AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs WI: ಸೋಲಿನೊಂದಿಗೆ ಏಕದಿನ ವಿಶ್ವಕಪ್​ಗೆ ವಿದಾಯ ಹೇಳಿದ ಕೆರಿಬಿಯನ್ ದೈತ್ಯರು..!

ICC World Cup Qualifier: ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು.

ಪೃಥ್ವಿಶಂಕರ
|

Updated on: Jul 08, 2023 | 8:38 AM

Share
ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

1 / 7
ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

2 / 7
ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

3 / 7
ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

4 / 7
ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5 / 7
ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

6 / 7
ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ