AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 World Cup: ಭಾರತದ ವಿರುದ್ಧ ಸೋತ ಪಾಕಿಸ್ತಾನ ತಂಡಕ್ಕೆ ದಂಡ

Women's T20 World Cup 2026: 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಹೀನಾಯ ಸೋಲಿನ ನಂತರ ಪಾಕಿಸ್ತಾನ ಮಹಿಳಾ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ನಿಧಾನಗತಿಯ ಓವರ್ ಬೌಲಿಂಗ್ ಕಾರಣಕ್ಕೆ ಐಸಿಸಿ ತಂಡಕ್ಕೆ ಪಂದ್ಯ ಶುಲ್ಕದ 5% ದಂಡ ವಿಧಿಸಿದೆ. ಈ ಡಬಲ್ ಆಘಾತವು ಪಾಕ್ ತಂಡದ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ಅವಕಾಶಗಳನ್ನು ತೀವ್ರವಾಗಿ ಕಡಿಮೆ ಮಾಡಿದೆ, ಪ್ರಸ್ತುತ ಅವರು ಗುಂಪು ಎ ನಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 16, 2026 | 10:07 PM

Share
2026 ರ ಮಹಿಳಾ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಮಹಿಳಾ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಪಂದ್ಯಾವಳಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡವನ್ನು ಎದುರಿಸಿದ್ದ ಪಾಕಿಸ್ತಾನ ಮಹಿಳಾತ ತಂಡ 64 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತ್ತು. ಈ ಸೋಲಿನ ಆಘಾತದಿಂದ ಹೊರಬರುವ ಮುನ್ನವೇ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ (PC-PTI).

2026 ರ ಮಹಿಳಾ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನ ಮಹಿಳಾ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಪಂದ್ಯಾವಳಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡವನ್ನು ಎದುರಿಸಿದ್ದ ಪಾಕಿಸ್ತಾನ ಮಹಿಳಾತ ತಂಡ 64 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತ್ತು. ಈ ಸೋಲಿನ ಆಘಾತದಿಂದ ಹೊರಬರುವ ಮುನ್ನವೇ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ (PC-PTI).

1 / 5
ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸರಿಯಾದ ಸಮಯಕ್ಕೆ ಓವರ್​ಗಳನ್ನು ಮುಗಿಸದಿದ್ದಕ್ಕೆ ಐಸಿಸಿ ಶಿಕ್ಷೆ ವಿಧಿಸಿದೆ. ನಿಧಾನಗತಿಯ ಓವರ್ ನಿಯಮ ಉಲ್ಲಂಘಿಸಿದ ಇಡೀ ಪಾಕಿಸ್ತಾನ ತಂಡಕ್ಕೆ ಪಂದ್ಯ ಶುಲ್ಕದ ಐದು ಪ್ರತಿಶತ ಮೊತ್ತವನ್ನು ಕಡಿತಗೊಳಿಸಲಾಗಿದೆ (PC-PTI).

ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸರಿಯಾದ ಸಮಯಕ್ಕೆ ಓವರ್​ಗಳನ್ನು ಮುಗಿಸದಿದ್ದಕ್ಕೆ ಐಸಿಸಿ ಶಿಕ್ಷೆ ವಿಧಿಸಿದೆ. ನಿಧಾನಗತಿಯ ಓವರ್ ನಿಯಮ ಉಲ್ಲಂಘಿಸಿದ ಇಡೀ ಪಾಕಿಸ್ತಾನ ತಂಡಕ್ಕೆ ಪಂದ್ಯ ಶುಲ್ಕದ ಐದು ಪ್ರತಿಶತ ಮೊತ್ತವನ್ನು ಕಡಿತಗೊಳಿಸಲಾಗಿದೆ (PC-PTI).

2 / 5
ಪಾಕಿಸ್ತಾನ ತಂಡವು ನಿಗದಿತ ಸಮಯಕ್ಕಿಂತ ಒಂದು ಓವರ್ ಕಡಿಮೆ ಬೌಲಿಂಗ್ ಮಾಡಿದ್ದು, ಈ ಕಾರಣಕ್ಕಾಗಿ ಪಂದ್ಯದ ರೆಫರಿ ಟ್ರೂಡಿ ಆಂಡರ್ಸನ್ ಇಡೀ ತಂಡದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಪಾಕಿಸ್ತಾನ ತಂಡದ ನಾಯಕಿ ಫಾತಿಮಾ ಸನಾ ತಪ್ಪನ್ನು ಒಪ್ಪಿಕೊಂಡಿದ್ದರಿಂದ ವಿಚಾರಣೆಯ ಅಗತ್ಯವಿಲ್ಲ ಎಂದು ರೆಫರಿ ತಿಳಿಸಿದ್ದಾರೆ (PC-PTI).

ಪಾಕಿಸ್ತಾನ ತಂಡವು ನಿಗದಿತ ಸಮಯಕ್ಕಿಂತ ಒಂದು ಓವರ್ ಕಡಿಮೆ ಬೌಲಿಂಗ್ ಮಾಡಿದ್ದು, ಈ ಕಾರಣಕ್ಕಾಗಿ ಪಂದ್ಯದ ರೆಫರಿ ಟ್ರೂಡಿ ಆಂಡರ್ಸನ್ ಇಡೀ ತಂಡದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಪಾಕಿಸ್ತಾನ ತಂಡದ ನಾಯಕಿ ಫಾತಿಮಾ ಸನಾ ತಪ್ಪನ್ನು ಒಪ್ಪಿಕೊಂಡಿದ್ದರಿಂದ ವಿಚಾರಣೆಯ ಅಗತ್ಯವಿಲ್ಲ ಎಂದು ರೆಫರಿ ತಿಳಿಸಿದ್ದಾರೆ (PC-PTI).

3 / 5
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 170 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತ್ತಾದರೂ, ದೀಪ್ತಿ ಶರ್ಮಾರ ಮಾರಕ ದಾಳಿಗೆ ನಲುಗಿ ಕೇವಲ 106 ರನ್‌ಗಳಿಗೆ ಆಲೌಟ್ ಆಯಿತು (PC-PTI).

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 170 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತ್ತಾದರೂ, ದೀಪ್ತಿ ಶರ್ಮಾರ ಮಾರಕ ದಾಳಿಗೆ ನಲುಗಿ ಕೇವಲ 106 ರನ್‌ಗಳಿಗೆ ಆಲೌಟ್ ಆಯಿತು (PC-PTI).

4 / 5
ಭಾರತದ ವಿರುದ್ಧದ ಭಾರೀ ಸೋಲಿನ ನಂತರ, ಪಾಕಿಸ್ತಾನ ಮುಂದಿನ ಸುತ್ತಿಗೆ ಮುನ್ನಡೆಯುವ ಸಾಧ್ಯತೆಗಳು ತೀರಾ ಕಡಿಮೆ ಎಂದು ತೋರುತ್ತದೆ. ಏಕೆಂದರೆ ಪಾಕ್ ತಂಡ ಪ್ರಸ್ತುತ ಗ್ರೂಪ್ ಎ ನಲ್ಲಿ ಐದನೇ ಸ್ಥಾನದಲ್ಲಿದ್ದು ಅದರ ನೆಟ್ ರನ್​ರೇಟ್ -3,200 ಆಗಿದೆ. ಇದೀಗ ಪಾಕಿಸ್ತಾನ ತನ್ನ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ, ಈ ಪಂದ್ಯ ಜೂನ್ 17 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ (PC-PTI).

ಭಾರತದ ವಿರುದ್ಧದ ಭಾರೀ ಸೋಲಿನ ನಂತರ, ಪಾಕಿಸ್ತಾನ ಮುಂದಿನ ಸುತ್ತಿಗೆ ಮುನ್ನಡೆಯುವ ಸಾಧ್ಯತೆಗಳು ತೀರಾ ಕಡಿಮೆ ಎಂದು ತೋರುತ್ತದೆ. ಏಕೆಂದರೆ ಪಾಕ್ ತಂಡ ಪ್ರಸ್ತುತ ಗ್ರೂಪ್ ಎ ನಲ್ಲಿ ಐದನೇ ಸ್ಥಾನದಲ್ಲಿದ್ದು ಅದರ ನೆಟ್ ರನ್​ರೇಟ್ -3,200 ಆಗಿದೆ. ಇದೀಗ ಪಾಕಿಸ್ತಾನ ತನ್ನ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ, ಈ ಪಂದ್ಯ ಜೂನ್ 17 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ (PC-PTI).

5 / 5
Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ