AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I World Cup: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ದಿನಾಂಕ ನಿಗದಿ: ಯಾವಾಗ ನೋಡಿ

India Squad for ICC T20I World Cup 2024: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದೆ. ಇದೀಗ ಈ ಮಹತ್ವದ ಟೂರ್ನಿಗೆ ತಂಡವನ್ನು ಪ್ರಕಟಿಸಲು ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಇದೀಗ ಬಿಸಿಸಿಐ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Vinay Bhat
|

Updated on: Mar 02, 2024 | 7:02 AM

Share
ಜೂನ್ 1 ರಿಂದ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಶುರುವಾಗಲಿದೆ. 11 ವರ್ಷಗಳ ನಂತರ ಐಸಿಸಿ ICC ಟ್ರೋಫಿಗಾಗಿ ಹುಡುಕಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೇಲೆ ಎಲ್ಲರ ಕಣ್ಣಿದೆ. ಈ ಈವೆಂಟ್​ನಲ್ಲಿ ಭಾರತೀಯ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಜೂನ್ 1 ರಿಂದ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಶುರುವಾಗಲಿದೆ. 11 ವರ್ಷಗಳ ನಂತರ ಐಸಿಸಿ ICC ಟ್ರೋಫಿಗಾಗಿ ಹುಡುಕಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೇಲೆ ಎಲ್ಲರ ಕಣ್ಣಿದೆ. ಈ ಈವೆಂಟ್​ನಲ್ಲಿ ಭಾರತೀಯ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

1 / 6
ಇದೀಗ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಸ್ಪೋರ್ಟ್ಸ್ ಟಾಕ್‌ನ ವರದಿಯ ಪ್ರಕಾರ, ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಟಿ20 ವಿಶ್ವಕಪ್​ಗೆ ತಮ್ಮ ಆಟಗಾರರನ್ನು ಘೋಷಣೆ ಮಾಡಲು ಮೇ 1 ಬುಧವಾರದ ವರೆಗೆ ಗಡುವು ನೀಡಲಾಗಿದೆ. ಇದರ ಜೊತೆಗೆ ಕೆಲ ನಿಯಮಗಳು ಕೂಡ ಇವೆ.

ಇದೀಗ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಸ್ಪೋರ್ಟ್ಸ್ ಟಾಕ್‌ನ ವರದಿಯ ಪ್ರಕಾರ, ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಟಿ20 ವಿಶ್ವಕಪ್​ಗೆ ತಮ್ಮ ಆಟಗಾರರನ್ನು ಘೋಷಣೆ ಮಾಡಲು ಮೇ 1 ಬುಧವಾರದ ವರೆಗೆ ಗಡುವು ನೀಡಲಾಗಿದೆ. ಇದರ ಜೊತೆಗೆ ಕೆಲ ನಿಯಮಗಳು ಕೂಡ ಇವೆ.

2 / 6
ಒಂದು ತಂಡವು ಪಂದ್ಯಾವಳಿಗೆ 15 ಆಟಗಾರರ ತಂಡವನ್ನು ಪ್ರಕಟಿಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ತಂಡಗಳು ಮೇ 25 ರೊಳಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಆದರೆ ಈ ಬದಲಾವಣೆಯನ್ನು ಐಸಿಸಿ ತಾಂತ್ರಿಕ ಸಮಿತಿಯು ಅನುಮೋದಿಸಬೇಕಾಗಿದೆ. ಇದರ ನಡುವೆ ಐಪಿಎಲ್ 2024 ರ ಫೈನಲ್ ಮೇ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ.

ಒಂದು ತಂಡವು ಪಂದ್ಯಾವಳಿಗೆ 15 ಆಟಗಾರರ ತಂಡವನ್ನು ಪ್ರಕಟಿಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ತಂಡಗಳು ಮೇ 25 ರೊಳಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಆದರೆ ಈ ಬದಲಾವಣೆಯನ್ನು ಐಸಿಸಿ ತಾಂತ್ರಿಕ ಸಮಿತಿಯು ಅನುಮೋದಿಸಬೇಕಾಗಿದೆ. ಇದರ ನಡುವೆ ಐಪಿಎಲ್ 2024 ರ ಫೈನಲ್ ಮೇ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ.

3 / 6
ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 1 ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಯಾಕೆಂದರೆ ಬಿಸಿಸಿಐ ವಿಶ್ವಕಪ್​ಗೆ ಆಟಗಾರರ ಆಯ್ಕೆಯನ್ನು ಐಪಿಎಲ್ ಪ್ರದರ್ಶನದ ಮೇಲೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ಕ್ಷಣದವರೆಗೆ ಕಾದು ಮೇ 1 ರಂದು ಹೆಸರಿಸಬಹುದು.

ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 1 ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಯಾಕೆಂದರೆ ಬಿಸಿಸಿಐ ವಿಶ್ವಕಪ್​ಗೆ ಆಟಗಾರರ ಆಯ್ಕೆಯನ್ನು ಐಪಿಎಲ್ ಪ್ರದರ್ಶನದ ಮೇಲೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ಕ್ಷಣದವರೆಗೆ ಕಾದು ಮೇ 1 ರಂದು ಹೆಸರಿಸಬಹುದು.

4 / 6
ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

5 / 6
ಇನ್ನು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಇತ್ತೀಚೆಗೆ ಬಿಸಿಸಿಐಯ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಇಬ್ಬರು ಸ್ಟಾರ್ ಬ್ಯಾಟರ್ಸ್ 2024 ರ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗಿದೆ.

ಇನ್ನು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಇತ್ತೀಚೆಗೆ ಬಿಸಿಸಿಐಯ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಇಬ್ಬರು ಸ್ಟಾರ್ ಬ್ಯಾಟರ್ಸ್ 2024 ರ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗಿದೆ.

6 / 6
Follow Us
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು