AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

IPL 2022 RCB Target Players: ಐಪಿಎಲ್​ನ ಈ ಹಿಂದಿನ ಸೀಸನ್​ನ ಆರಂಭದಲ್ಲಿ ನಾನು ಡೆತ್ ಓವರ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ RCB ಫ್ರಾಂಚೈಸ್​ ತನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ವರ್ಗಾವಣೆ ಮಾಡಿಕೊಂಡಿತ್ತು.

TV9 Web
| Edited By: |

Updated on: Jan 08, 2022 | 3:02 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾದ ಬೆನ್ನಲ್ಲೇ ಯಾವ ಫ್ರಾಂಚೈಸ್​ ಯಾರನ್ನು ಖರೀದಿಸಲಿದೆ ಎಂಬ ಚರ್ಚೆಗಳು ಆರಂಭವಾಗಿದೆ. ಈಗಾಗಲೇ 8 ತಂಡಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ರಿಟೈನ್ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾದ ಬೆನ್ನಲ್ಲೇ ಯಾವ ಫ್ರಾಂಚೈಸ್​ ಯಾರನ್ನು ಖರೀದಿಸಲಿದೆ ಎಂಬ ಚರ್ಚೆಗಳು ಆರಂಭವಾಗಿದೆ. ಈಗಾಗಲೇ 8 ತಂಡಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ರಿಟೈನ್ ಮಾಡಿಕೊಂಡಿದೆ.

1 / 5
ಆದರೆ ಆರ್​ಸಿಬಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಂಡದ ಖಾಯಂ ಸದಸ್ಯರೆನಿಸಿಕೊಂಡಿದ್ದ ಯುಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ಹರ್ಷಲ್ ಪಟೇಲ್ ಅವರಂತಹ ಆಟಗಾರರಿದ್ದರು ಎಂಬುದು ವಿಶೇಷ. ಅದರಲ್ಲೂ ಕಳೆದ ಸೀಸನ್​ನಲ್ಲಿನ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್ ಅವರನ್ನು ರಿಲೀಸ್ ಮಾಡಿ ಆರ್​ಸಿಬಿ ಅಚ್ಚರಿ ಮೂಡಿಸಿತ್ತು.

ಆದರೆ ಆರ್​ಸಿಬಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಂಡದ ಖಾಯಂ ಸದಸ್ಯರೆನಿಸಿಕೊಂಡಿದ್ದ ಯುಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ಹರ್ಷಲ್ ಪಟೇಲ್ ಅವರಂತಹ ಆಟಗಾರರಿದ್ದರು ಎಂಬುದು ವಿಶೇಷ. ಅದರಲ್ಲೂ ಕಳೆದ ಸೀಸನ್​ನಲ್ಲಿನ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್ ಅವರನ್ನು ರಿಲೀಸ್ ಮಾಡಿ ಆರ್​ಸಿಬಿ ಅಚ್ಚರಿ ಮೂಡಿಸಿತ್ತು.

2 / 5
 ಇದೀಗ ನಾನು ಮತ್ತೆ ಆರ್​ಸಿಬಿ ಪರ ಆಡಲು ಬಯಸುತ್ತೇನೆ ಎಂದು ಹರ್ಷಲ್ ಪಟೇಲ್ ಹೇಳಿದ್ದಾರೆ. ಅಂದರೆ ಆರ್​ಸಿಬಿ ಮತ್ತೆ ತನ್ನನ್ನು ಖರೀದಿಸಬೇಕೆಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಇದೀಗ ನಾನು ಮತ್ತೆ ಆರ್​ಸಿಬಿ ಪರ ಆಡಲು ಬಯಸುತ್ತೇನೆ ಎಂದು ಹರ್ಷಲ್ ಪಟೇಲ್ ಹೇಳಿದ್ದಾರೆ. ಅಂದರೆ ಆರ್​ಸಿಬಿ ಮತ್ತೆ ತನ್ನನ್ನು ಖರೀದಿಸಬೇಕೆಂದು ಪರೋಕ್ಷವಾಗಿ ತಿಳಿಸಿದ್ದಾರೆ.

3 / 5
ನಾನು ಮತ್ತೊಮ್ಮೆ ಆರ್‌ಸಿಬಿ ತಂಡದ ಭಾಗವಾಗಲು ಬಯಸುತ್ತೇನೆ. ಆರ್​ಸಿಬಿ ಫ್ರಾಂಚೈಸ್ ನನ್ನ ವೃತ್ತಿಜೀವನಕ್ಕೆ ಹೊಸ ದಿಕ್ಕನ್ನು ತೋರಿಸಿದೆ. . ಈ ತಂಡವು ನನ್ನನ್ನು ಅನುಭವಿ ಡೆತ್ ಬೌಲರ್ ಆಗಿ ರೂಪುಗೊಳ್ಳಲು ಸಹಾಯ ಮಾಡಿದೆ. ಹೀಗಾಗಿ ನಾನು ಮತ್ತೊಮ್ಮೆ RCBಯ ಕೆಂಪು ಜೆರ್ಸಿಯಲ್ಲಿ ಆಡಲು ಬಯಸುತ್ತೇನೆ. ಆರ್‌ಸಿಬಿ ಕೂಡ ನನ್ನ ಖರೀದಿಗಾಗಿ ಅತ್ಯುತ್ತಮ ಪ್ರಯತ್ನ ಮಾಡುವ ನಿರೀಕ್ಷೆಯಿದೆ ಎಂದು ಹರ್ಷಲ್ ಪಟೇಲ್ ತಿಳಿಸಿದ್ದಾರೆ.

ನಾನು ಮತ್ತೊಮ್ಮೆ ಆರ್‌ಸಿಬಿ ತಂಡದ ಭಾಗವಾಗಲು ಬಯಸುತ್ತೇನೆ. ಆರ್​ಸಿಬಿ ಫ್ರಾಂಚೈಸ್ ನನ್ನ ವೃತ್ತಿಜೀವನಕ್ಕೆ ಹೊಸ ದಿಕ್ಕನ್ನು ತೋರಿಸಿದೆ. . ಈ ತಂಡವು ನನ್ನನ್ನು ಅನುಭವಿ ಡೆತ್ ಬೌಲರ್ ಆಗಿ ರೂಪುಗೊಳ್ಳಲು ಸಹಾಯ ಮಾಡಿದೆ. ಹೀಗಾಗಿ ನಾನು ಮತ್ತೊಮ್ಮೆ RCBಯ ಕೆಂಪು ಜೆರ್ಸಿಯಲ್ಲಿ ಆಡಲು ಬಯಸುತ್ತೇನೆ. ಆರ್‌ಸಿಬಿ ಕೂಡ ನನ್ನ ಖರೀದಿಗಾಗಿ ಅತ್ಯುತ್ತಮ ಪ್ರಯತ್ನ ಮಾಡುವ ನಿರೀಕ್ಷೆಯಿದೆ ಎಂದು ಹರ್ಷಲ್ ಪಟೇಲ್ ತಿಳಿಸಿದ್ದಾರೆ.

4 / 5
ಐಪಿಎಲ್​ನ ಈ ಹಿಂದಿನ ಸೀಸನ್​ನ ಆರಂಭದಲ್ಲಿ ನಾನು ಡೆತ್ ಓವರ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ RCB ಫ್ರಾಂಚೈಸ್​ ತನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ವರ್ಗಾವಣೆ ಮಾಡಿಕೊಂಡಿತ್ತು. ಅವರು ಬಹುಶಃ ನನ್ನಲ್ಲಿ ಉತ್ತಮ ಡೆತ್ ಬೌಲಿಂಗ್​ನ ಸಾಮರ್ಥ್ಯವನ್ನು ಗಮನಿಸಿದ್ದಾರೆ. ಹೀಗಾಗಿ ನಾನು ಕೂಡ ಅದರತ್ತ ಹೆಚ್ಚಿನ ಗಮನಹರಿಸಿದೆ. ಅದು ಫಲ ನೀಡಿದ ಪರಿಣಾಮ 32 ವಿಕೆಟ್ ಪಡೆಯುವಂತಾಯಿತು ಎಂದು ಹರ್ಷಲ್ ಪಟೇಲ್ ಹರ್ಷ ವ್ಯಕ್ತಪಡಿಸಿದರು.

ಐಪಿಎಲ್​ನ ಈ ಹಿಂದಿನ ಸೀಸನ್​ನ ಆರಂಭದಲ್ಲಿ ನಾನು ಡೆತ್ ಓವರ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ RCB ಫ್ರಾಂಚೈಸ್​ ತನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ವರ್ಗಾವಣೆ ಮಾಡಿಕೊಂಡಿತ್ತು. ಅವರು ಬಹುಶಃ ನನ್ನಲ್ಲಿ ಉತ್ತಮ ಡೆತ್ ಬೌಲಿಂಗ್​ನ ಸಾಮರ್ಥ್ಯವನ್ನು ಗಮನಿಸಿದ್ದಾರೆ. ಹೀಗಾಗಿ ನಾನು ಕೂಡ ಅದರತ್ತ ಹೆಚ್ಚಿನ ಗಮನಹರಿಸಿದೆ. ಅದು ಫಲ ನೀಡಿದ ಪರಿಣಾಮ 32 ವಿಕೆಟ್ ಪಡೆಯುವಂತಾಯಿತು ಎಂದು ಹರ್ಷಲ್ ಪಟೇಲ್ ಹರ್ಷ ವ್ಯಕ್ತಪಡಿಸಿದರು.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ