AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 World Cup 2024: ಸರಿಸಮಾನಾದ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್ ಗೆದ್ದ ತಂಡಕ್ಕೆ ಪುರುಷ ಟಿ20 ಚಾಂಪಿಯನ್ ತಂಡಕ್ಕೆ ಸಿಕ್ಕಷ್ಟೇ ಸರಿಸಮಾನದ ಬಹುಮಾನ ಸಿಗಲಿದೆ ಎಂಬುದು ದೊಡ್ಡ ಸುದ್ದಿಯಾಗಿದೆ. ಇನ್ನು ಮಹಿಳಾ ಟಿ20 ವಿಶ್ವಕಪ್‌ನಲ್ಲಿ ವಿಜೇತ ತಂಡಕ್ಕೆ 19 ಕೋಟಿ 59 ಲಕ್ಷ ರೂಪಾಯಿ ನೀಡುವುದಾಗಿ ಐಸಿಸಿ ಪ್ರಕಟಿಸಿದೆ.

ಪೃಥ್ವಿಶಂಕರ
|

Updated on: Sep 17, 2024 | 7:23 PM

Share
ಇದೇ ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಯುಎಇಯಲ್ಲಿ ನಡೆಯುತ್ತಿರುವ ಈ ಚುಟುಕು ಸಮರಕ್ಕೆ ಇದೀಗ ದಿನಗಣನೆ ಆರಂಭವಾಗಿದೆ. ಈ ನಡುವೆ ಐಸಿಸಿ, ಈ ಪಂದ್ಯಾವಳಿಯ ಬಹುಮಾನ ಮೊತ್ತವನ್ನು ಪ್ರಕಟಿಸಿದೆ. ಅದರಂತೆ ಈ ಬಾರಿಯ ಚಾಂಪಿಯನ್ ತಂಡಕ್ಕೆ ಕೋಟಿಗಳ ಸುರಿಮಳೆಯಾಗಲಿದೆ.

ಇದೇ ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಯುಎಇಯಲ್ಲಿ ನಡೆಯುತ್ತಿರುವ ಈ ಚುಟುಕು ಸಮರಕ್ಕೆ ಇದೀಗ ದಿನಗಣನೆ ಆರಂಭವಾಗಿದೆ. ಈ ನಡುವೆ ಐಸಿಸಿ, ಈ ಪಂದ್ಯಾವಳಿಯ ಬಹುಮಾನ ಮೊತ್ತವನ್ನು ಪ್ರಕಟಿಸಿದೆ. ಅದರಂತೆ ಈ ಬಾರಿಯ ಚಾಂಪಿಯನ್ ತಂಡಕ್ಕೆ ಕೋಟಿಗಳ ಸುರಿಮಳೆಯಾಗಲಿದೆ.

1 / 7
ಮಹಿಳಾ ಟಿ20 ವಿಶ್ವಕಪ್ ಗೆದ್ದ ತಂಡಕ್ಕೆ ಪುರುಷ ಟಿ20 ಚಾಂಪಿಯನ್ ತಂಡಕ್ಕೆ ಸಿಕ್ಕಷ್ಟೇ ಸರಿಸಮಾನದ ಬಹುಮಾನ ಸಿಗಲಿದೆ ಎಂಬುದು ದೊಡ್ಡ ಸುದ್ದಿಯಾಗಿದೆ. ಇನ್ನು ಮಹಿಳಾ ಟಿ20 ವಿಶ್ವಕಪ್‌ನಲ್ಲಿ ವಿಜೇತ ತಂಡಕ್ಕೆ 19 ಕೋಟಿ 59 ಲಕ್ಷ ರೂಪಾಯಿ ನೀಡುವುದಾಗಿ ಐಸಿಸಿ ಪ್ರಕಟಿಸಿದೆ.

ಮಹಿಳಾ ಟಿ20 ವಿಶ್ವಕಪ್ ಗೆದ್ದ ತಂಡಕ್ಕೆ ಪುರುಷ ಟಿ20 ಚಾಂಪಿಯನ್ ತಂಡಕ್ಕೆ ಸಿಕ್ಕಷ್ಟೇ ಸರಿಸಮಾನದ ಬಹುಮಾನ ಸಿಗಲಿದೆ ಎಂಬುದು ದೊಡ್ಡ ಸುದ್ದಿಯಾಗಿದೆ. ಇನ್ನು ಮಹಿಳಾ ಟಿ20 ವಿಶ್ವಕಪ್‌ನಲ್ಲಿ ವಿಜೇತ ತಂಡಕ್ಕೆ 19 ಕೋಟಿ 59 ಲಕ್ಷ ರೂಪಾಯಿ ನೀಡುವುದಾಗಿ ಐಸಿಸಿ ಪ್ರಕಟಿಸಿದೆ.

2 / 7
ಇತ್ತೀಚೆಗಷ್ಟೇ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ 2024 ರ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಟೀಮ್ ಇಂಡಿಯಾ ಇದಕ್ಕಿಂತ ಕೊಂಚ ಹೆಚ್ಚು, ಅಂದರೆ 20.52 ಕೋಟಿ ರೂ. ಬಹುಮಾನ ಪಡೆದಿತ್ತು.

ಇತ್ತೀಚೆಗಷ್ಟೇ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ 2024 ರ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಟೀಮ್ ಇಂಡಿಯಾ ಇದಕ್ಕಿಂತ ಕೊಂಚ ಹೆಚ್ಚು, ಅಂದರೆ 20.52 ಕೋಟಿ ರೂ. ಬಹುಮಾನ ಪಡೆದಿತ್ತು.

3 / 7
ಮೇಲೆ ಹೇಳಿದಂತೆ ಮಹಿಳೆಯರ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇಗೆ ಸ್ಥಳಾಂತರಿಸಲಾಗಿದೆ. ವಾಸ್ತವವಾಗಿ ಈ ಮೊದಲು ಈ ಪಂದ್ಯವಾಳಿಗೆ ಬಾಂಗ್ಲಾದೇಶ ಆತಿಥ್ಯವಹಿಸಬೇಕಿತ್ತು. ಆದರೆ ಅಲ್ಲಿ ಮೀಸಲಾತಿ ವಿರುದ್ಧ ಭುಗಿಲೆದ್ದ ಹಿಂಸಾಚಾರದಿಂದಾಗಿ ಐಸಿಸಿ, ಪಂದ್ಯವಾಳಿಯನ್ನು ಸ್ಥಳಾಂತರಿಸುವ ನಿರ್ಧಾರಕ್ಕೆ ಬಂದಿತು.

ಮೇಲೆ ಹೇಳಿದಂತೆ ಮಹಿಳೆಯರ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇಗೆ ಸ್ಥಳಾಂತರಿಸಲಾಗಿದೆ. ವಾಸ್ತವವಾಗಿ ಈ ಮೊದಲು ಈ ಪಂದ್ಯವಾಳಿಗೆ ಬಾಂಗ್ಲಾದೇಶ ಆತಿಥ್ಯವಹಿಸಬೇಕಿತ್ತು. ಆದರೆ ಅಲ್ಲಿ ಮೀಸಲಾತಿ ವಿರುದ್ಧ ಭುಗಿಲೆದ್ದ ಹಿಂಸಾಚಾರದಿಂದಾಗಿ ಐಸಿಸಿ, ಪಂದ್ಯವಾಳಿಯನ್ನು ಸ್ಥಳಾಂತರಿಸುವ ನಿರ್ಧಾರಕ್ಕೆ ಬಂದಿತು.

4 / 7
ಈ ಬಾರಿಯ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ 19 ಕೋಟಿ 59 ರೂ. ಬಹುಮಾನ ಸಿಕ್ಕರೆ, ರನ್ನರ್ ಅಪ್ ತಂಡ 9 ಕೋಟಿ 79 ಲಕ್ಷ ರೂ. ಬಹುಮಾನ ಪಡೆಯಲಿದೆ. ಕಳೆದ ವರ್ಷ ರನ್ನರ್ ಅಪ್ ಆಗಿದ್ದ ದಕ್ಷಿಣ ಆಫ್ರಿಕಾ ತಂಡ ಐದು ಲಕ್ಷ ಡಾಲರ್ ಪಡೆದಿತ್ತು. ಇದೀಗ ಈ ಬಹುಮಾನದ ಗಾತ್ರದಲ್ಲಿ ಶೇ.134ರಷ್ಟು ಹೆಚ್ಚಳ ಆಗಿದೆ.

ಈ ಬಾರಿಯ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ 19 ಕೋಟಿ 59 ರೂ. ಬಹುಮಾನ ಸಿಕ್ಕರೆ, ರನ್ನರ್ ಅಪ್ ತಂಡ 9 ಕೋಟಿ 79 ಲಕ್ಷ ರೂ. ಬಹುಮಾನ ಪಡೆಯಲಿದೆ. ಕಳೆದ ವರ್ಷ ರನ್ನರ್ ಅಪ್ ಆಗಿದ್ದ ದಕ್ಷಿಣ ಆಫ್ರಿಕಾ ತಂಡ ಐದು ಲಕ್ಷ ಡಾಲರ್ ಪಡೆದಿತ್ತು. ಇದೀಗ ಈ ಬಹುಮಾನದ ಗಾತ್ರದಲ್ಲಿ ಶೇ.134ರಷ್ಟು ಹೆಚ್ಚಳ ಆಗಿದೆ.

5 / 7
ಇನ್ನು ಸೆಮಿಫೈನಲ್‌ನಲ್ಲಿ ಸೋತ ತಂಡಗಳು 5 ಕೋಟಿ 65 ಲಕ್ಷ ರೂ. ಬಹುಮಾನ ಪಡೆಯಲಿವೆ. ಕಳೆದ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್‌ ಸೋತ ತಂಡಗಳಿಗೆ 2 ಲಕ್ಷದ 10 ಸಾವಿರ ಡಾಲರ್ ಬಹುಮಾನ ನೀಡಲಾಗಿತ್ತು. ಈ ರೀತಿಯಾಗಿ, ಪಂದ್ಯಾವಳಿಯ ಒಟ್ಟು ಬಹುಮಾನದ ಮೊತ್ತವನ್ನು ಹತ್ತಿರಹಿತ್ತರ 80 ಕೋಟಿಗೆ ಮೀಸಲಿರಿಸಲಾಗಿದೆ.

ಇನ್ನು ಸೆಮಿಫೈನಲ್‌ನಲ್ಲಿ ಸೋತ ತಂಡಗಳು 5 ಕೋಟಿ 65 ಲಕ್ಷ ರೂ. ಬಹುಮಾನ ಪಡೆಯಲಿವೆ. ಕಳೆದ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್‌ ಸೋತ ತಂಡಗಳಿಗೆ 2 ಲಕ್ಷದ 10 ಸಾವಿರ ಡಾಲರ್ ಬಹುಮಾನ ನೀಡಲಾಗಿತ್ತು. ಈ ರೀತಿಯಾಗಿ, ಪಂದ್ಯಾವಳಿಯ ಒಟ್ಟು ಬಹುಮಾನದ ಮೊತ್ತವನ್ನು ಹತ್ತಿರಹಿತ್ತರ 80 ಕೋಟಿಗೆ ಮೀಸಲಿರಿಸಲಾಗಿದೆ.

6 / 7
ಉಳಿದಂತೆ ಈ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಗುಂಪು ಹಂತದಿಂದ ಹೊರಬೀಳುವ ತಂಡಗಳು ಸರಿ ಸುಮಾರು 26 ಲಕ್ಷ ರೂ ಬಹುಮಾನ ಪಡೆದರೆ, ಸೆಮಿಫೈನಲ್ ತಲುಪಲು ವಿಫಲವಾದ ಆರು ತಂಡಗಳು ತಮ್ಮ ಅಂತಿಮ ಸ್ಥಾನಗಳ ಆಧಾರದ ಮೇಲೂ ಬಹುಮಾನವನ್ನು ಪಡೆಯಲ್ಲಿವೆ.

ಉಳಿದಂತೆ ಈ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಗುಂಪು ಹಂತದಿಂದ ಹೊರಬೀಳುವ ತಂಡಗಳು ಸರಿ ಸುಮಾರು 26 ಲಕ್ಷ ರೂ ಬಹುಮಾನ ಪಡೆದರೆ, ಸೆಮಿಫೈನಲ್ ತಲುಪಲು ವಿಫಲವಾದ ಆರು ತಂಡಗಳು ತಮ್ಮ ಅಂತಿಮ ಸ್ಥಾನಗಳ ಆಧಾರದ ಮೇಲೂ ಬಹುಮಾನವನ್ನು ಪಡೆಯಲ್ಲಿವೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​