AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I World Cup: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ದಿನಾಂಕ ನಿಗದಿ: ಯಾವಾಗ ನೋಡಿ

India Squad for ICC T20I World Cup 2024: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದೆ. ಇದೀಗ ಈ ಮಹತ್ವದ ಟೂರ್ನಿಗೆ ತಂಡವನ್ನು ಪ್ರಕಟಿಸಲು ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಇದೀಗ ಬಿಸಿಸಿಐ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Vinay Bhat
|

Updated on: Mar 02, 2024 | 7:02 AM

Share
ಜೂನ್ 1 ರಿಂದ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಶುರುವಾಗಲಿದೆ. 11 ವರ್ಷಗಳ ನಂತರ ಐಸಿಸಿ ICC ಟ್ರೋಫಿಗಾಗಿ ಹುಡುಕಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೇಲೆ ಎಲ್ಲರ ಕಣ್ಣಿದೆ. ಈ ಈವೆಂಟ್​ನಲ್ಲಿ ಭಾರತೀಯ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಜೂನ್ 1 ರಿಂದ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಶುರುವಾಗಲಿದೆ. 11 ವರ್ಷಗಳ ನಂತರ ಐಸಿಸಿ ICC ಟ್ರೋಫಿಗಾಗಿ ಹುಡುಕಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೇಲೆ ಎಲ್ಲರ ಕಣ್ಣಿದೆ. ಈ ಈವೆಂಟ್​ನಲ್ಲಿ ಭಾರತೀಯ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

1 / 6
ಇದೀಗ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಸ್ಪೋರ್ಟ್ಸ್ ಟಾಕ್‌ನ ವರದಿಯ ಪ್ರಕಾರ, ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಟಿ20 ವಿಶ್ವಕಪ್​ಗೆ ತಮ್ಮ ಆಟಗಾರರನ್ನು ಘೋಷಣೆ ಮಾಡಲು ಮೇ 1 ಬುಧವಾರದ ವರೆಗೆ ಗಡುವು ನೀಡಲಾಗಿದೆ. ಇದರ ಜೊತೆಗೆ ಕೆಲ ನಿಯಮಗಳು ಕೂಡ ಇವೆ.

ಇದೀಗ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಸ್ಪೋರ್ಟ್ಸ್ ಟಾಕ್‌ನ ವರದಿಯ ಪ್ರಕಾರ, ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಟಿ20 ವಿಶ್ವಕಪ್​ಗೆ ತಮ್ಮ ಆಟಗಾರರನ್ನು ಘೋಷಣೆ ಮಾಡಲು ಮೇ 1 ಬುಧವಾರದ ವರೆಗೆ ಗಡುವು ನೀಡಲಾಗಿದೆ. ಇದರ ಜೊತೆಗೆ ಕೆಲ ನಿಯಮಗಳು ಕೂಡ ಇವೆ.

2 / 6
ಒಂದು ತಂಡವು ಪಂದ್ಯಾವಳಿಗೆ 15 ಆಟಗಾರರ ತಂಡವನ್ನು ಪ್ರಕಟಿಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ತಂಡಗಳು ಮೇ 25 ರೊಳಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಆದರೆ ಈ ಬದಲಾವಣೆಯನ್ನು ಐಸಿಸಿ ತಾಂತ್ರಿಕ ಸಮಿತಿಯು ಅನುಮೋದಿಸಬೇಕಾಗಿದೆ. ಇದರ ನಡುವೆ ಐಪಿಎಲ್ 2024 ರ ಫೈನಲ್ ಮೇ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ.

ಒಂದು ತಂಡವು ಪಂದ್ಯಾವಳಿಗೆ 15 ಆಟಗಾರರ ತಂಡವನ್ನು ಪ್ರಕಟಿಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ತಂಡಗಳು ಮೇ 25 ರೊಳಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಆದರೆ ಈ ಬದಲಾವಣೆಯನ್ನು ಐಸಿಸಿ ತಾಂತ್ರಿಕ ಸಮಿತಿಯು ಅನುಮೋದಿಸಬೇಕಾಗಿದೆ. ಇದರ ನಡುವೆ ಐಪಿಎಲ್ 2024 ರ ಫೈನಲ್ ಮೇ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ.

3 / 6
ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 1 ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಯಾಕೆಂದರೆ ಬಿಸಿಸಿಐ ವಿಶ್ವಕಪ್​ಗೆ ಆಟಗಾರರ ಆಯ್ಕೆಯನ್ನು ಐಪಿಎಲ್ ಪ್ರದರ್ಶನದ ಮೇಲೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ಕ್ಷಣದವರೆಗೆ ಕಾದು ಮೇ 1 ರಂದು ಹೆಸರಿಸಬಹುದು.

ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 1 ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಯಾಕೆಂದರೆ ಬಿಸಿಸಿಐ ವಿಶ್ವಕಪ್​ಗೆ ಆಟಗಾರರ ಆಯ್ಕೆಯನ್ನು ಐಪಿಎಲ್ ಪ್ರದರ್ಶನದ ಮೇಲೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ಕ್ಷಣದವರೆಗೆ ಕಾದು ಮೇ 1 ರಂದು ಹೆಸರಿಸಬಹುದು.

4 / 6
ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

5 / 6
ಇನ್ನು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಇತ್ತೀಚೆಗೆ ಬಿಸಿಸಿಐಯ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಇಬ್ಬರು ಸ್ಟಾರ್ ಬ್ಯಾಟರ್ಸ್ 2024 ರ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗಿದೆ.

ಇನ್ನು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಇತ್ತೀಚೆಗೆ ಬಿಸಿಸಿಐಯ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಇಬ್ಬರು ಸ್ಟಾರ್ ಬ್ಯಾಟರ್ಸ್ 2024 ರ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗಿದೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ