AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಬೇಕು? ಯಾರು ಸೋಲ್ಬೇಕು?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 65 ಪಂದ್ಯಗಳು ಪೂರ್ಣಗೊಂಡಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ (18 ಅಂಕಗಳು) ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ (17) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಆರ್​ಸಿಬಿ (17) ಮೂರನೇ ಹಾಗೂ ಮುಂಬೈ ಇಂಡಿಯನ್ಸ್ (16) ನಾಲ್ಕನೇ ಸ್ಥಾನಗಳನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 24, 2025 | 10:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

1 / 6
ಅತ್ತ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪಂಜಾಬ್ ಪಡೆಯು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಜಯಗಳಿಸಿದರೆ, ಒಟ್ಟು 21 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

ಅತ್ತ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪಂಜಾಬ್ ಪಡೆಯು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಜಯಗಳಿಸಿದರೆ, ಒಟ್ಟು 21 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

2 / 6
ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಡೆಲ್ಲಿ ವಿರುದ್ಧದ ಸೋಲಿನೊಂದಿಗೆ ಪಂಜಾಬ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರಿಂದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಅನಿವಾರ್ಯ.

ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಡೆಲ್ಲಿ ವಿರುದ್ಧದ ಸೋಲಿನೊಂದಿಗೆ ಪಂಜಾಬ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರಿಂದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಅನಿವಾರ್ಯ.

3 / 6
ಹಾಗೆಯೇ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ, 18 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಲಿದೆ.

ಹಾಗೆಯೇ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ, 18 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಲಿದೆ.

4 / 6
ಅತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದನ್ನು ಆರ್​​ಸಿಬಿ ಎದುರು ನೋಡಲಿದೆ. 

ಅತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದನ್ನು ಆರ್​​ಸಿಬಿ ಎದುರು ನೋಡಲಿದೆ. 

5 / 6
ಒಂದು ವೇಳೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಲಿತಾಂಶ ನಿರ್ಣಾಯಕ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಸೋತರೂ ಸಹ ಆರ್​ಸಿಬಿ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಇನ್ನುಳಿದ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸಿಎಸ್​ಕೆ ತಂಡಗಳು ಗೆಲ್ಲುವುದು ಅನಿವಾರ್ಯ.

ಒಂದು ವೇಳೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಲಿತಾಂಶ ನಿರ್ಣಾಯಕ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಸೋತರೂ ಸಹ ಆರ್​ಸಿಬಿ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಇನ್ನುಳಿದ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸಿಎಸ್​ಕೆ ತಂಡಗಳು ಗೆಲ್ಲುವುದು ಅನಿವಾರ್ಯ.

6 / 6
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್