AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ

2026 T20 World Cup Semifinal: 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಕಳೆದ 23 ವರ್ಷಗಳಲ್ಲಿ ಮೊದಲ ಬಾರಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಭಾರತೀಯ ತಂಡ ಐಸಿಸಿ ನಾಕೌಟ್ ಪಂದ್ಯವನ್ನು ಆಡುತ್ತಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಯುವ ಪ್ರತಿಭೆಗಳು ಈ ಐತಿಹಾಸಿಕ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಇದು ಭಾರತೀಯ ಕ್ರಿಕೆಟ್‌ಗೆ ಹೊಸ ಯುಗವನ್ನು ಸೂಚಿಸುತ್ತದೆ.

ಪೃಥ್ವಿಶಂಕರ
|

Updated on: Mar 05, 2026 | 6:00 PM

Share
2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಭಾರತೀಯ ಕ್ರಿಕೆಟ್‌ಗೆ ಐತಿಹಾಸಿಕ ಕ್ಷಣವಾಗಲಿದೆ. ಏಕೆಂದರೆ ಕಳೆದ 23 ವರ್ಷಗಳಿಂದ ಭಾರತೀಯ ಕ್ರಿಕೆಟ್‌ನ ಆಳಿದ ಆ ಇಬ್ಬರು ದಿಗ್ಗಜರಲ್ಲಿ ಒಬ್ಬರೂ ಇಲ್ಲದೆ ಟೀಂ ಇಂಡಿಯಾ ನಾಕೌಟ್ ಪಂದ್ಯವನ್ನು ಆಡುತ್ತಿದೆ.

2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಭಾರತೀಯ ಕ್ರಿಕೆಟ್‌ಗೆ ಐತಿಹಾಸಿಕ ಕ್ಷಣವಾಗಲಿದೆ. ಏಕೆಂದರೆ ಕಳೆದ 23 ವರ್ಷಗಳಿಂದ ಭಾರತೀಯ ಕ್ರಿಕೆಟ್‌ನ ಆಳಿದ ಆ ಇಬ್ಬರು ದಿಗ್ಗಜರಲ್ಲಿ ಒಬ್ಬರೂ ಇಲ್ಲದೆ ಟೀಂ ಇಂಡಿಯಾ ನಾಕೌಟ್ ಪಂದ್ಯವನ್ನು ಆಡುತ್ತಿದೆ.

1 / 5
ವಾಸ್ತವವಾಗಿ, 23 ವರ್ಷಗಳಲ್ಲಿ ಮೊದಲ ಬಾರಿಗೆ, ಭಾರತೀಯ ಕ್ರಿಕೆಟ್ ತಂಡವು ಅನುಭವಿಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಐಸಿಸಿ ನಾಕೌಟ್ ಪಂದ್ಯವನ್ನು ಆಡಲಿದೆ. ಕೊನೆಯ ಬಾರಿಗೆ 2003 ರ ವಿಶ್ವಕಪ್ ಫೈನಲ್​ನಲ್ಲಿ ಟೀಂ ಇಂಡಿಯಾ, ಸೌರವ್ ಗಂಗೂಲಿ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿತ್ತು.

ವಾಸ್ತವವಾಗಿ, 23 ವರ್ಷಗಳಲ್ಲಿ ಮೊದಲ ಬಾರಿಗೆ, ಭಾರತೀಯ ಕ್ರಿಕೆಟ್ ತಂಡವು ಅನುಭವಿಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಐಸಿಸಿ ನಾಕೌಟ್ ಪಂದ್ಯವನ್ನು ಆಡಲಿದೆ. ಕೊನೆಯ ಬಾರಿಗೆ 2003 ರ ವಿಶ್ವಕಪ್ ಫೈನಲ್​ನಲ್ಲಿ ಟೀಂ ಇಂಡಿಯಾ, ಸೌರವ್ ಗಂಗೂಲಿ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿತ್ತು.

2 / 5
ಆ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್‌ರಂತಹ ಲೆಜೆಂಡರಿ ಆಟಗಾರರು ಪಂದ್ಯವನ್ನಾಡಿದ್ದರು. ಆದರೆ ಆ ಸಮಯದಲ್ಲಿ ಭಾರತ ಕ್ರಿಕೆಟ್​ಗೆ ಯಾರೆಂದು ಪರಿಚಯವೇ ಇಲ್ಲದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ.

ಆ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್‌ರಂತಹ ಲೆಜೆಂಡರಿ ಆಟಗಾರರು ಪಂದ್ಯವನ್ನಾಡಿದ್ದರು. ಆದರೆ ಆ ಸಮಯದಲ್ಲಿ ಭಾರತ ಕ್ರಿಕೆಟ್​ಗೆ ಯಾರೆಂದು ಪರಿಚಯವೇ ಇಲ್ಲದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ.

3 / 5
ಆ ಫೈನಲ್ ನಂತರದ 23 ವರ್ಷಗಳಲ್ಲಿ, ಭಾರತವು ಪ್ರತಿ ಐಸಿಸಿ ನಾಕೌಟ್ ಪಂದ್ಯದಲ್ಲೂ ಈ ಇಬ್ಬರು ಆಟಗಾರರಲ್ಲಿ ಕನಿಷ್ಠ ಒಬ್ಬರನ್ನು ತನ್ನ ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಂಡಿದೆ. ಈ ಇಬ್ಬರು ಒಟ್ಟಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಅಲ್ಲದೆ ಏಕಪಕ್ಷೀಯವಾಗಿ ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

ಆ ಫೈನಲ್ ನಂತರದ 23 ವರ್ಷಗಳಲ್ಲಿ, ಭಾರತವು ಪ್ರತಿ ಐಸಿಸಿ ನಾಕೌಟ್ ಪಂದ್ಯದಲ್ಲೂ ಈ ಇಬ್ಬರು ಆಟಗಾರರಲ್ಲಿ ಕನಿಷ್ಠ ಒಬ್ಬರನ್ನು ತನ್ನ ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಂಡಿದೆ. ಈ ಇಬ್ಬರು ಒಟ್ಟಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಅಲ್ಲದೆ ಏಕಪಕ್ಷೀಯವಾಗಿ ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

4 / 5
2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

5 / 5
Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ