AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2023 Final: ಟೆಸ್ಟ್ ಚಾಂಪಿಯನ್​ಶಿಪ್ ಬಳಿಕ ನಿವೃತ್ತಿ ನೀಡಲಿದ್ದಾರೆ ಭಾರತದ ಈ ಸ್ಟಾರ್ ಪ್ಲೇಯರ್ಸ್

India vs Aus, WTC 2023 Final: ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆದಿದೆ. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಹೀಗಾಗಿ ಈ ನಾಲ್ಕು ಆಟಗಾರರು ಟೆಸ್ಟ್ ಚಾಂಪಿಯನ್​ಶಿಪ್ ಮುಗಿದ ಬಳಿಕ ನಿವೃತ್ತಿ ನೀಡುವ ಸಾಧ್ಯತೆ ಇದೆ.

Vinay Bhat
|

Updated on: Jun 04, 2023 | 10:40 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

1 / 7
ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

2 / 7
ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

3 / 7
ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

4 / 7
ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

5 / 7
ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

6 / 7
ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು