AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಬೇಕು? ಯಾರು ಸೋಲ್ಬೇಕು?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 65 ಪಂದ್ಯಗಳು ಪೂರ್ಣಗೊಂಡಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ (18 ಅಂಕಗಳು) ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ (17) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಆರ್​ಸಿಬಿ (17) ಮೂರನೇ ಹಾಗೂ ಮುಂಬೈ ಇಂಡಿಯನ್ಸ್ (16) ನಾಲ್ಕನೇ ಸ್ಥಾನಗಳನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 24, 2025 | 10:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

1 / 6
ಅತ್ತ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪಂಜಾಬ್ ಪಡೆಯು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಜಯಗಳಿಸಿದರೆ, ಒಟ್ಟು 21 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

ಅತ್ತ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪಂಜಾಬ್ ಪಡೆಯು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಜಯಗಳಿಸಿದರೆ, ಒಟ್ಟು 21 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

2 / 6
ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಡೆಲ್ಲಿ ವಿರುದ್ಧದ ಸೋಲಿನೊಂದಿಗೆ ಪಂಜಾಬ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರಿಂದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಅನಿವಾರ್ಯ.

ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಡೆಲ್ಲಿ ವಿರುದ್ಧದ ಸೋಲಿನೊಂದಿಗೆ ಪಂಜಾಬ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರಿಂದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಅನಿವಾರ್ಯ.

3 / 6
ಹಾಗೆಯೇ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ, 18 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಲಿದೆ.

ಹಾಗೆಯೇ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ, 18 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಲಿದೆ.

4 / 6
ಅತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದನ್ನು ಆರ್​​ಸಿಬಿ ಎದುರು ನೋಡಲಿದೆ. 

ಅತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದನ್ನು ಆರ್​​ಸಿಬಿ ಎದುರು ನೋಡಲಿದೆ. 

5 / 6
ಒಂದು ವೇಳೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಲಿತಾಂಶ ನಿರ್ಣಾಯಕ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಸೋತರೂ ಸಹ ಆರ್​ಸಿಬಿ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಇನ್ನುಳಿದ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸಿಎಸ್​ಕೆ ತಂಡಗಳು ಗೆಲ್ಲುವುದು ಅನಿವಾರ್ಯ.

ಒಂದು ವೇಳೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಲಿತಾಂಶ ನಿರ್ಣಾಯಕ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಸೋತರೂ ಸಹ ಆರ್​ಸಿಬಿ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಇನ್ನುಳಿದ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸಿಎಸ್​ಕೆ ತಂಡಗಳು ಗೆಲ್ಲುವುದು ಅನಿವಾರ್ಯ.

6 / 6
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್