AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ರಿಷಭ್ ಪಂತ್​ಗೆ ಮುಂಬಡ್ತಿ; ಟಾಪ್ 10 ರಿಂದ ಜೈಸ್ವಾಲ್ ಔಟ್

ICC Test Rankings: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಭಾರಿ ಮುನ್ನಡೆ ಸಾಧಿಸಿದ್ದಾರೆ. ಲಂಕಾ ವಿರುದ್ಧದ ಪ್ರದರ್ಶನದಿಂದ 711 ರೇಟಿಂಗ್‌ ಪಾಯಿಂಟ್‌ನೊಂದಿಗೆ 7ನೇ ಸ್ಥಾನಕ್ಕೇರಿದ್ದು, ಶುಭ್​ಮನ್ ಗಿಲ್ ಅವರನ್ನು ಸರಿಗಟ್ಟಿದ್ದಾರೆ. ಬೌಲರ್​ಗಳ ರ್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಳೆದುಕೊಂಡಿದ್ದು, ಮಿಚೆಲ್ ಸ್ಟಾರ್ಕ್ ನಂ.1 ಆಗಿದ್ದಾರೆ. ಯಶಸ್ವಿ ಜೈಸ್ವಾಲ್ ಟಾಪ್ 10 ರಿಂದ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Aug 26, 2026 | 8:08 PM

Share
ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಮುಂಬಡ್ತಿ ಪಡೆದುಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್, ಶ್ರೇಯಾಂಕ ಪಟ್ಟಿಯಲ್ಲಿ ನಾಯಕ ಶುಭಮನ್ ಗಿಲ್ ಅವರನ್ನು ಸರಿಗಟ್ಟಿದ್ದು, ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ(PC-BCCI).

ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಮುಂಬಡ್ತಿ ಪಡೆದುಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್, ಶ್ರೇಯಾಂಕ ಪಟ್ಟಿಯಲ್ಲಿ ನಾಯಕ ಶುಭಮನ್ ಗಿಲ್ ಅವರನ್ನು ಸರಿಗಟ್ಟಿದ್ದು, ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ(PC-BCCI).

1 / 5
ಈ ಟೆಸ್ಟ್ ಸರಣಿಗೂ ಮೊದಲು ಅಗ್ರ 10 ರಿಂದ ಹೊರಗಿದ್ದ ರಿಷಭ್ ಪಂತ್ ಇದೀಗ 711 ರೇಟಿಂಗ್ ಪಾಯಿಂಟ್​ಗಳೊಂದಿಗೆ ಆರು ಸ್ಥಾನಗಳ ಮುಂಬಡ್ತಿ ಪಡೆದಿದ್ದು, ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಇತ್ತ ಶುಭ್​ಮನ್ ಗಿಲ್ ಕೂಡ 711 ರೇಟಿಂಗ್ ಪಾಯಿಂಟ್​​ ಹೊಂದಿದ್ದಾರೆ. ಇದರರ್ಥ ರಿಷಭ್ ಪಂತ್ ಹಾಗೂ ಶುಭ್​ಮನ್ ಗಿಲ್ ಪ್ರಸ್ತುತ 7ನೇ ಸ್ಥಾನದಲ್ಲಿದ್ದಾರೆ(PC-BCCI).

ಈ ಟೆಸ್ಟ್ ಸರಣಿಗೂ ಮೊದಲು ಅಗ್ರ 10 ರಿಂದ ಹೊರಗಿದ್ದ ರಿಷಭ್ ಪಂತ್ ಇದೀಗ 711 ರೇಟಿಂಗ್ ಪಾಯಿಂಟ್​ಗಳೊಂದಿಗೆ ಆರು ಸ್ಥಾನಗಳ ಮುಂಬಡ್ತಿ ಪಡೆದಿದ್ದು, ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಇತ್ತ ಶುಭ್​ಮನ್ ಗಿಲ್ ಕೂಡ 711 ರೇಟಿಂಗ್ ಪಾಯಿಂಟ್​​ ಹೊಂದಿದ್ದಾರೆ. ಇದರರ್ಥ ರಿಷಭ್ ಪಂತ್ ಹಾಗೂ ಶುಭ್​ಮನ್ ಗಿಲ್ ಪ್ರಸ್ತುತ 7ನೇ ಸ್ಥಾನದಲ್ಲಿದ್ದಾರೆ(PC-BCCI).

2 / 5
ರಿಷಭ್ ಪಂತ್ ಗಾಲೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 39 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 66 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದರ ಫಲವಾಗಿ ಪಂತ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇತ್ತ ನಾಯಕ ಶುಭ್​ಮನ್ ಗಿಲ್ ಎರಡು ಇನ್ನಿಂಗ್ಸ್​ನಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದರು. ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಎಂಟು ರನ್​ಗಳಿಸಲಷ್ಟೇ ಶಕ್ತರಾಗಿದ್ದರು(PC-BCCI).

ರಿಷಭ್ ಪಂತ್ ಗಾಲೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 39 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 66 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದರ ಫಲವಾಗಿ ಪಂತ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇತ್ತ ನಾಯಕ ಶುಭ್​ಮನ್ ಗಿಲ್ ಎರಡು ಇನ್ನಿಂಗ್ಸ್​ನಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದರು. ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಎಂಟು ರನ್​ಗಳಿಸಲಷ್ಟೇ ಶಕ್ತರಾಗಿದ್ದರು(PC-BCCI).

3 / 5
ಇನ್ನು ಗಾಲೆ ಟೆಸ್ಟ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಯಶಸ್ವಿ ಜೈಸ್ವಾಲ್ ಟಾಪ್ 10 ರಿಂದ ಹೊರಬಿದ್ದಿದ್ದಾರೆ. ಎರಡು ಸ್ಥಾನ ಕುಸಿತ ಕಂಡಿರುವ ಜೈಸ್ವಾಲ್, 701 ರೇಟಿಂಗ್‌ ಪಾಯಿಂಟ್​ಗಳೊಂದಿಗೆ 11 ನೇ ಸ್ಥಾನಕ್ಕೆ ಜಾರಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ನಲ್ಲಿ ಗಳಿಸಿದ ರನ್‌ಗಳನ್ನು ಈ ಶ್ರೇಯಾಂಕದಲ್ಲಿ ಪರಿಗಣಿಸಲಾಗಿಲ್ಲ. ಈ ಕಾರಣದಿಂದ ರ್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆಗಳಾಗಿವೆ(PC-BCCI).

ಇನ್ನು ಗಾಲೆ ಟೆಸ್ಟ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಯಶಸ್ವಿ ಜೈಸ್ವಾಲ್ ಟಾಪ್ 10 ರಿಂದ ಹೊರಬಿದ್ದಿದ್ದಾರೆ. ಎರಡು ಸ್ಥಾನ ಕುಸಿತ ಕಂಡಿರುವ ಜೈಸ್ವಾಲ್, 701 ರೇಟಿಂಗ್‌ ಪಾಯಿಂಟ್​ಗಳೊಂದಿಗೆ 11 ನೇ ಸ್ಥಾನಕ್ಕೆ ಜಾರಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ನಲ್ಲಿ ಗಳಿಸಿದ ರನ್‌ಗಳನ್ನು ಈ ಶ್ರೇಯಾಂಕದಲ್ಲಿ ಪರಿಗಣಿಸಲಾಗಿಲ್ಲ. ಈ ಕಾರಣದಿಂದ ರ್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆಗಳಾಗಿವೆ(PC-BCCI).

4 / 5
ಉಳಿದಂತೆ ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್​ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದಾರೆ. ಬುಮ್ರಾ ಹೊರತುಪಡಿಸಿ ಟಾಪ್ 10 ರಲ್ಲಿ ಭಾರತದ ಬೇರೆ ಯಾವುದೇ ಬೌಲರ್ ಇಲ್ಲ. ಟಾಪ್ 20 ರಲ್ಲಿ, ಮೊಹಮ್ಮದ್ ಸಿರಾಜ್ ನಾಲ್ಕು ಸ್ಥಾನ ಕುಸಿದು 18 ನೇ ಸ್ಥಾನಕ್ಕೆ ಮತ್ತು ರವೀಂದ್ರ ಜಡೇಜಾ ಮೂರು ಸ್ಥಾನ ಕುಸಿದು 19 ನೇ ಸ್ಥಾನಕ್ಕೆ ತಲುಪಿದ್ದಾರೆ(PC-BCCI).

ಉಳಿದಂತೆ ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್​ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದಾರೆ. ಬುಮ್ರಾ ಹೊರತುಪಡಿಸಿ ಟಾಪ್ 10 ರಲ್ಲಿ ಭಾರತದ ಬೇರೆ ಯಾವುದೇ ಬೌಲರ್ ಇಲ್ಲ. ಟಾಪ್ 20 ರಲ್ಲಿ, ಮೊಹಮ್ಮದ್ ಸಿರಾಜ್ ನಾಲ್ಕು ಸ್ಥಾನ ಕುಸಿದು 18 ನೇ ಸ್ಥಾನಕ್ಕೆ ಮತ್ತು ರವೀಂದ್ರ ಜಡೇಜಾ ಮೂರು ಸ್ಥಾನ ಕುಸಿದು 19 ನೇ ಸ್ಥಾನಕ್ಕೆ ತಲುಪಿದ್ದಾರೆ(PC-BCCI).

5 / 5
Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ