ಐಸಿಸಿ ತಿಂಗಳ ಆಟಗಾರ ನಾಮನಿರ್ದೇಶಿತರ ಪಟ್ಟಿ ಪ್ರಕಟ

ICC Men’s Player of the Month: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸುತ್ತದೆ. ಈ ಆಟಗಾರರಲ್ಲಿ ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ಅಭಿಮಾನಿಗಳು ನಿರ್ಧರಿಸುತ್ತಾರೆ. ಅಂದರೆ ಐಸಿಸಿ ಪ್ರಕಟಿಸಿರುವ ನಾಮನಿರ್ದೇಶಿತ ಆಟಗಾರರಲ್ಲಿ ಯಾರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದಕ್ಕೆ ವೋಟಿಂಗ್ ನಡೆಯಲಿದ್ದು, ಈ ವೇಳೆ ಅತೀ ಹೆಚ್ಚು ವೋಟ್ ಪಡೆದ ಆಟಗಾರನನ್ನು ಪ್ಲೇಯರ್ ಆಫ್ ದಿ ಮಂತ್ ಎಂದು ಘೋಷಿಸಲಾಗುತ್ತದೆ.

|

Updated on:Jul 07, 2024 | 9:34 AM

ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

2 / 5
ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

3 / 5
ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

5 / 5

Published On - 9:33 am, Sun, 7 July 24

Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ