AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಪ್ರಕಾರ ಅಲ್ಲ, ಚೆಂಡಿನ ಪ್ರಕಾರ..; ಟಿ20 ಪವರ್‌ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ

ICC Changes T20 Powerplay Rules: ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್‌ಗಳು ಕಡಿಮೆಯಾದರೆ ಪವರ್‌ಪ್ಲೇ, ಓವರ್‌ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್‌ಗಳ ಪಂದ್ಯದಲ್ಲಿ 1.3 ಓವರ್‌ಗಳು ಪವರ್‌ಪ್ಲೇ ಆಗಿರುತ್ತದೆ. ಈ ನಿಯಮ ಜುಲೈ 2 ರಿಂದ ಜಾರಿಗೆ ಬರುತ್ತದೆ.

ಪೃಥ್ವಿಶಂಕರ
|

Updated on: Jun 27, 2025 | 2:52 PM

Share
ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್​ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್​ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್​ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್​ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

1 / 6
ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್​ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್​ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ ಪಂದ್ಯಗಳ ಪವರ್‌ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್​ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್​ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ ಪಂದ್ಯಗಳ ಪವರ್‌ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.

2 / 6
ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್‌ನ ಓವರ್‌ಗಳನ್ನು ಕಡಿಮೆ ಮಾಡಿದರೆ, ಪವರ್‌ಪ್ಲೇ ಓವರ್‌ಗಳನ್ನು ಓವರ್‌ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್‌ನ ಓವರ್‌ಗಳನ್ನು ಕಡಿಮೆ ಮಾಡಿದರೆ, ಪವರ್‌ಪ್ಲೇ ಓವರ್‌ಗಳನ್ನು ಓವರ್‌ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

3 / 6
ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್‌ಗಳ ಇನ್ನಿಂಗ್ಸ್‌ನಲ್ಲಿ ಮೊದಲ 6 ಓವರ್‌ಗಳು ಪವರ್‌ಪ್ಲೇ ಆಗಿದ್ದವು. ಈ 6 ಓವರ್​ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್‌ಗಳನ್ನು ಇರಿಸುವಂತಿಲ್ಲ.  ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್‌ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್‌ಗಳನ್ನು ನಿಲ್ಲಿಸಬಹುದು.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್‌ಗಳ ಇನ್ನಿಂಗ್ಸ್‌ನಲ್ಲಿ ಮೊದಲ 6 ಓವರ್‌ಗಳು ಪವರ್‌ಪ್ಲೇ ಆಗಿದ್ದವು. ಈ 6 ಓವರ್​ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್‌ಗಳನ್ನು ಇರಿಸುವಂತಿಲ್ಲ. ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್‌ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್‌ಗಳನ್ನು ನಿಲ್ಲಿಸಬಹುದು.

4 / 6
ಆದರೆ ಇದೀಗ ಐಸಿಸಿ ತಂದಿರುವ ಹೊಸ ನಿಯಮದ ಪ್ರಕಾರ, ಒಂದು ಇನ್ನಿಂಗ್ಸ್ 5 ಓವರ್‌ಗಳಾಗಿದ್ದರೆ, ಅಂದರೆ ಮಳೆ ಅಥವಾ ಇನ್ನಿತ್ತರ ಕಾರಣದಿಂದ ಉಭಯ ತಂಡಗಳಿಗೆ ಕೇವಲ 5 ಓವರ್​ಗಳನ್ನು ನಿಗದಿಪಡಿಸಿದರೆ, ಆಗ ಪವರ್‌ಪ್ಲೇ 1.3 ಓವರ್‌ಗಳಾಗಿರುತ್ತದೆ. ಅಂದರೆ ಈ 9 ಎಸೆತಗಳಲ್ಲಿ ಕೇವಲ ಇಬ್ಬರು ಫೀಲ್ಡರ್​ಗಳು ಮಾತ್ರ 30 ಯಾರ್ಡ್​ ಸರ್ಕಲ್​ನಿಂದ ಹೊರಗೆ ನಿಲ್ಲಬೇಕು.

ಆದರೆ ಇದೀಗ ಐಸಿಸಿ ತಂದಿರುವ ಹೊಸ ನಿಯಮದ ಪ್ರಕಾರ, ಒಂದು ಇನ್ನಿಂಗ್ಸ್ 5 ಓವರ್‌ಗಳಾಗಿದ್ದರೆ, ಅಂದರೆ ಮಳೆ ಅಥವಾ ಇನ್ನಿತ್ತರ ಕಾರಣದಿಂದ ಉಭಯ ತಂಡಗಳಿಗೆ ಕೇವಲ 5 ಓವರ್​ಗಳನ್ನು ನಿಗದಿಪಡಿಸಿದರೆ, ಆಗ ಪವರ್‌ಪ್ಲೇ 1.3 ಓವರ್‌ಗಳಾಗಿರುತ್ತದೆ. ಅಂದರೆ ಈ 9 ಎಸೆತಗಳಲ್ಲಿ ಕೇವಲ ಇಬ್ಬರು ಫೀಲ್ಡರ್​ಗಳು ಮಾತ್ರ 30 ಯಾರ್ಡ್​ ಸರ್ಕಲ್​ನಿಂದ ಹೊರಗೆ ನಿಲ್ಲಬೇಕು.

5 / 6
ಹಾಗೆಯೇ ಪಂದ್ಯ 6 ಓವರ್‌ಗಳ ಇನ್ನಿಂಗ್ಸ್‌ನದ್ದಾಗಿದ್ದರೆ, ಪವರ್‌ಪ್ಲೇ 1.5 ಓವರ್‌ಗಳಾಗಿರುತ್ತದೆ. 10 ಓವರ್‌ಗಳದ್ದಾಗಿದ್ದರೆ, ಪವರ್‌ಪ್ಲೇ 3 ಓವರ್‌ಗಳಾಗಿರುತ್ತದೆ. ಒಂದು ವೇಳೆ ಪಂದ್ಯವು 19 ಓವರ್‌ಗಳಾಗಿದ್ದರೆ, ಪವರ್‌ಪ್ಲೇ 5.4 ಓವರ್‌ಗಳಾಗಿರುತ್ತದೆ. ಈಗಾಗಲೇ ಟಿ20 ಬ್ಲಾಸ್ಟ್ ಪಂದ್ಯಾವಳಿಯಲ್ಲಿ ಈ ನಿಯಮವನ್ನು ಜಾರಿಗೆ ತಂದಿದ್ದು. ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈ ನಿಯಮವನ್ನು ಜುಲೈ 2 ರಿಂದ ಜಾರಿಗೆ ತರಲಾಗುವುದು.

ಹಾಗೆಯೇ ಪಂದ್ಯ 6 ಓವರ್‌ಗಳ ಇನ್ನಿಂಗ್ಸ್‌ನದ್ದಾಗಿದ್ದರೆ, ಪವರ್‌ಪ್ಲೇ 1.5 ಓವರ್‌ಗಳಾಗಿರುತ್ತದೆ. 10 ಓವರ್‌ಗಳದ್ದಾಗಿದ್ದರೆ, ಪವರ್‌ಪ್ಲೇ 3 ಓವರ್‌ಗಳಾಗಿರುತ್ತದೆ. ಒಂದು ವೇಳೆ ಪಂದ್ಯವು 19 ಓವರ್‌ಗಳಾಗಿದ್ದರೆ, ಪವರ್‌ಪ್ಲೇ 5.4 ಓವರ್‌ಗಳಾಗಿರುತ್ತದೆ. ಈಗಾಗಲೇ ಟಿ20 ಬ್ಲಾಸ್ಟ್ ಪಂದ್ಯಾವಳಿಯಲ್ಲಿ ಈ ನಿಯಮವನ್ನು ಜಾರಿಗೆ ತಂದಿದ್ದು. ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈ ನಿಯಮವನ್ನು ಜುಲೈ 2 ರಿಂದ ಜಾರಿಗೆ ತರಲಾಗುವುದು.

6 / 6
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು