿಸಿದ 2ನೇ ತಂಡ ಎನಿಸಿಕೊಳ್ಳಲಿದೆ. ಈ ಪಟ್ಟಿಯಲ್ಲಿ 6 ಬಾರಿ ಫೈನಲ್ ಆಡಿ 5 ಸಲ ಪ್ರಶಸ್ತಿ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ.

8 / 8
Follow us
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ