AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಪಾಕ್ ತಂಡದ ಮತ್ತೊಂದು ಪಂದ್ಯದ ದಿನಾಂಕ ಬದಲಿಸುವಂತೆ ಬಿಸಿಸಿಐಗೆ ಮನವಿ..!

ICC World Cup 2023: ಹಲವು ಬದಲಾವಣೆಗಳ ಬಳಿಕ ಅಂತಿಮವಾಗಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿತ್ತು. ಆದರೆ ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಮತ್ತೊಂದು ಪಂದ್ಯದ ದಿನಾಂಕವನ್ನು ಬದಲಿಸಬೇಕೆಂದು ಹೈದರಾಬಾದ್‌ ಕ್ರಿಕೆಟ್ ಅಸೋಸಿಯೇಷನ್ ಆಯೋಜಕರ ಬಳಿ ಮನವಿ ಇಟ್ಟಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Sep 11, 2023 | 1:59 PM

ಹಲವು ಬದಲಾವಣೆಗಳ ಬಳಿಕ ಅಂತಿಮವಾಗಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿತ್ತು. ಆದರೆ ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಮತ್ತೊಂದು ಪಂದ್ಯದ ದಿನಾಂಕವನ್ನು ಬದಲಿಸಬೇಕೆಂದು ಹೈದರಾಬಾದ್‌ ಕ್ರಿಕೆಟ್ ಅಸೋಸಿಯೇಷನ್ ಆಯೋಜಕರ ಬಳಿ ಮನವಿ ಇಟ್ಟಿದೆ ಎಂದು ವರದಿಯಾಗಿದೆ.

ಹಲವು ಬದಲಾವಣೆಗಳ ಬಳಿಕ ಅಂತಿಮವಾಗಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿತ್ತು. ಆದರೆ ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಮತ್ತೊಂದು ಪಂದ್ಯದ ದಿನಾಂಕವನ್ನು ಬದಲಿಸಬೇಕೆಂದು ಹೈದರಾಬಾದ್‌ ಕ್ರಿಕೆಟ್ ಅಸೋಸಿಯೇಷನ್ ಆಯೋಜಕರ ಬಳಿ ಮನವಿ ಇಟ್ಟಿದೆ ಎಂದು ವರದಿಯಾಗಿದೆ.

1 / 7
ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗುತ್ತಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯವನ್ನಾಡಲಿವೆ. ಈ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ ಕೂಡ ಹೈದರಾಬಾದ್​ನಲ್ಲಿ ಅಭ್ಯಾಸ ಪಂದ್ಯವನ್ನಾಡಬೇಕಿದೆ. ಆದರೆ ಇದೀಗ ಆ ಪಂದ್ಯವನ್ನು ಮತ್ತೊಂದು ದಿನ ಆಡಿಸಿ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಬೇಡಿಕೆ ಇಟ್ಟಿದೆ.

ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗುತ್ತಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯವನ್ನಾಡಲಿವೆ. ಈ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ ಕೂಡ ಹೈದರಾಬಾದ್​ನಲ್ಲಿ ಅಭ್ಯಾಸ ಪಂದ್ಯವನ್ನಾಡಬೇಕಿದೆ. ಆದರೆ ಇದೀಗ ಆ ಪಂದ್ಯವನ್ನು ಮತ್ತೊಂದು ದಿನ ಆಡಿಸಿ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಬೇಡಿಕೆ ಇಟ್ಟಿದೆ.

2 / 7
ವಾಸ್ತವವಾಗಿ ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯ ಸೆಪ್ಟೆಂಬರ್ 29 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಭದ್ರತಾ ಏಜೆನ್ಸಿಗಳು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ತಿಳಿಸಿವೆ ಎಂದು ವರದಿಯಾಗಿದೆ.

ವಾಸ್ತವವಾಗಿ ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯ ಸೆಪ್ಟೆಂಬರ್ 29 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಭದ್ರತಾ ಏಜೆನ್ಸಿಗಳು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ತಿಳಿಸಿವೆ ಎಂದು ವರದಿಯಾಗಿದೆ.

3 / 7
ಭದ್ರತಾ ಏಜೆನ್ಸಿಗಳ ಈ ನಡೆಗೆ ಕಾರಣವೂ ಇದ್ದು, ಈ ಉಭಯ ತಂಡಗಳ ಅಭ್ಯಾಸ ಪಂದ್ಯ ನಡೆಯುವ ದಿನ  ಹೈದರಾಬಾದ್​ನಲ್ಲಿ ಗಣೇಶ್ ವಿಸರ್ಜನೆ ಮತ್ತು ಮಿಲನ್-ಉನ್-ನಬಿ ಮೆರವಣಿಗೆ ನಡೆಯಲ್ಲಿದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸಬೇಕಾಗಿರುವುದರಿಂದ ಅಭ್ಯಾಸ ಪಂದ್ಯಕ್ಕೆ ಭದ್ರತೆ ನಿಯೋಜನೆ ಮಾಡುವುದು ಕಷ್ಟಕರವಾಗಿದೆ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್​ಗೆ ಭದ್ರತಾ ಏಜೆನ್ಸಿಗಳು ಮಾಹಿತಿ ನೀಡಿವೆ.

ಭದ್ರತಾ ಏಜೆನ್ಸಿಗಳ ಈ ನಡೆಗೆ ಕಾರಣವೂ ಇದ್ದು, ಈ ಉಭಯ ತಂಡಗಳ ಅಭ್ಯಾಸ ಪಂದ್ಯ ನಡೆಯುವ ದಿನ ಹೈದರಾಬಾದ್​ನಲ್ಲಿ ಗಣೇಶ್ ವಿಸರ್ಜನೆ ಮತ್ತು ಮಿಲನ್-ಉನ್-ನಬಿ ಮೆರವಣಿಗೆ ನಡೆಯಲ್ಲಿದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸಬೇಕಾಗಿರುವುದರಿಂದ ಅಭ್ಯಾಸ ಪಂದ್ಯಕ್ಕೆ ಭದ್ರತೆ ನಿಯೋಜನೆ ಮಾಡುವುದು ಕಷ್ಟಕರವಾಗಿದೆ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್​ಗೆ ಭದ್ರತಾ ಏಜೆನ್ಸಿಗಳು ಮಾಹಿತಿ ನೀಡಿವೆ.

4 / 7
ಆದ್ದರಿಂದ ಪಾಕಿಸ್ತಾನ-ನ್ಯೂಜಿಲೆಂಡ್ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಬೇಕು ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಐಸಿಸಿಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಆದರೆ ಸಾಕಷ್ಟು ಬಾರಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಐಸಿಸಿ, ಮತ್ತೆ ಈ ಕ್ರಮಕ್ಕೆ ಮುಂದಾಗುವುದು ಅನುಮಾನ ಎನ್ನಲಾಗುತ್ತಿದೆ.

ಆದ್ದರಿಂದ ಪಾಕಿಸ್ತಾನ-ನ್ಯೂಜಿಲೆಂಡ್ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಬೇಕು ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಐಸಿಸಿಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಆದರೆ ಸಾಕಷ್ಟು ಬಾರಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಐಸಿಸಿ, ಮತ್ತೆ ಈ ಕ್ರಮಕ್ಕೆ ಮುಂದಾಗುವುದು ಅನುಮಾನ ಎನ್ನಲಾಗುತ್ತಿದೆ.

5 / 7
ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಅದರ ಪ್ರಕಾರ ಭಾರತ-ಪಾಕಿಸ್ತಾನದ ಪಂದ್ಯ ಸೇರಿದಂತೆ ಒಟ್ಟು 9 ಪಂದ್ಯಗಳ ದಿನಾಂಕಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಅದರ ಪ್ರಕಾರ ಭಾರತ-ಪಾಕಿಸ್ತಾನದ ಪಂದ್ಯ ಸೇರಿದಂತೆ ಒಟ್ಟು 9 ಪಂದ್ಯಗಳ ದಿನಾಂಕಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

6 / 7
ಈ ಮೊದಲು, 2023 ರ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವು ಅಕ್ಟೋಬರ್ 15 ರಂದು ನಡೆಯಬೇಕಿತ್ತು. ಆದರೆ ವೇಳಾಪಟ್ಟಿಯ ಬದಲಾವಣೆಯ ನಂತರ ಈ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಂದರೆ ಅಕ್ಟೋಬರ್ 14 ರಂದು ನಡೆಸಲು ತೀರ್ಮಾನಿಸಲಾಗಿದೆ.

ಈ ಮೊದಲು, 2023 ರ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವು ಅಕ್ಟೋಬರ್ 15 ರಂದು ನಡೆಯಬೇಕಿತ್ತು. ಆದರೆ ವೇಳಾಪಟ್ಟಿಯ ಬದಲಾವಣೆಯ ನಂತರ ಈ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಂದರೆ ಅಕ್ಟೋಬರ್ 14 ರಂದು ನಡೆಸಲು ತೀರ್ಮಾನಿಸಲಾಗಿದೆ.

7 / 7
Follow us
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?