AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ನಲ್ಲಿ ಹೊಸ ನಿಯಮ ಜಾರಿಗೆ ತಂದ ಐಸಿಸಿ; ಬೌಲಿಂಗ್ ತಂಡ ಮೈಮರೆತರೆ 5 ರನ್ ದಂಡ..!

ICC: ಆಟದ ವೇಗವನ್ನು ಹೆಚ್ಚಿಸಲು ಈ ನಿಯಮವನ್ನು ತರಲಾಗಿದ್ದು, ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಸಲುವಾಗಿ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲಾಗುತ್ತಿದೆ. ಈ ನಿಯಮವನ್ನು ಪ್ರಾಯೋಗಿಕವಾಗಿ ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಜಾರಿಗೊಳಿಸಲಾಗುವುದು.

ಪೃಥ್ವಿಶಂಕರ
|

Updated on:Nov 22, 2023 | 10:27 AM

ಅಹಮದಾಬಾದ್​ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಸ್ಟಾಪ್ ಕ್ಲಾಕ್ ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಈ ನಿಯಮಗಳನ್ನು ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಬಳಸಲಾಗುವುದು ಎಂದು ಐಸಿಸಿ ತಿಳಿಸಿದೆ.

ಅಹಮದಾಬಾದ್​ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಸ್ಟಾಪ್ ಕ್ಲಾಕ್ ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಈ ನಿಯಮಗಳನ್ನು ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಬಳಸಲಾಗುವುದು ಎಂದು ಐಸಿಸಿ ತಿಳಿಸಿದೆ.

1 / 7
ವಾಸ್ತವವಾಗಿ ಆಟದ ವೇಗವನ್ನು ಹೆಚ್ಚಿಸಲು ಈ ನಿಯಮವನ್ನು ತರಲಾಗಿದ್ದು, ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಸಲಯವಾಗಿ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲಾಗುತ್ತಿದೆ. ಈ ನಿಯಮವನ್ನು ಪ್ರಾಯೋಗಿಕವಾಗಿ ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಜಾರಿಗೊಳಿಸಲಾಗುವುದು.

ವಾಸ್ತವವಾಗಿ ಆಟದ ವೇಗವನ್ನು ಹೆಚ್ಚಿಸಲು ಈ ನಿಯಮವನ್ನು ತರಲಾಗಿದ್ದು, ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಸಲಯವಾಗಿ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲಾಗುತ್ತಿದೆ. ಈ ನಿಯಮವನ್ನು ಪ್ರಾಯೋಗಿಕವಾಗಿ ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಜಾರಿಗೊಳಿಸಲಾಗುವುದು.

2 / 7
ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಪುರುಷರ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲು CEC ಸಮ್ಮತಿಸಿದೆ. ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಈ ನಿಯಮವನ್ನು ಬಳಸಲಾಗುತ್ತದೆ.

ಡಿಸೆಂಬರ್ 2023 ರಿಂದ ಏಪ್ರಿಲ್ 2024 ರವರೆಗೆ ಪುರುಷರ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲು CEC ಸಮ್ಮತಿಸಿದೆ. ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಈ ನಿಯಮವನ್ನು ಬಳಸಲಾಗುತ್ತದೆ.

3 / 7
ನಿಯಮಗಳ ಪ್ರಕಾರ, ಬೌಲಿಂಗ್ ತಂಡವು ಹಿಂದಿನ ಓವರ್ ಮುಗಿದ 60 ಸೆಕೆಂಡುಗಳ ಒಳಗೆ ಮುಂದಿನ ಓವರ್ ಅನ್ನು ಬೌಲ್ ಮಾಡಲು ಸಿದ್ಧವಾಗಿರಬೇಕು. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಹಾಗೂ ಈ ರೀತಯ ಘಟನೆ ಇನ್ನಿಂಗ್ಸ್‌ನಲ್ಲಿ ಮೂರನೇ ಬಾರಿಗೆ ಸಂಭವಿಸಿದರೆ ಬೌಲಿಂಗ್ ತಂಡಕ್ಕೆ 5 ರನ್‌ಗಳ ದಂಡವನ್ನು ವಿಧಿಸಲಾಗುತ್ತದೆ.

ನಿಯಮಗಳ ಪ್ರಕಾರ, ಬೌಲಿಂಗ್ ತಂಡವು ಹಿಂದಿನ ಓವರ್ ಮುಗಿದ 60 ಸೆಕೆಂಡುಗಳ ಒಳಗೆ ಮುಂದಿನ ಓವರ್ ಅನ್ನು ಬೌಲ್ ಮಾಡಲು ಸಿದ್ಧವಾಗಿರಬೇಕು. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಹಾಗೂ ಈ ರೀತಯ ಘಟನೆ ಇನ್ನಿಂಗ್ಸ್‌ನಲ್ಲಿ ಮೂರನೇ ಬಾರಿಗೆ ಸಂಭವಿಸಿದರೆ ಬೌಲಿಂಗ್ ತಂಡಕ್ಕೆ 5 ರನ್‌ಗಳ ದಂಡವನ್ನು ವಿಧಿಸಲಾಗುತ್ತದೆ.

4 / 7
ಏಕದಿನ ಪಂದ್ಯಗಳಲ್ಲಿ, ಬೌಲಿಂಗ್ ತಂಡಕ್ಕೆ 50 ಓವರ್‌ಗಳನ್ನು ಬೌಲ್ ಮಾಡಲು 3.5 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ. ಆದರೆ ಟಿ20ಯಲ್ಲಿ ತಂಡಕ್ಕೆ 20 ಓವರ್‌ಗಳನ್ನು ಬೌಲ್ ಮಾಡಲು ಒಂದು ಗಂಟೆ 25 ನಿಮಿಷಗಳು ಸಿಗುತ್ತವೆ.

ಏಕದಿನ ಪಂದ್ಯಗಳಲ್ಲಿ, ಬೌಲಿಂಗ್ ತಂಡಕ್ಕೆ 50 ಓವರ್‌ಗಳನ್ನು ಬೌಲ್ ಮಾಡಲು 3.5 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ. ಆದರೆ ಟಿ20ಯಲ್ಲಿ ತಂಡಕ್ಕೆ 20 ಓವರ್‌ಗಳನ್ನು ಬೌಲ್ ಮಾಡಲು ಒಂದು ಗಂಟೆ 25 ನಿಮಿಷಗಳು ಸಿಗುತ್ತವೆ.

5 / 7
ಯಾವುದೇ ತಂಡವು ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದಿದ್ದರೆ, ನಿಧಾನಗತಿಯ ಓವರ್‌ರೇಟ್‌ನ ನಿಯಮದಿಂದಾಗಿ, ತಂಡವು ಉಳಿದ ಓವರ್‌ಗಳಲ್ಲಿ 30 ಯಾರ್ಡ್ ವೃತ್ತದೊಳಗೆ ಮತ್ತೊಬ್ಬ ಆಟಗಾರನನ್ನು ಇರಿಸಬೇಕಾಗುತ್ತದೆ. ಹಾಗೆಯೇ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ಅಡಿಯಲ್ಲಿ ದಂಡ ವಿಧಿಸುವ ಅವಕಾಶವೂ ಇದೆ.

ಯಾವುದೇ ತಂಡವು ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದಿದ್ದರೆ, ನಿಧಾನಗತಿಯ ಓವರ್‌ರೇಟ್‌ನ ನಿಯಮದಿಂದಾಗಿ, ತಂಡವು ಉಳಿದ ಓವರ್‌ಗಳಲ್ಲಿ 30 ಯಾರ್ಡ್ ವೃತ್ತದೊಳಗೆ ಮತ್ತೊಬ್ಬ ಆಟಗಾರನನ್ನು ಇರಿಸಬೇಕಾಗುತ್ತದೆ. ಹಾಗೆಯೇ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ಅಡಿಯಲ್ಲಿ ದಂಡ ವಿಧಿಸುವ ಅವಕಾಶವೂ ಇದೆ.

6 / 7
ಈಗ ಸ್ಟಾಪ್ ಕ್ಲಾಕ್ ನಿಯಮದಿಂದ ಬ್ಯಾಟಿಂಗ್ ತಂಡಕ್ಕೆ ಲಾಭವಾಗಲಿದೆ. ಯಾವುದೇ ತಂಡವು ಹಿಂದಿನ ಓವರ್ ಮುಗಿದ ನಂತರ ಮುಂದಿನ ಓವರ್ ಅನ್ನು ಬೌಲ್ ಮಾಡಲು ಎರಡು ಬಾರಿ 60 ಸೆಕೆಂಡುಗಳಿಗಿಂತ ಹೆಚ್ಚು ತೆಗೆದುಕೊಂಡರೆ, ಬ್ಯಾಟಿಂಗ್ ತಂಡಕ್ಕೆ 5 ರನ್​ಗಳನ್ನು ನೀಡಲಾಗುತ್ತದೆ.

ಈಗ ಸ್ಟಾಪ್ ಕ್ಲಾಕ್ ನಿಯಮದಿಂದ ಬ್ಯಾಟಿಂಗ್ ತಂಡಕ್ಕೆ ಲಾಭವಾಗಲಿದೆ. ಯಾವುದೇ ತಂಡವು ಹಿಂದಿನ ಓವರ್ ಮುಗಿದ ನಂತರ ಮುಂದಿನ ಓವರ್ ಅನ್ನು ಬೌಲ್ ಮಾಡಲು ಎರಡು ಬಾರಿ 60 ಸೆಕೆಂಡುಗಳಿಗಿಂತ ಹೆಚ್ಚು ತೆಗೆದುಕೊಂಡರೆ, ಬ್ಯಾಟಿಂಗ್ ತಂಡಕ್ಕೆ 5 ರನ್​ಗಳನ್ನು ನೀಡಲಾಗುತ್ತದೆ.

7 / 7

Published On - 10:26 am, Wed, 22 November 23

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ