AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: ಭಾರತ ಕ್ರಿಕೆಟ್ ತಂಡಕ್ಕೆ ಇಂದು ನೋವಿನ ದಿನ: ಜುಲೈ 23 ರಂದು ನಡೆದಿದ್ದೇನು ನೋಡಿ

India vs New Zealand: ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ.

TV9 Web
| Updated By: Vinay Bhat

Updated on:Jun 23, 2022 | 8:42 AM

ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ. ರೋಚಕತೆಯಿಂದ ಕೂಡಿದ್ದ ಫೈನಲ್ ಕಾದಾಟದಲ್ಲಿ ಕೇನ್ ಪಡೆ ಭಾರತವನ್ನು ಸೋಲಿಸುವ ಮೂಲಕ ದೇಶದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ನೀಡಿದರು.

ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ. ರೋಚಕತೆಯಿಂದ ಕೂಡಿದ್ದ ಫೈನಲ್ ಕಾದಾಟದಲ್ಲಿ ಕೇನ್ ಪಡೆ ಭಾರತವನ್ನು ಸೋಲಿಸುವ ಮೂಲಕ ದೇಶದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ನೀಡಿದರು.

1 / 5
2020 ರಿಂದ ಆರಂಭವಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಹಲವು ಏರಿಳಿತಗಳನ್ನು ಕಂಡ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಂತಿಮವಾಗಿ ಫೈನಲ್ಗೆ ತಲುಪಿದವು. ಉಭಯ ತಂಡಗಳ ನಡುವಿನ ಈ ಪಂದ್ಯ ಸೌತಾಂಪ್ಟನ್ ನಲ್ಲಿ ನಡೆಯಿತು. ಟೀಮ್ ಇಂಡಿಯಾದ ನಾಯಕತ್ವ ವಿರಾಟ್ ಕೊಹ್ಲಿ ವಹಿಸಿದ್ದರೆ, ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ನಾಯಕತ್ವವನ್ನು ನಿಭಾಯಿಸಿದ್ದರು.

2020 ರಿಂದ ಆರಂಭವಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಹಲವು ಏರಿಳಿತಗಳನ್ನು ಕಂಡ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಂತಿಮವಾಗಿ ಫೈನಲ್ಗೆ ತಲುಪಿದವು. ಉಭಯ ತಂಡಗಳ ನಡುವಿನ ಈ ಪಂದ್ಯ ಸೌತಾಂಪ್ಟನ್ ನಲ್ಲಿ ನಡೆಯಿತು. ಟೀಮ್ ಇಂಡಿಯಾದ ನಾಯಕತ್ವ ವಿರಾಟ್ ಕೊಹ್ಲಿ ವಹಿಸಿದ್ದರೆ, ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ನಾಯಕತ್ವವನ್ನು ನಿಭಾಯಿಸಿದ್ದರು.

2 / 5
ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 217 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಭಾರತ ಪರ ಅಜಿಂಕ್ಯ ರಹಾನೆ ಗರಿಷ್ಠ 49 ರನ್ ಗಳಿಸಿದ್ದರು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಸಿತ್ತು.

ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 217 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಭಾರತ ಪರ ಅಜಿಂಕ್ಯ ರಹಾನೆ ಗರಿಷ್ಠ 49 ರನ್ ಗಳಿಸಿದ್ದರು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಸಿತ್ತು.

3 / 5
ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ನ್ಯೂಜಿಲೆಂಡ್ಗೆ ಗೆಲ್ಲಲು 139 ರನ್ಗಳ ಗುರಿಯನ್ನು ನೀಡಿತ್ತು, ಇದು ಕಿವೀಸ್ ತಂಡಕ್ಕೆ ಸವಾಲಾಗಿ ಪರಿಣಮಿಸಲಿಲ್ಲ. ಎರಡು ವಿಕೆಟ್ಗಳನ್ನು ಕಳೆದುಕೊಂಡ ಕೇನ್ ಪಡೆ ಸುಲಭವಾಗಿ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ 89 ಎಸೆತಗಳಲ್ಲಿ ಎಂಟು ಬೌಂಡರಿಗಳ ನೆರವಿನಿಂದ ಅಜೇಯ 52 ರನ್ ಗಳಿಸಿದರು. ರಾಸ್ ಟೇಲರ್ 100 ಎಸೆತಗಳಲ್ಲಿ ಆರು ಬೌಂಡರಿಗಳೊಂದಿಗೆ ಅಜೇಯ 47 ರನ್ ಗಳಿಸಿದರು.

ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ನ್ಯೂಜಿಲೆಂಡ್ಗೆ ಗೆಲ್ಲಲು 139 ರನ್ಗಳ ಗುರಿಯನ್ನು ನೀಡಿತ್ತು, ಇದು ಕಿವೀಸ್ ತಂಡಕ್ಕೆ ಸವಾಲಾಗಿ ಪರಿಣಮಿಸಲಿಲ್ಲ. ಎರಡು ವಿಕೆಟ್ಗಳನ್ನು ಕಳೆದುಕೊಂಡ ಕೇನ್ ಪಡೆ ಸುಲಭವಾಗಿ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ 89 ಎಸೆತಗಳಲ್ಲಿ ಎಂಟು ಬೌಂಡರಿಗಳ ನೆರವಿನಿಂದ ಅಜೇಯ 52 ರನ್ ಗಳಿಸಿದರು. ರಾಸ್ ಟೇಲರ್ 100 ಎಸೆತಗಳಲ್ಲಿ ಆರು ಬೌಂಡರಿಗಳೊಂದಿಗೆ ಅಜೇಯ 47 ರನ್ ಗಳಿಸಿದರು.

4 / 5
ಈ ಮೂಲಕ ಸುಮಾರು 21 ವರ್ಷಗಳ ನಂತರ ನ್ಯೂಜಿಲೆಂಡ್ ಮತ್ತೊಮ್ಮೆ ಐಸಿಸಿ ಟೂರ್ನಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ 2000 ದಲ್ಲಿ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದರು. ಆಗಲೂ ಅವರು ಫೈನಲ್ ನಲ್ಲಿಯೇ ಭಾರತವನ್ನು ಸೋಲಿಸಿದ್ದರು.

ಈ ಮೂಲಕ ಸುಮಾರು 21 ವರ್ಷಗಳ ನಂತರ ನ್ಯೂಜಿಲೆಂಡ್ ಮತ್ತೊಮ್ಮೆ ಐಸಿಸಿ ಟೂರ್ನಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ 2000 ದಲ್ಲಿ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದರು. ಆಗಲೂ ಅವರು ಫೈನಲ್ ನಲ್ಲಿಯೇ ಭಾರತವನ್ನು ಸೋಲಿಸಿದ್ದರು.

5 / 5

Published On - 8:42 am, Thu, 23 June 22

Follow us
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ