AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಮೂವರು ಆಟಗಾರರು

India vs Australia: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಒಟ್ಟು 20 ಸದಸ್ಯರ ಬಳಗವನ್ನು ಆಯ್ಕೆ ಮಾಡಲಾಗಿತ್ತು. ಈ ಇಪ್ಪತ್ತು ಆಟಗಾರರಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಪ್ಲೇಯರ್ಸ್ 16 ಮಾತ್ರ. ಇನ್ನುಳಿದ ನಾಲ್ವರು ಆಟಗಾರರಿಗೆ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪಂದ್ಯವಾಡುವ ಅವಕಾಶ ದೊರೆತಿಲ್ಲ. ಹೀಗಾಗಿ ಈ ಆಟಗಾರರು ಉಳಿದವರಿಗಿಂತ ಕಡಿಮೆ ಸಂಭಾವನೆ ಪಡೆದುಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 06, 2025 | 9:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ 16 ಆಟಗಾರರು ಕಣಕ್ಕಿಳಿದಿದ್ದಾರೆ. 20 ಸದಸ್ಯರ ತಂಡದಿಂದ ಹದಿನಾರು ಆಟಗಾರರಿಗೆ ಅವಕಾಶ ದೊರೆತರೆ, ನಾಲ್ವರು ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ. ಹೀಗೆ ಬೆಂಚ್ ಕಾಯುವ ಮೂಲಕವೇ ಮೂವರು ಆಟಗಾರರು ತಲಾ 37.5 ಲಕ್ಷ ರೂ. ಪಡೆದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ 16 ಆಟಗಾರರು ಕಣಕ್ಕಿಳಿದಿದ್ದಾರೆ. 20 ಸದಸ್ಯರ ತಂಡದಿಂದ ಹದಿನಾರು ಆಟಗಾರರಿಗೆ ಅವಕಾಶ ದೊರೆತರೆ, ನಾಲ್ವರು ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ. ಹೀಗೆ ಬೆಂಚ್ ಕಾಯುವ ಮೂಲಕವೇ ಮೂವರು ಆಟಗಾರರು ತಲಾ 37.5 ಲಕ್ಷ ರೂ. ಪಡೆದಿದ್ದಾರೆ.

1 / 7
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರ ಸಂಭಾವನೆ 15 ಲಕ್ಷ ರೂ. ಆದರೆ ಇದು ಪ್ಲೇಯಿಂಗ್ ಇಲೆವೆನ್​​ನ ಭಾಗವಾಗುವ ಆಟಗಾರರಿಗೆ ಮಾತ್ರ. ಇನ್ನು ಆಡುವ ಬಳಗದಲ್ಲಿ ಕಾಣಿಸಿಕೊಳ್ಳದ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿಯ ಸರಣಿಯಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರ ಸಂಭಾವನೆ 15 ಲಕ್ಷ ರೂ. ಆದರೆ ಇದು ಪ್ಲೇಯಿಂಗ್ ಇಲೆವೆನ್​​ನ ಭಾಗವಾಗುವ ಆಟಗಾರರಿಗೆ ಮಾತ್ರ. ಇನ್ನು ಆಡುವ ಬಳಗದಲ್ಲಿ ಕಾಣಿಸಿಕೊಳ್ಳದ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿಯ ಸರಣಿಯಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 7
ಸರ್ಫರಾಝ್ ಖಾನ್: ಟೀಮ್ ಇಂಡಿಯಾದ ಯುವ ದಾಂಡಿಗ ಸರ್ಫರಾಝ್ ಖಾನ್ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂಲಕ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪಂದ್ಯವಾಡುವ ನಿರೀಕ್ಷೆಯಲ್ಲಿದ್ದರು. ಆದರೆ 5 ಪಂದ್ಯಗಳಲ್ಲೂ ಅವರಿಗೆ ಚಾನ್ಸ್ ನೀಡಲಾಗಿಲ್ಲ. ಹೀಗಾಗಿ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.ನಂತೆ ಒಟ್ಟು 37.5 ಲಕ್ಷ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

ಸರ್ಫರಾಝ್ ಖಾನ್: ಟೀಮ್ ಇಂಡಿಯಾದ ಯುವ ದಾಂಡಿಗ ಸರ್ಫರಾಝ್ ಖಾನ್ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂಲಕ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪಂದ್ಯವಾಡುವ ನಿರೀಕ್ಷೆಯಲ್ಲಿದ್ದರು. ಆದರೆ 5 ಪಂದ್ಯಗಳಲ್ಲೂ ಅವರಿಗೆ ಚಾನ್ಸ್ ನೀಡಲಾಗಿಲ್ಲ. ಹೀಗಾಗಿ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.ನಂತೆ ಒಟ್ಟು 37.5 ಲಕ್ಷ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

3 / 7
ಧ್ರುವ್ ಜುರೇಲ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ 2ನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಧ್ರುವ್ ಜುರೇಲ್ ಕೂಡ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ. ರಿಷಭ್ ಪಂತ್ ಅವರ ಸತತ ವೈಫಲ್ಯದ ಹೊರತಾಗಿಯೂ ಧ್ರುವ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿಲ್ಲ.

ಧ್ರುವ್ ಜುರೇಲ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ 2ನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಧ್ರುವ್ ಜುರೇಲ್ ಕೂಡ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ. ರಿಷಭ್ ಪಂತ್ ಅವರ ಸತತ ವೈಫಲ್ಯದ ಹೊರತಾಗಿಯೂ ಧ್ರುವ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿಲ್ಲ.

4 / 7
ಅಭಿಮನ್ಯು ಈಶ್ವರನ್: ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಅಭಿಮನ್ಯು ಈಶ್ವರನ್ ಆರಂಭಿಕ ಆಟಗಾರನಾಗಿ ಆಯ್ಕೆಯಾಗಿದ್ದರು. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಅಲಭ್ಯತೆಯ ಹೊರತಾಗಿಯೂ ಅಭಿಮನ್ಯುಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ದೊರೆತಿಲ್ಲ. ಅಲ್ಲದೆ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ.

ಅಭಿಮನ್ಯು ಈಶ್ವರನ್: ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಅಭಿಮನ್ಯು ಈಶ್ವರನ್ ಆರಂಭಿಕ ಆಟಗಾರನಾಗಿ ಆಯ್ಕೆಯಾಗಿದ್ದರು. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಅಲಭ್ಯತೆಯ ಹೊರತಾಗಿಯೂ ಅಭಿಮನ್ಯುಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ದೊರೆತಿಲ್ಲ. ಅಲ್ಲದೆ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ.

5 / 7
ತನುಷ್ ಕೋಟ್ಯಾನ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಬಳಿಕ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರ ಬದಲಿಗೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ತನುಷ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಅದರಂತೆ ಅಂತಿಮ ಎರಡು ಪಂದ್ಯಗಳ ವೇಳೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ತನುಷ್ ಯಾವುದೇ ಪಂದ್ಯವಾಡದೇ ಒಟ್ಟು 15 ಲಕ್ಷ ರೂ. ಜೇಬಿಗಿಳಿಸಿಕೊಂಡಿದ್ದಾರೆ.

ತನುಷ್ ಕೋಟ್ಯಾನ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಬಳಿಕ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರ ಬದಲಿಗೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ತನುಷ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಅದರಂತೆ ಅಂತಿಮ ಎರಡು ಪಂದ್ಯಗಳ ವೇಳೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ತನುಷ್ ಯಾವುದೇ ಪಂದ್ಯವಾಡದೇ ಒಟ್ಟು 15 ಲಕ್ಷ ರೂ. ಜೇಬಿಗಿಳಿಸಿಕೊಂಡಿದ್ದಾರೆ.

6 / 7
ಇನ್ನು ಈ ಐದು ಪಂದ್ಯಗಳ ಈ ಸರಣಿಯಲ್ಲಿ ಕನ್ನಡಿಗರಾದ ದೇವದತ್ ಪಡಿಕ್ಕಲ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ಪಂದ್ಯಗಳನ್ನಾಡಿದ್ದಾರೆ. ಪಡಿಕ್ಕಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದರೆ, ಪ್ರಸಿದ್ಧ್ ಕೃಷ್ಣ ಕೊನೆಯ ಟೆಸ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ತಲಾ 15 ಲಕ್ಷ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

ಇನ್ನು ಈ ಐದು ಪಂದ್ಯಗಳ ಈ ಸರಣಿಯಲ್ಲಿ ಕನ್ನಡಿಗರಾದ ದೇವದತ್ ಪಡಿಕ್ಕಲ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ಪಂದ್ಯಗಳನ್ನಾಡಿದ್ದಾರೆ. ಪಡಿಕ್ಕಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದರೆ, ಪ್ರಸಿದ್ಧ್ ಕೃಷ್ಣ ಕೊನೆಯ ಟೆಸ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ತಲಾ 15 ಲಕ್ಷ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ