AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು: ಪ್ರವೀಣ್ ಕುಮಾರ್ ಗಂಭೀರ ಆರೋಪ

Praveen Kumar RCB: 2008 ರಿಂದ 2010 ರವರೆಗೆ ಆರ್​ಸಿಬಿ ಪರ 3 ಸೀಸನ್​ಗಳಲ್ಲಿ ಕಾಣಿಸಿಕೊಂಡಿದ್ದ ಪ್ರವೀಣ್ ಕುಮಾರ್ 47 ಪಂದ್ಯಗಳನ್ನಾಡಿದ್ದರು. ಈ ವೇಳೆ 41 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 2010 ರಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಆರ್​ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು.

TV9 Web
| Edited By: |

Updated on: Jan 09, 2024 | 12:20 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಾನು ಯಾವತ್ತೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಆಡಲು ಬಯಸಿರಲಿಲ್ಲ. ಆದರೆ ನನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿ ನನ್ನನ್ನು ಆರ್​ಸಿಬಿ ಪರ ಆಡಿಸಿದ್ರು...ಇಂತಹದೊಂದು ಗಂಭೀರ ಆರೋಪ ಮಾಡಿರುವುದು ಮಾತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ವೇಗಿ ಪ್ರವೀಣ್ ಕುಮಾರ್ (Praveen Kumar).

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಾನು ಯಾವತ್ತೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಆಡಲು ಬಯಸಿರಲಿಲ್ಲ. ಆದರೆ ನನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿ ನನ್ನನ್ನು ಆರ್​ಸಿಬಿ ಪರ ಆಡಿಸಿದ್ರು...ಇಂತಹದೊಂದು ಗಂಭೀರ ಆರೋಪ ಮಾಡಿರುವುದು ಮಾತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ವೇಗಿ ಪ್ರವೀಣ್ ಕುಮಾರ್ (Praveen Kumar).

1 / 7
2008 ರ ಚೊಚ್ಚಲ ಐಪಿಎಲ್​ನಲ್ಲಿ ಪ್ರವೀಣ್ ಕುಮಾರ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅಂದು ತಾನು ಬೆಂಗಳೂರು ತಂಡದ ಪರ ಕಣಕ್ಕಿಳಿಯಲು ಬಯಸಿರಲಿಲ್ಲ. ನನ್ನ ಮೊದಲ ಆಯ್ಕೆ ಡೆಲ್ಲಿ ಡೇರ್​ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ತಂಡವಾಗಿತ್ತು. ಆದರೆ ನನಗೆ ಬೆದರಿಕೆಯೊಡ್ಡಿ ಆರ್​ಸಿಬಿ ಪರ ಕಣಕ್ಕಿಳಿಯುವಂತೆ ಮಾಡಿದ್ದರು ಎಂದು ಪ್ರವೀಣ್ ಕುಮಾರ್ ಆರೋಪಿಸಿದ್ದಾರೆ.

2008 ರ ಚೊಚ್ಚಲ ಐಪಿಎಲ್​ನಲ್ಲಿ ಪ್ರವೀಣ್ ಕುಮಾರ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅಂದು ತಾನು ಬೆಂಗಳೂರು ತಂಡದ ಪರ ಕಣಕ್ಕಿಳಿಯಲು ಬಯಸಿರಲಿಲ್ಲ. ನನ್ನ ಮೊದಲ ಆಯ್ಕೆ ಡೆಲ್ಲಿ ಡೇರ್​ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ತಂಡವಾಗಿತ್ತು. ಆದರೆ ನನಗೆ ಬೆದರಿಕೆಯೊಡ್ಡಿ ಆರ್​ಸಿಬಿ ಪರ ಕಣಕ್ಕಿಳಿಯುವಂತೆ ಮಾಡಿದ್ದರು ಎಂದು ಪ್ರವೀಣ್ ಕುಮಾರ್ ಆರೋಪಿಸಿದ್ದಾರೆ.

2 / 7
ಹೀಗೆ ಬೆದರಿಕೆಯೊಡ್ಡಿ ಆರ್​ಸಿಬಿ ಪರ ಆಡಿಸಿದ್ದು ಮತ್ಯಾರೂ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್​ನ ಅಂದಿನ ಅಧ್ಯಕ್ಷ ಲಲಿತ್ ಮೋದಿ ಎಂಬುದನ್ನು ಪ್ರವೀಣ್ ಕುಮಾರ್ ಬಹಿರಂಗಪಡಿಸಿದ್ದಾರೆ. ನಾನು ಆರ್​ಸಿಬಿ ಪರ ಆಡದಿದ್ದರೆ ನನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಅಂದು ಲಲಿತ್ ಮೋದಿ ಬೆದರಿಸಿದ್ದರು. ಹೀಗಾಗಿ ನಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯಬೇಕಾಯಿತು ಎಂದು ತಿಳಿಸಿದ್ದಾರೆ.

ಹೀಗೆ ಬೆದರಿಕೆಯೊಡ್ಡಿ ಆರ್​ಸಿಬಿ ಪರ ಆಡಿಸಿದ್ದು ಮತ್ಯಾರೂ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್​ನ ಅಂದಿನ ಅಧ್ಯಕ್ಷ ಲಲಿತ್ ಮೋದಿ ಎಂಬುದನ್ನು ಪ್ರವೀಣ್ ಕುಮಾರ್ ಬಹಿರಂಗಪಡಿಸಿದ್ದಾರೆ. ನಾನು ಆರ್​ಸಿಬಿ ಪರ ಆಡದಿದ್ದರೆ ನನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಅಂದು ಲಲಿತ್ ಮೋದಿ ಬೆದರಿಸಿದ್ದರು. ಹೀಗಾಗಿ ನಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯಬೇಕಾಯಿತು ಎಂದು ತಿಳಿಸಿದ್ದಾರೆ.

3 / 7
ನಾನು ಆರ್​ಸಿಬಿ ಪರ ಆಡಲು ಇಚ್ಛಿಸದಿರಲು ಮುಖ್ಯ ಕಾರಣ ಬೆಂಗಳೂರು ನನ್ನ ಸ್ಥಳದಿಂದ ಸಾಕಷ್ಟು ದೂರಲ್ಲಿತ್ತು. ಅಲ್ಲಿನ ಆಹಾರ ಕೂಡ ನನಗೆ ಇಷ್ಟವಾಗುತ್ತಿರಲಿಲ್ಲ. ಇದೇ ವೇಳೆ ದೆಹಲಿ ನನ್ನ ಊರಾದ ಮೀರತ್​ಗೆ ತುಂಬಾ ಹತ್ತಿರದಲ್ಲಿತ್ತು. ಇದರಿಂದ ನನಗೆ ಮನೆಗೆ ಹೋಗಲು ಅನುಕೂಲವಾಗುತ್ತಿತ್ತು. ಹೀಗಾಗಿ ನಾನು ಆರ್​ಸಿಬಿ ಪರ ಆಡುವುದಿಲ್ಲ ಎಂದು ತಿಳಿಸಿದ್ದೆ.

ನಾನು ಆರ್​ಸಿಬಿ ಪರ ಆಡಲು ಇಚ್ಛಿಸದಿರಲು ಮುಖ್ಯ ಕಾರಣ ಬೆಂಗಳೂರು ನನ್ನ ಸ್ಥಳದಿಂದ ಸಾಕಷ್ಟು ದೂರಲ್ಲಿತ್ತು. ಅಲ್ಲಿನ ಆಹಾರ ಕೂಡ ನನಗೆ ಇಷ್ಟವಾಗುತ್ತಿರಲಿಲ್ಲ. ಇದೇ ವೇಳೆ ದೆಹಲಿ ನನ್ನ ಊರಾದ ಮೀರತ್​ಗೆ ತುಂಬಾ ಹತ್ತಿರದಲ್ಲಿತ್ತು. ಇದರಿಂದ ನನಗೆ ಮನೆಗೆ ಹೋಗಲು ಅನುಕೂಲವಾಗುತ್ತಿತ್ತು. ಹೀಗಾಗಿ ನಾನು ಆರ್​ಸಿಬಿ ಪರ ಆಡುವುದಿಲ್ಲ ಎಂದು ತಿಳಿಸಿದ್ದೆ.

4 / 7
ಆದರೆ ವ್ಯಕ್ತಿಯೊಬ್ಬರು ಅವರು ನನ್ನಿಂದ ಪೇಪರ್​ ಒಂದಕ್ಕೆ ಸಹಿ ಹಾಕಿಸಿಕೊಂಡಿದ್ದರು. ಇದು ಆರ್​​ಸಿಬಿ ಜೊತೆಗಿನ ಒಪ್ಪಂದ ಪತ್ರವೆಂದು ಸಹಿ ಹಾಕಿದ ಬಳಿಕವಷ್ಟೇ ನನಗೆ ತಿಳಿಯುತು. ಏಕೆಂದರೆ ನನಗೆ ಇಂಗ್ಲಿಷ್ ಓದಲು ಬರುತ್ತಿರಲಿಲ್ಲ. ಇದಾಗ್ಯೂ ನಾನು ಡೆಲ್ಲಿ ತಂಡದ ಪರ ಆಡುತ್ತೇನೆ ಎಂದು ತಿಳಿಸಿದ್ದೆ.

ಆದರೆ ವ್ಯಕ್ತಿಯೊಬ್ಬರು ಅವರು ನನ್ನಿಂದ ಪೇಪರ್​ ಒಂದಕ್ಕೆ ಸಹಿ ಹಾಕಿಸಿಕೊಂಡಿದ್ದರು. ಇದು ಆರ್​​ಸಿಬಿ ಜೊತೆಗಿನ ಒಪ್ಪಂದ ಪತ್ರವೆಂದು ಸಹಿ ಹಾಕಿದ ಬಳಿಕವಷ್ಟೇ ನನಗೆ ತಿಳಿಯುತು. ಏಕೆಂದರೆ ನನಗೆ ಇಂಗ್ಲಿಷ್ ಓದಲು ಬರುತ್ತಿರಲಿಲ್ಲ. ಇದಾಗ್ಯೂ ನಾನು ಡೆಲ್ಲಿ ತಂಡದ ಪರ ಆಡುತ್ತೇನೆ ಎಂದು ತಿಳಿಸಿದ್ದೆ.

5 / 7
ಈ ವೇಳೆ ನನಗೆ ಕರೆ ಮಾಡಿದ್ದ ಐಪಿಎಲ್​ನ ಅಂದಿನ ಅಧ್ಯಕ್ಷ ಲಲಿತ್ ಮೋದಿ, ಆರ್​ಸಿಬಿ ಪರ ಆಡದಿದ್ದರೆ ನಿನ್ನ ವೃತ್ತಿಜೀವನನ್ನೇ ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿದ್ದರು. ಹೀಗಾಗಿ ನಾನು ಆರ್​ಸಿಬಿ ಪರ ಆಡಲೇಬೇಕಾಯಿತು ಎಂದು ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

ಈ ವೇಳೆ ನನಗೆ ಕರೆ ಮಾಡಿದ್ದ ಐಪಿಎಲ್​ನ ಅಂದಿನ ಅಧ್ಯಕ್ಷ ಲಲಿತ್ ಮೋದಿ, ಆರ್​ಸಿಬಿ ಪರ ಆಡದಿದ್ದರೆ ನಿನ್ನ ವೃತ್ತಿಜೀವನನ್ನೇ ಕೊನೆಗೊಳಿಸುವುದಾಗಿ ಬೆದರಿಕೆ ಹಾಕಿದ್ದರು. ಹೀಗಾಗಿ ನಾನು ಆರ್​ಸಿಬಿ ಪರ ಆಡಲೇಬೇಕಾಯಿತು ಎಂದು ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

6 / 7
2008 ರಿಂದ 2010 ರವರೆಗೆ ಆರ್​ಸಿಬಿ ಪರ 3 ಸೀಸನ್​ಗಳಲ್ಲಿ ಕಾಣಿಸಿಕೊಂಡಿದ್ದ ಪ್ರವೀಣ್ ಕುಮಾರ್ 47 ಪಂದ್ಯಗಳನ್ನಾಡಿದ್ದರು. ಈ ವೇಳೆ 41 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 2010 ರಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಆರ್​ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು. ಇದೀಗ ಐಪಿಎಲ್​ ಒಪ್ಪಂದ ಹಿಂದಿರುವ ಕರಾಳತೆಯನ್ನು ಬಿಚ್ಚಿಡುವ ಮೂಲಕ ಪ್ರವೀಣ್ ಕುಮಾರ್ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

2008 ರಿಂದ 2010 ರವರೆಗೆ ಆರ್​ಸಿಬಿ ಪರ 3 ಸೀಸನ್​ಗಳಲ್ಲಿ ಕಾಣಿಸಿಕೊಂಡಿದ್ದ ಪ್ರವೀಣ್ ಕುಮಾರ್ 47 ಪಂದ್ಯಗಳನ್ನಾಡಿದ್ದರು. ಈ ವೇಳೆ 41 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 2010 ರಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಆರ್​ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು. ಇದೀಗ ಐಪಿಎಲ್​ ಒಪ್ಪಂದ ಹಿಂದಿರುವ ಕರಾಳತೆಯನ್ನು ಬಿಚ್ಚಿಡುವ ಮೂಲಕ ಪ್ರವೀಣ್ ಕುಮಾರ್ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ