ಐಸಿಸಿ ತಿಂಗಳ ಆಟಗಾರ ನಾಮನಿರ್ದೇಶಿತರ ಪಟ್ಟಿ ಪ್ರಕಟ

ICC Men’s Player of the Month: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸುತ್ತದೆ. ಈ ಆಟಗಾರರಲ್ಲಿ ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ಅಭಿಮಾನಿಗಳು ನಿರ್ಧರಿಸುತ್ತಾರೆ. ಅಂದರೆ ಐಸಿಸಿ ಪ್ರಕಟಿಸಿರುವ ನಾಮನಿರ್ದೇಶಿತ ಆಟಗಾರರಲ್ಲಿ ಯಾರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದಕ್ಕೆ ವೋಟಿಂಗ್ ನಡೆಯಲಿದ್ದು, ಈ ವೇಳೆ ಅತೀ ಹೆಚ್ಚು ವೋಟ್ ಪಡೆದ ಆಟಗಾರನನ್ನು ಪ್ಲೇಯರ್ ಆಫ್ ದಿ ಮಂತ್ ಎಂದು ಘೋಷಿಸಲಾಗುತ್ತದೆ.

|

Updated on:Jul 07, 2024 | 9:34 AM

ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

2 / 5
ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

3 / 5
ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

5 / 5

Published On - 9:33 am, Sun, 7 July 24

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್