AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ

ICC Women's Rankings: ಐಸಿಸಿ ಮಹಿಳಾ ಕ್ರಿಕೆಟ್ ಶ್ರೇಯಾಂಕದಲ್ಲಿ ದೀಪ್ತಿ ಶರ್ಮಾ ಮೊದಲ ಬಾರಿಗೆ ಟಿ20 ನಂ.1 ಬೌಲರ್ ಆಗಿದ್ದಾರೆ. ಆದರೆ, ಸ್ಮೃತಿ ಮಂಧಾನ ತಮ್ಮ ಏಕದಿನ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಲಾರಾ ವೋಲ್ವಾರ್ಡ್ಟ್ ನಂ.1 ಪಟ್ಟಕ್ಕೇರಿದ್ದಾರೆ. ಜೆಮಿಮಾ ರೊಡ್ರಿಗಸ್ T20 ಬ್ಯಾಟರ್‌ಗಳ ಟಾಪ್ 10 ಪ್ರವೇಶಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 23, 2025 | 5:09 PM

Share
ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

1 / 5
ದೀಪ್ತಿ ಶರ್ಮಾ ಇದೇ ಮೊದಲ ಬಾರಿಗೆ ಟಿ20 ಅಂತರರಾಷ್ಟ್ರೀಯ ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ ಒನ್ ಬೌಲರ್ ಪಟ್ಟ ಅಲಂಕರಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ 1 ವಿಕೆಟ್ ಪಡೆದಿದ್ದ ದೀಪ್ತಿ, ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ದೀಪ್ತಿ ಶರ್ಮಾ ಇದೇ ಮೊದಲ ಬಾರಿಗೆ ಟಿ20 ಅಂತರರಾಷ್ಟ್ರೀಯ ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ ಒನ್ ಬೌಲರ್ ಪಟ್ಟ ಅಲಂಕರಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ 1 ವಿಕೆಟ್ ಪಡೆದಿದ್ದ ದೀಪ್ತಿ, ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೋಲ್ವಾರ್ಡ್ಟ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಐರ್ಲೆಂಡ್ ವಿರುದ್ಧದ ತವರು ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದ ವೋಲ್ವಾರ್ಡ್ಟ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೋಲ್ವಾರ್ಡ್ಟ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಐರ್ಲೆಂಡ್ ವಿರುದ್ಧದ ತವರು ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದ ವೋಲ್ವಾರ್ಡ್ಟ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

3 / 5
ಈ ಪ್ರದರ್ಶನದಿಂದಾಗಿ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿರುವ ವೋಲ್ವಾರ್ಡ್ಟ್, ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ವಾಸ್ತವವಾಗಿ ಲಾರಾ ವೋಲ್ವಾರ್ಡ್ಟ್ ಈ ಹಿಂದೆಯೂ ಈ ಸ್ಥಾನವನ್ನು ಅಲಂಕರಿಸಿದ್ದರು.

ಈ ಪ್ರದರ್ಶನದಿಂದಾಗಿ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿರುವ ವೋಲ್ವಾರ್ಡ್ಟ್, ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ವಾಸ್ತವವಾಗಿ ಲಾರಾ ವೋಲ್ವಾರ್ಡ್ಟ್ ಈ ಹಿಂದೆಯೂ ಈ ಸ್ಥಾನವನ್ನು ಅಲಂಕರಿಸಿದ್ದರು.

4 / 5
ಇದರ ಜೊತೆಗೆ ಶ್ರೀಲಂಕಾ ವಿರುದ್ಧದ ಅಜೇಯ ಅರ್ಧಶತಕ ಬಾರಿಸಿದ್ದ ಜೆಮಿಮಾ ರೊಡ್ರಿಗಸ್ ಟಿ20 ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನಗಳ ಜಿಗಿತದೊಂದಿಗೆ ಅಗ್ರ 10 ರಲ್ಲಿ ಅಂದರೆ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಅವರೊಂದಿಗೆ ಸ್ಮೃತಿ ಮಂಧಾನ ಮೂರನೇ ಸ್ಥಾನದಲ್ಲಿ ಮತ್ತು ಶಫಾಲಿ ವರ್ಮಾ ಹತ್ತನೇ ಸ್ಥಾನದಲ್ಲಿದ್ದಾರೆ. ಏತನ್ಮಧ್ಯೆ, ಬೌಲಿಂಗ್‌ನಲ್ಲಿ, ಅರುಂಧತಿ ರೆಡ್ಡಿ ಕೂಡ ಐದು ಸ್ಥಾನಗಳ ಏರಿಕೆಯಾಗಿ 36 ನೇ ಸ್ಥಾನಕ್ಕೆ ತಲುಪಿದ್ದಾರೆ.

ಇದರ ಜೊತೆಗೆ ಶ್ರೀಲಂಕಾ ವಿರುದ್ಧದ ಅಜೇಯ ಅರ್ಧಶತಕ ಬಾರಿಸಿದ್ದ ಜೆಮಿಮಾ ರೊಡ್ರಿಗಸ್ ಟಿ20 ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನಗಳ ಜಿಗಿತದೊಂದಿಗೆ ಅಗ್ರ 10 ರಲ್ಲಿ ಅಂದರೆ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಅವರೊಂದಿಗೆ ಸ್ಮೃತಿ ಮಂಧಾನ ಮೂರನೇ ಸ್ಥಾನದಲ್ಲಿ ಮತ್ತು ಶಫಾಲಿ ವರ್ಮಾ ಹತ್ತನೇ ಸ್ಥಾನದಲ್ಲಿದ್ದಾರೆ. ಏತನ್ಮಧ್ಯೆ, ಬೌಲಿಂಗ್‌ನಲ್ಲಿ, ಅರುಂಧತಿ ರೆಡ್ಡಿ ಕೂಡ ಐದು ಸ್ಥಾನಗಳ ಏರಿಕೆಯಾಗಿ 36 ನೇ ಸ್ಥಾನಕ್ಕೆ ತಲುಪಿದ್ದಾರೆ.

5 / 5
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!