AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: 4ನೇ ಟೆಸ್ಟ್​ಗೂ ಮುನ್ನ ಜಡೇಜಾ ಖಾತೆಗೆ ಸೇರುತ್ತಾ ಐಸಿಸಿ ಅವಾರ್ಡ್​? ಮೂವರ ನಡುವೆ ಪೈಪೋಟಿ!

ICC Award:ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಪೃಥ್ವಿಶಂಕರ
| Edited By: |

Updated on:Mar 08, 2023 | 1:37 PM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

1 / 6
ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 6
ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

4 / 6
ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

5 / 6
ಇನ್ನು ಕೆರಿಬಿಯನ್ ಬೌಲರ್  ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

ಇನ್ನು ಕೆರಿಬಿಯನ್ ಬೌಲರ್ ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

6 / 6

Published On - 1:20 pm, Wed, 8 March 23

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ