AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ICC World Cup 2023: ಏಕದಿನ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Edited By: |

Updated on:Jul 18, 2023 | 8:31 PM

Share
ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ಮಹಾಕದನಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಇತ್ತ ಟೀಮ್ ಇಂಡಿಯಾ ಆಯ್ಕೆ ಸಮಿತಿ ಕೂಡ ತವರಿನಲ್ಲಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ತಯಾರಿಗಳನ್ನು ಆರಂಭಿಸಿದ್ದಾರೆ.

ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ಮಹಾಕದನಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಇತ್ತ ಟೀಮ್ ಇಂಡಿಯಾ ಆಯ್ಕೆ ಸಮಿತಿ ಕೂಡ ತವರಿನಲ್ಲಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ತಯಾರಿಗಳನ್ನು ಆರಂಭಿಸಿದ್ದಾರೆ.

1 / 9
ಇದರ ಮೊದಲ ಭಾಗವಾಗಿ ಇದೀಗ ಕಳೆದ ಕೆಲ ವರ್ಷಗಳಲ್ಲಿ ಏಕದಿನ ಕ್ರಿಕೆಟ್​​ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 47 ಆಟಗಾರರು ಕಾಣಿಸಿಕೊಂಡಿದ್ದಾರೆ.

ಇದರ ಮೊದಲ ಭಾಗವಾಗಿ ಇದೀಗ ಕಳೆದ ಕೆಲ ವರ್ಷಗಳಲ್ಲಿ ಏಕದಿನ ಕ್ರಿಕೆಟ್​​ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 47 ಆಟಗಾರರು ಕಾಣಿಸಿಕೊಂಡಿದ್ದಾರೆ.

2 / 9
ಅಂದರೆ 2019 ರ ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪರ ಇದುವರೆಗೆ ಒಟ್ಟು 47 ಆಟಗಾರರು ಕಣಕ್ಕಿಳಿದಿದ್ದಾರೆ. ಈ ಆಟಗಾರರಲ್ಲಿ ಎಲ್ಲಾ ರೀತಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದವರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

ಅಂದರೆ 2019 ರ ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪರ ಇದುವರೆಗೆ ಒಟ್ಟು 47 ಆಟಗಾರರು ಕಣಕ್ಕಿಳಿದಿದ್ದಾರೆ. ಈ ಆಟಗಾರರಲ್ಲಿ ಎಲ್ಲಾ ರೀತಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದವರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

3 / 9
ಅಂದರೆ ಒಟ್ಟು 47 ಆಟಗಾರರಲ್ಲಿ ಅಂತಿಮವಾಗಿ ಏಕದಿನ ವಿಶ್ವಕಪ್​ಗೆ ಆಯ್ಕೆಯಾಗುವುದು ಕೇವಲ 15 ಸದಸ್ಯರು ಮಾತ್ರ. ಉಳಿದ 32 ಆಟಗಾರರಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳ ಮೇಲೆ ಕಣ್ಣಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ.

ಅಂದರೆ ಒಟ್ಟು 47 ಆಟಗಾರರಲ್ಲಿ ಅಂತಿಮವಾಗಿ ಏಕದಿನ ವಿಶ್ವಕಪ್​ಗೆ ಆಯ್ಕೆಯಾಗುವುದು ಕೇವಲ 15 ಸದಸ್ಯರು ಮಾತ್ರ. ಉಳಿದ 32 ಆಟಗಾರರಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳ ಮೇಲೆ ಕಣ್ಣಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ.

4 / 9
ಇದಕ್ಕಾಗಿ ಈಗಾಗಲೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವೆಸ್ಟ್ ಇಂಡೀಸ್​ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅಲ್ಲಿ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಿ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರ ಶಾರ್ಟ್ ಲೀಸ್ಟ್ ಮಾಡುವ ಸಾಧ್ಯತೆಯಿದೆ.

ಇದಕ್ಕಾಗಿ ಈಗಾಗಲೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವೆಸ್ಟ್ ಇಂಡೀಸ್​ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅಲ್ಲಿ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಿ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರ ಶಾರ್ಟ್ ಲೀಸ್ಟ್ ಮಾಡುವ ಸಾಧ್ಯತೆಯಿದೆ.

5 / 9
ಈ ಶಾರ್ಟ್​ ಲೀಸ್ಟ್​ನಿಂದ ಅಂತಿಮವಾಗಿ 15 ಆಟಗಾರರನ್ನು ಏಕದಿನ ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುತ್ತದೆ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಅದರಂತೆ ಅಂತಿಮ 15 ರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಕಾದು ನೋಡಬೇಕಿದೆ.

ಈ ಶಾರ್ಟ್​ ಲೀಸ್ಟ್​ನಿಂದ ಅಂತಿಮವಾಗಿ 15 ಆಟಗಾರರನ್ನು ಏಕದಿನ ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುತ್ತದೆ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಅದರಂತೆ ಅಂತಿಮ 15 ರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಕಾದು ನೋಡಬೇಕಿದೆ.

6 / 9
ಆಯ್ಕೆಯೇ ದೊಡ್ಡ ಸವಾಲು: ಕಳೆದ ನಾಲ್ಕು ವರ್ಷಗಳಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದು ವಿರಾಟ್ ಕೊಹ್ಲಿ. 38 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ 5 ಶತಕ ಹಾಗೂ 11 ಅರ್ಧಶತಕಗಳೊಂದಿಗೆ ಒಟ್ಟು 1612 ರನ್ ಬಾರಿಸಿದ್ದಾರೆ. ಇಲ್ಲಿ ಕೊಹ್ಲಿಗೆ ಸ್ಥಾನ ಖಚಿತ ಎನ್ನಬಹುದು.

ಆಯ್ಕೆಯೇ ದೊಡ್ಡ ಸವಾಲು: ಕಳೆದ ನಾಲ್ಕು ವರ್ಷಗಳಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದು ವಿರಾಟ್ ಕೊಹ್ಲಿ. 38 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ 5 ಶತಕ ಹಾಗೂ 11 ಅರ್ಧಶತಕಗಳೊಂದಿಗೆ ಒಟ್ಟು 1612 ರನ್ ಬಾರಿಸಿದ್ದಾರೆ. ಇಲ್ಲಿ ಕೊಹ್ಲಿಗೆ ಸ್ಥಾನ ಖಚಿತ ಎನ್ನಬಹುದು.

7 / 9
ಆದರೆ ಮತ್ತೊಂದೆಡೆ ಕಳೆದ 4 ವರ್ಷಗಳಲ್ಲಿ ಶಿಖರ್ ಧವನ್ 37 ಏಕದಿನ ಪಂದ್ಯಗಳಲ್ಲಿ 1313 ರನ್​ಗಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಶಿಖರ್​ ಧವನ್​ಗೆ ಮಣೆ ಹಾಕಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.

ಆದರೆ ಮತ್ತೊಂದೆಡೆ ಕಳೆದ 4 ವರ್ಷಗಳಲ್ಲಿ ಶಿಖರ್ ಧವನ್ 37 ಏಕದಿನ ಪಂದ್ಯಗಳಲ್ಲಿ 1313 ರನ್​ಗಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಶಿಖರ್​ ಧವನ್​ಗೆ ಮಣೆ ಹಾಕಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.

8 / 9
ಈ ಎಲ್ಲಾ ಕಾರಣಗಳಿಂದಾಗಿ 47 ಆಟಗಾರರಿಂದ ಕೇವಲ 15 ಆಟಗಾರರನ್ನು ಆಯ್ಕೆ ಮಾಡುವುದೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಂದಿರುವ ದೊಡ್ಡ ಸವಾಲು.

ಈ ಎಲ್ಲಾ ಕಾರಣಗಳಿಂದಾಗಿ 47 ಆಟಗಾರರಿಂದ ಕೇವಲ 15 ಆಟಗಾರರನ್ನು ಆಯ್ಕೆ ಮಾಡುವುದೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಂದಿರುವ ದೊಡ್ಡ ಸವಾಲು.

9 / 9

Published On - 8:30 pm, Tue, 18 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ