ಸೋಲಿನ ನಡುವೆಯೂ ಗುರು ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್

KL Rahul, ICC World Cup 2023: 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಅಂತಿಮ ಪಂದ್ಯದಲ್ಲಿ ಸೋತ ನಂತರವೂ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಈ ವಿಶ್ವಕಪ್​ನಲ್ಲಿ ಅಮೋಘ ಸಾಧನೆ ಮಾಡಿದರು.

|

Updated on: Nov 20, 2023 | 12:58 PM

2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಅಂತಿಮ ಪಂದ್ಯದಲ್ಲಿ ಸೋತ ನಂತರವೂ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಈ ವಿಶ್ವಕಪ್​ನಲ್ಲಿ ಅಮೋಘ ಸಾಧನೆ ಮಾಡಿದರು.

2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಅಂತಿಮ ಪಂದ್ಯದಲ್ಲಿ ಸೋತ ನಂತರವೂ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಈ ವಿಶ್ವಕಪ್​ನಲ್ಲಿ ಅಮೋಘ ಸಾಧನೆ ಮಾಡಿದರು.

1 / 8
ಇಂಜುರಿಯಿಂದ ಚೇತರಿಸಿಕೊಂಡು ಬಹಳ ದಿನಗಳ ನಂತರ 2023 ರ ಏಷ್ಯಾಕಪ್ ಮೂಲಕ ತಂಡಕ್ಕೆ ಪುನರಾಗಮನ ಮಾಡಿದ ರಾಹುಲ್, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸಿ ಮಿಂಚಿದರು. ಇದರ ಜೊತೆಗೆ ಇಡೀ ಏಷ್ಯಾಕಪ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು.

ಇಂಜುರಿಯಿಂದ ಚೇತರಿಸಿಕೊಂಡು ಬಹಳ ದಿನಗಳ ನಂತರ 2023 ರ ಏಷ್ಯಾಕಪ್ ಮೂಲಕ ತಂಡಕ್ಕೆ ಪುನರಾಗಮನ ಮಾಡಿದ ರಾಹುಲ್, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸಿ ಮಿಂಚಿದರು. ಇದರ ಜೊತೆಗೆ ಇಡೀ ಏಷ್ಯಾಕಪ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು.

2 / 8
ಇದರ ನಂತರ ಏಕದಿನ ವಿಶ್ವಕಪ್‌ನಲ್ಲೂ ಅದೇ ಫಾರ್ಮ್ ಮುಂದುವರೆಸಿದ ರಾಹುಲ್, ಆಸ್ಟ್ರೇಲಿಯಾ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ 97 ರನ್​ಗಳ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇದರ ನಂತರ ಏಕದಿನ ವಿಶ್ವಕಪ್‌ನಲ್ಲೂ ಅದೇ ಫಾರ್ಮ್ ಮುಂದುವರೆಸಿದ ರಾಹುಲ್, ಆಸ್ಟ್ರೇಲಿಯಾ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ 97 ರನ್​ಗಳ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 8
ಇದಾದ ಬಳಿಕ ರಾಹುಲ್ ನೆದರ್ಲೆಂಡ್ ವಿರುದ್ಧ ಶತಕ ಸಿಡಿಸಿದರು. ಪ್ರಸಕ್ತ ವಿಶ್ವಕಪ್‌ನ 11 ಪಂದ್ಯಗಳಲ್ಲಿ ಅವರು ಬರೋಬ್ಬರಿ 452 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

ಇದಾದ ಬಳಿಕ ರಾಹುಲ್ ನೆದರ್ಲೆಂಡ್ ವಿರುದ್ಧ ಶತಕ ಸಿಡಿಸಿದರು. ಪ್ರಸಕ್ತ ವಿಶ್ವಕಪ್‌ನ 11 ಪಂದ್ಯಗಳಲ್ಲಿ ಅವರು ಬರೋಬ್ಬರಿ 452 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

4 / 8
ಇದಲ್ಲದೆ ಈ ವಿಶ್ವಕಪ್‌ನಲ್ಲಿ ಭಾರತದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ರಾಹುಲ್, ಈ ಅವಧಿಯಲ್ಲಿ ವಿಕೆಟ್ ಹಿಂದೆ 17 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

ಇದಲ್ಲದೆ ಈ ವಿಶ್ವಕಪ್‌ನಲ್ಲಿ ಭಾರತದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ರಾಹುಲ್, ಈ ಅವಧಿಯಲ್ಲಿ ವಿಕೆಟ್ ಹಿಂದೆ 17 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

5 / 8
ರಾಹುಲ್​ಗೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. 2003ರ ಏಕದಿನ ವಿಶ್ವಕಪ್‌ನಲ್ಲಿ ದ್ರಾವಿಡ್ ವಿಕೆಟ್ ಕೀಪರ್ ಆಗಿ 16 ವಿಕೆಟ್ ಕಬಳಿಸಿದ್ದರು.

ರಾಹುಲ್​ಗೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. 2003ರ ಏಕದಿನ ವಿಶ್ವಕಪ್‌ನಲ್ಲಿ ದ್ರಾವಿಡ್ ವಿಕೆಟ್ ಕೀಪರ್ ಆಗಿ 16 ವಿಕೆಟ್ ಕಬಳಿಸಿದ್ದರು.

6 / 8
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2015ರ ಏಕದಿನ ವಿಶ್ವಕಪ್‌ನಲ್ಲಿ 15 ವಿಕೆಟ್ ಉರುಳಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಇದೀಗ ಧೋನಿ ಕೂಡ ಮಾಡದ ಸಾಧನೆಯನ್ನು ಕೆಎಲ್ ರಾಹುಲ್ ಮಾಡಿದ್ದು, ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2015ರ ಏಕದಿನ ವಿಶ್ವಕಪ್‌ನಲ್ಲಿ 15 ವಿಕೆಟ್ ಉರುಳಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಇದೀಗ ಧೋನಿ ಕೂಡ ಮಾಡದ ಸಾಧನೆಯನ್ನು ಕೆಎಲ್ ರಾಹುಲ್ ಮಾಡಿದ್ದು, ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

7 / 8
ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲೂ ನಿರ್ಣಾಯಕ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಕಲೆಹಾಕಿದರು. ಆದರೆ ರಾಹುಲ್​ಗೆ ತಮ್ಮ ಅರ್ಧಶತಕವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲೂ ನಿರ್ಣಾಯಕ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಕಲೆಹಾಕಿದರು. ಆದರೆ ರಾಹುಲ್​ಗೆ ತಮ್ಮ ಅರ್ಧಶತಕವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

8 / 8
Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!