ICC ODI Ranking: ಪಾಕ್ ನಾಯಕ ಬಾಬರ್ ನಂ.1! ಕುಸಿತ ಕಂಡ ಕೊಹ್ಲಿ, ಪಾಕ್ ತಂಡದ್ದೇ ಕಾರುಬಾರು

ICC ODI Ranking: ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ.

|

Updated on:Apr 06, 2022 | 5:09 PM

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್  ಎಲ್ಲಾ ಮೂರು ಮಾದರಿಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬಾಬರ್ ನಿರಂತರವಾಗಿ ದಾಖಲೆಗಳನ್ನು ಮಾಡುತ್ತಿದ್ದಾರೆ. ಐಸಿಸಿ ಶ್ರೇಯಾಂಕದಲ್ಲೂ ಈ ಸಾಧನೆಯ ಪ್ರತಿಫಲ ಪಡೆಯುತ್ತಿದ್ದಾರೆ. ಬಾಬರ್ ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯಲ್ಲಿ ಅವರ ಅದ್ಭುತ ಪ್ರದರ್ಶನದ ಆಧಾರದ ಮೇಲೆ ನಂಬರ್ ಒನ್ ಸ್ಥಾನವನ್ನು ಬಲಪಡಿಸಿದ್ದಾರೆ.

1 / 4
ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2 ಶತಕಗಳನ್ನು ಬಾರಿಸಿದ ನಂತರ, ಬಾಬರ್ ಎರಡನೇ ಶ್ರೇಯಾಂಕದ ಭಾರತೀಯ ಸ್ಟಾರ್ ವಿರಾಟ್ ಕೊಹ್ಲಿಗಿಂತ ದೊಡ್ಡ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ 891 ರೇಟಿಂಗ್ ಅಂಕಗಳನ್ನು ಹೊಂದಿದ್ದರೆ, ವಿರಾಟ್ ಕೊಹ್ಲಿ ಕೇವಲ 811 ಅಂಕಗಳನ್ನು ಹೊಂದಿದ್ದಾರೆ.

2 / 4
ಬಾಬರ್ ಮಾತ್ರವಲ್ಲ, ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ 2 ಶತಕ, 1 ಅರ್ಧಶತಕದ ಸಹಾಯದಿಂದ ಸುಮಾರು 300 ರನ್ ಗಳಿಸಿದರು. ಇದರ ಲಾಭ ಪಡೆದ ಅವರು 7 ಸ್ಥಾನ ಜಿಗಿತದೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

3 / 4
ಬೌಲರ್‌ಗಳ ಮಟ್ಟಿಗೆ ಹೇಳುವುದಾದರೆ ಅದರಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ 8 ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ODI ಬೌಲರ್‌ಗಳ ಶ್ರೇಯಾಂಕದಲ್ಲಿ, ಆರನೇ ಸ್ಥಾನದಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆ.

4 / 4

Published On - 4:54 pm, Wed, 6 April 22

Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು