AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ನಮ್ದೆ ಅಲ್ಲ, ಈ ಸಲ ಕಪ್ ನಮ್ದು: ಕನ್ನಡದಲ್ಲೇ ಗೆದ್ದ ಖುಷಿ ಹಂಚಿಕೊಂಡ ಸ್ಮೃತಿ ಮಂಧಾನ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಸೀಸನ್ 17 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 19 ರಂದು ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಲಿದ್ದು, ಇದರ ಜೊತೆ ವುಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರ್ತಿಯರನ್ನು ಸನ್ಮಾನಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 18, 2024 | 1:59 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ಬಹುಕಾಲದ ಕನಸನ್ನು ಸ್ಮೃತಿ ಮಂಧಾನ (Smriti Mandhana) ಪಡೆ ಈಡೇರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದು ಒಂದೇ ಮಾತು, ಪ್ರತಿ ಬಾರಿಯೂ ನಾವು ಈ ಸಲ ಕಪ್ ನಮ್ದೇ ಎಂದೇಳುತ್ತಾ ಬಂದಿದ್ದೇವೆ. ಇದೀಗ ನಾನು ಈ ಸಲ ಕಪ್ ನಮ್ದು...ಎಂದೇಳಲು ಬಯಸುತ್ತೇನೆ ಅಂದಾಗ, ಸ್ಡೇಡಿಯಂನಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

2 / 6
ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

ಇದೀಗ ಮತ್ತೊಮ್ಮೆ ಸ್ಮೃತಿ ಮಂಧಾನ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು...ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಫಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಕನ್ನಡದಲ್ಲಿಯೇ ಈ ಸಲ ಕಪ್ ನಮ್ದು ಎಂದು ಬರೆಯುವ ಮೂಲಕ ಎಂಬುದು ವಿಶೇಷ.

3 / 6
ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

ಸ್ಮೃತಿ ಮಂಧಾನ ಅವರ ಕನ್ನಡದ ಪೋಸ್ಟ್ ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಆರ್​ಸಿಬಿ ತಂಡದ ಕೂಲ್ ಕ್ಯಾಪ್ಟನ್​ ಅನ್ನು ಹಾಡಿ ಹೊಗಳುತ್ತಿದ್ದಾರೆ.

4 / 6
ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಿನಲ್ಲಿ 16 ವರ್ಷಗಳ ಬಳಿಕ ಆರ್​ಸಿಬಿ ಫ್ರಾಂಚೈಸಿಗೆ ಚೊಚ್ಚಲ ಟ್ರೋಫಿ ಗೆದ್ದು ಕೊಡುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಆರ್​ಸಿಬಿ ಮಹಿಳಾ ತಂಡ ಕೂಡ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮ ನಾಳೆ (ಮಾ.19) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದೇ ವೇಳೆ ಆರ್​ಸಿಬಿ ಪುರುಷ ಮತ್ತು ಮಹಿಳಾ ತಂಡಗಳು ಜೊತೆಯಾಗಿ ಕಾಣಿಸಿಕೊಳ್ಳಲಿದೆ.

6 / 6
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ