AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: 4ನೇ ಟೆಸ್ಟ್​ಗೂ ಮುನ್ನ ಜಡೇಜಾ ಖಾತೆಗೆ ಸೇರುತ್ತಾ ಐಸಿಸಿ ಅವಾರ್ಡ್​? ಮೂವರ ನಡುವೆ ಪೈಪೋಟಿ!

ICC Award:ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಪೃಥ್ವಿಶಂಕರ
| Updated By: ರಮೇಶ್ ಬಿ. ಜವಳಗೇರಾ|

Updated on:Mar 08, 2023 | 1:37 PM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

1 / 6
ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 6
ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

4 / 6
ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

5 / 6
ಇನ್ನು ಕೆರಿಬಿಯನ್ ಬೌಲರ್  ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

ಇನ್ನು ಕೆರಿಬಿಯನ್ ಬೌಲರ್ ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

6 / 6

Published On - 1:20 pm, Wed, 8 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ