AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Ranking: ಪಾಕ್ ನಾಯಕ ಬಾಬರ್ ನಂ.1! ಕುಸಿತ ಕಂಡ ಕೊಹ್ಲಿ, ಪಾಕ್ ತಂಡದ್ದೇ ಕಾರುಬಾರು

ICC ODI Ranking: ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2022 | 5:09 PM

Share
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್  ಎಲ್ಲಾ ಮೂರು ಮಾದರಿಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬಾಬರ್ ನಿರಂತರವಾಗಿ ದಾಖಲೆಗಳನ್ನು ಮಾಡುತ್ತಿದ್ದಾರೆ. ಐಸಿಸಿ ಶ್ರೇಯಾಂಕದಲ್ಲೂ ಈ ಸಾಧನೆಯ ಪ್ರತಿಫಲ ಪಡೆಯುತ್ತಿದ್ದಾರೆ. ಬಾಬರ್ ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯಲ್ಲಿ ಅವರ ಅದ್ಭುತ ಪ್ರದರ್ಶನದ ಆಧಾರದ ಮೇಲೆ ನಂಬರ್ ಒನ್ ಸ್ಥಾನವನ್ನು ಬಲಪಡಿಸಿದ್ದಾರೆ.

1 / 4
ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2 ಶತಕಗಳನ್ನು ಬಾರಿಸಿದ ನಂತರ, ಬಾಬರ್ ಎರಡನೇ ಶ್ರೇಯಾಂಕದ ಭಾರತೀಯ ಸ್ಟಾರ್ ವಿರಾಟ್ ಕೊಹ್ಲಿಗಿಂತ ದೊಡ್ಡ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ 891 ರೇಟಿಂಗ್ ಅಂಕಗಳನ್ನು ಹೊಂದಿದ್ದರೆ, ವಿರಾಟ್ ಕೊಹ್ಲಿ ಕೇವಲ 811 ಅಂಕಗಳನ್ನು ಹೊಂದಿದ್ದಾರೆ.

2 / 4
ಬಾಬರ್ ಮಾತ್ರವಲ್ಲ, ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ 2 ಶತಕ, 1 ಅರ್ಧಶತಕದ ಸಹಾಯದಿಂದ ಸುಮಾರು 300 ರನ್ ಗಳಿಸಿದರು. ಇದರ ಲಾಭ ಪಡೆದ ಅವರು 7 ಸ್ಥಾನ ಜಿಗಿತದೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

3 / 4
ಬೌಲರ್‌ಗಳ ಮಟ್ಟಿಗೆ ಹೇಳುವುದಾದರೆ ಅದರಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ 8 ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ODI ಬೌಲರ್‌ಗಳ ಶ್ರೇಯಾಂಕದಲ್ಲಿ, ಆರನೇ ಸ್ಥಾನದಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆ.

4 / 4

Published On - 4:54 pm, Wed, 6 April 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್