AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ

ICC Women's Rankings: ಐಸಿಸಿ ಮಹಿಳಾ ಕ್ರಿಕೆಟ್ ಶ್ರೇಯಾಂಕದಲ್ಲಿ ದೀಪ್ತಿ ಶರ್ಮಾ ಮೊದಲ ಬಾರಿಗೆ ಟಿ20 ನಂ.1 ಬೌಲರ್ ಆಗಿದ್ದಾರೆ. ಆದರೆ, ಸ್ಮೃತಿ ಮಂಧಾನ ತಮ್ಮ ಏಕದಿನ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಲಾರಾ ವೋಲ್ವಾರ್ಡ್ಟ್ ನಂ.1 ಪಟ್ಟಕ್ಕೇರಿದ್ದಾರೆ. ಜೆಮಿಮಾ ರೊಡ್ರಿಗಸ್ T20 ಬ್ಯಾಟರ್‌ಗಳ ಟಾಪ್ 10 ಪ್ರವೇಶಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 23, 2025 | 5:09 PM

Share
ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

1 / 5
ದೀಪ್ತಿ ಶರ್ಮಾ ಇದೇ ಮೊದಲ ಬಾರಿಗೆ ಟಿ20 ಅಂತರರಾಷ್ಟ್ರೀಯ ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ ಒನ್ ಬೌಲರ್ ಪಟ್ಟ ಅಲಂಕರಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ 1 ವಿಕೆಟ್ ಪಡೆದಿದ್ದ ದೀಪ್ತಿ, ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ದೀಪ್ತಿ ಶರ್ಮಾ ಇದೇ ಮೊದಲ ಬಾರಿಗೆ ಟಿ20 ಅಂತರರಾಷ್ಟ್ರೀಯ ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ ಒನ್ ಬೌಲರ್ ಪಟ್ಟ ಅಲಂಕರಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ 1 ವಿಕೆಟ್ ಪಡೆದಿದ್ದ ದೀಪ್ತಿ, ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೋಲ್ವಾರ್ಡ್ಟ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಐರ್ಲೆಂಡ್ ವಿರುದ್ಧದ ತವರು ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದ ವೋಲ್ವಾರ್ಡ್ಟ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೋಲ್ವಾರ್ಡ್ಟ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಐರ್ಲೆಂಡ್ ವಿರುದ್ಧದ ತವರು ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದ ವೋಲ್ವಾರ್ಡ್ಟ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

3 / 5
ಈ ಪ್ರದರ್ಶನದಿಂದಾಗಿ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿರುವ ವೋಲ್ವಾರ್ಡ್ಟ್, ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ವಾಸ್ತವವಾಗಿ ಲಾರಾ ವೋಲ್ವಾರ್ಡ್ಟ್ ಈ ಹಿಂದೆಯೂ ಈ ಸ್ಥಾನವನ್ನು ಅಲಂಕರಿಸಿದ್ದರು.

ಈ ಪ್ರದರ್ಶನದಿಂದಾಗಿ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿರುವ ವೋಲ್ವಾರ್ಡ್ಟ್, ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ವಾಸ್ತವವಾಗಿ ಲಾರಾ ವೋಲ್ವಾರ್ಡ್ಟ್ ಈ ಹಿಂದೆಯೂ ಈ ಸ್ಥಾನವನ್ನು ಅಲಂಕರಿಸಿದ್ದರು.

4 / 5
ಇದರ ಜೊತೆಗೆ ಶ್ರೀಲಂಕಾ ವಿರುದ್ಧದ ಅಜೇಯ ಅರ್ಧಶತಕ ಬಾರಿಸಿದ್ದ ಜೆಮಿಮಾ ರೊಡ್ರಿಗಸ್ ಟಿ20 ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನಗಳ ಜಿಗಿತದೊಂದಿಗೆ ಅಗ್ರ 10 ರಲ್ಲಿ ಅಂದರೆ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಅವರೊಂದಿಗೆ ಸ್ಮೃತಿ ಮಂಧಾನ ಮೂರನೇ ಸ್ಥಾನದಲ್ಲಿ ಮತ್ತು ಶಫಾಲಿ ವರ್ಮಾ ಹತ್ತನೇ ಸ್ಥಾನದಲ್ಲಿದ್ದಾರೆ. ಏತನ್ಮಧ್ಯೆ, ಬೌಲಿಂಗ್‌ನಲ್ಲಿ, ಅರುಂಧತಿ ರೆಡ್ಡಿ ಕೂಡ ಐದು ಸ್ಥಾನಗಳ ಏರಿಕೆಯಾಗಿ 36 ನೇ ಸ್ಥಾನಕ್ಕೆ ತಲುಪಿದ್ದಾರೆ.

ಇದರ ಜೊತೆಗೆ ಶ್ರೀಲಂಕಾ ವಿರುದ್ಧದ ಅಜೇಯ ಅರ್ಧಶತಕ ಬಾರಿಸಿದ್ದ ಜೆಮಿಮಾ ರೊಡ್ರಿಗಸ್ ಟಿ20 ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನಗಳ ಜಿಗಿತದೊಂದಿಗೆ ಅಗ್ರ 10 ರಲ್ಲಿ ಅಂದರೆ ಒಂಬತ್ತನೇ ಸ್ಥಾನಕ್ಕೇರಿದ್ದಾರೆ. ಅವರೊಂದಿಗೆ ಸ್ಮೃತಿ ಮಂಧಾನ ಮೂರನೇ ಸ್ಥಾನದಲ್ಲಿ ಮತ್ತು ಶಫಾಲಿ ವರ್ಮಾ ಹತ್ತನೇ ಸ್ಥಾನದಲ್ಲಿದ್ದಾರೆ. ಏತನ್ಮಧ್ಯೆ, ಬೌಲಿಂಗ್‌ನಲ್ಲಿ, ಅರುಂಧತಿ ರೆಡ್ಡಿ ಕೂಡ ಐದು ಸ್ಥಾನಗಳ ಏರಿಕೆಯಾಗಿ 36 ನೇ ಸ್ಥಾನಕ್ಕೆ ತಲುಪಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ