AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ತಿಂಗಳ ಆಟಗಾರ ನಾಮನಿರ್ದೇಶಿತರ ಪಟ್ಟಿ ಪ್ರಕಟ

ICC Men’s Player of the Month: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸುತ್ತದೆ. ಈ ಆಟಗಾರರಲ್ಲಿ ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ಅಭಿಮಾನಿಗಳು ನಿರ್ಧರಿಸುತ್ತಾರೆ. ಅಂದರೆ ಐಸಿಸಿ ಪ್ರಕಟಿಸಿರುವ ನಾಮನಿರ್ದೇಶಿತ ಆಟಗಾರರಲ್ಲಿ ಯಾರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದಕ್ಕೆ ವೋಟಿಂಗ್ ನಡೆಯಲಿದ್ದು, ಈ ವೇಳೆ ಅತೀ ಹೆಚ್ಚು ವೋಟ್ ಪಡೆದ ಆಟಗಾರನನ್ನು ಪ್ಲೇಯರ್ ಆಫ್ ದಿ ಮಂತ್ ಎಂದು ಘೋಷಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Jul 07, 2024 | 9:34 AM

Share
ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

2 / 5
ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

3 / 5
ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

5 / 5

Published On - 9:33 am, Sun, 7 July 24

Follow Us
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ